AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಂದ ಕರಾಳ ದಿನಾಚರಣೆ: ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ

ನಮ್ಮ ಪೂರ್ವಜರು ವಾಸಿಸುತ್ತಿದ್ದ ಮನೆಗಳು ಪಾಕಿಸ್ತಾನದಲ್ಲಿಯೇ ಉಳಿದು ಹೋಗಿವೆ. ನಮ್ಮ ಹಕ್ಕು ನಮಗೆ ಸಿಗಬೇಕು ಎಂದು ಆಗ್ರಹಿಸಿದರು.

ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಂದ ಕರಾಳ ದಿನಾಚರಣೆ: ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ
ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರು ಪ್ಯಾರೀಸ್ ಸೇರಿದಂತೆ ವಿವಿಧೆಡೆ ಪ್ರತಿಭಟಿಸಿದರು.
TV9 Web
| Edited By: |

Updated on:Oct 23, 2022 | 1:15 PM

Share

ಶ್ರೀನಗರ: ಭಾರತದಲ್ಲಿ ವಾಸಿಸುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ (Pakistan Occupied Kashmir – PoK) ನಿವಾಸಿಗಳು ಜಮ್ಮು ನಗರದಲ್ಲಿ ಪ್ರತಿಭಟನೆ ನಡೆಸಿ ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದರು. ಭುಜಗಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಬಂದಿದ್ದ ನಿರಾಶ್ರಿತರು ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ‘ಆವಾಜ್ ದೋ-ಹಮ್​ ಏಕ್ ಹೈ’ (ಧ್ವನಿ ಕೊಡಿ, ನಾವು ಒಂದು) ಮತ್ತು ‘ಚೀನ್​​ ಕೆ ಲೆಂಗೆ ಅಪ್ನಾ ಹಕ್’ (ನಮ್ಮ ಹಕ್ಕು ಪಡೆದುಕೊಳ್ಳುತ್ತೇವೆ) ಎಂದು ಘೋಷಣೆಗಳನ್ನು ಮೊಳಗಿಸಿದರು.

ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ನಿರಾಶ್ರಿತರು, ‘ನಮ್ಮ ಮನೆಗಳನ್ನು ಅಕ್ರಮವಾಗಿ ಕಿತ್ತುಕೊಳ್ಳಲಾಗಿದೆ. ಇಲ್ಲಿರುವ ನಾವೆಲ್ಲರೂ ನಮ್ಮ ಮನೆಗಳಿಗೆ ಹಿಂದಿರುಗಬೇಕೆಂಬ ಆಸೆ ಹೊಂದಿದ್ದೇವೆ. ನಮ್ಮ ಹುಟ್ಟೂರು ನೋಡಬೇಕು, ನಮ್ಮ ಮನೆಗಳನ್ನು ನೋಡಬೇಕೆಂಬ ಆಸೆ ನಮಗಿದೆ’ ಎಂದು ಅಳಲು ತೋಡಿಕೊಂಡರು.

1947ರಲ್ಲಿ ನಡೆದ ಜನಾಂಗೀಯ ಹತ್ಯಾಕಾಂಡವನ್ನು ನಿರಾಶ್ರಿತರೊಬ್ಬರು ನೆನಪಿಸಿಕೊಂಡು ಕಣ್ಣೀರಿಟ್ಟರು. ‘1947ರಲ್ಲಿ ನನಗೆ ಆರೂವರೆ ವರ್ಷ ವಯಸ್ಸು. ನಮ್ಮ ಕುಟುಂಬದ 28 ಮಂದಿಯನ್ನು ಸಾಲಾಗಿ ನಿಲ್ಲಿಸಿ ಕೊಲ್ಲಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ತಮ್ಮೊಂದಿಗೆ ಒತ್ತಾಯದಿಂದ ಕರೆದೊಯ್ದರು. ನಾವು 1952ರಲ್ಲಿ ಇಲ್ಲಿಗೆ ಬಂದೆವು. ಸರ್ಕಾರವು ಏನಾದರೂ ಮಾಡಿದರೆ ಮತ್ತೆ ನಮ್ಮ ಮನೆಗಳಿಗೆ ಹೋಗಲು ತಯಾರಿದ್ದೇವೆ’ ಎಂದು ಹೇಳಿದರು.

ಭಾರತ ಸರ್ಕಾರವು ರಾಜತಾಂತ್ರಿಕ ಅಥವಾ ಸೇನಾ ಕಾರ್ಯಾಚರಣೆಯ ಮೂಲಕ ನಮಗೆ ನ್ಯಾಯ ಒದಗಿಸಲು ಮುಂದಾಗಬೇಕು. ನಮ್ಮ ಪೂರ್ವಜರು ವಾಸಿಸುತ್ತಿದ್ದ ಮನೆಗಳು ಪಾಕಿಸ್ತಾನದಲ್ಲಿಯೇ ಉಳಿದು ಹೋಗಿವೆ. ನಮ್ಮ ಹಕ್ಕು ನಮಗೆ ಸಿಗಬೇಕು ಎಂದು ಆಗ್ರಹಿಸಿದರು. 1947ರಲ್ಲಿ ಪಾಕಿಸ್ತಾನವು ಜಮ್ಮು ಕಾಶ್ಮೀರದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸಾವಿರಾರು ಹಿಂದೂಗಳು ಮತ್ತು ಸಿಖ್ಖರು ದೇಶಭ್ರಷ್ಟರಾಗಬೇಕಾಯಿತು. ಮೀರ್​ಪುರ್, ಮುಝಾಫರ್​ಬಾದ್, ಕೊಟ್ಲಿ ಮತ್ತಿತರ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಹಿಂದೂ ಮತ್ತು ಸಿಖ್ಖರನ್ನು ಹುಡುಕಿ ಕೊಲ್ಲಲಾಯಿತು.

Published On - 1:10 pm, Sun, 23 October 22

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು