AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಂದ ಕರಾಳ ದಿನಾಚರಣೆ: ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ

ನಮ್ಮ ಪೂರ್ವಜರು ವಾಸಿಸುತ್ತಿದ್ದ ಮನೆಗಳು ಪಾಕಿಸ್ತಾನದಲ್ಲಿಯೇ ಉಳಿದು ಹೋಗಿವೆ. ನಮ್ಮ ಹಕ್ಕು ನಮಗೆ ಸಿಗಬೇಕು ಎಂದು ಆಗ್ರಹಿಸಿದರು.

ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಂದ ಕರಾಳ ದಿನಾಚರಣೆ: ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ
ಪಾಕ್ ಆಕ್ರಮಿತ ಕಾಶ್ಮೀರದ ನಿರಾಶ್ರಿತರು ಪ್ಯಾರೀಸ್ ಸೇರಿದಂತೆ ವಿವಿಧೆಡೆ ಪ್ರತಿಭಟಿಸಿದರು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 23, 2022 | 1:15 PM

Share

ಶ್ರೀನಗರ: ಭಾರತದಲ್ಲಿ ವಾಸಿಸುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ (Pakistan Occupied Kashmir – PoK) ನಿವಾಸಿಗಳು ಜಮ್ಮು ನಗರದಲ್ಲಿ ಪ್ರತಿಭಟನೆ ನಡೆಸಿ ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದರು. ಭುಜಗಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಬಂದಿದ್ದ ನಿರಾಶ್ರಿತರು ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ‘ಆವಾಜ್ ದೋ-ಹಮ್​ ಏಕ್ ಹೈ’ (ಧ್ವನಿ ಕೊಡಿ, ನಾವು ಒಂದು) ಮತ್ತು ‘ಚೀನ್​​ ಕೆ ಲೆಂಗೆ ಅಪ್ನಾ ಹಕ್’ (ನಮ್ಮ ಹಕ್ಕು ಪಡೆದುಕೊಳ್ಳುತ್ತೇವೆ) ಎಂದು ಘೋಷಣೆಗಳನ್ನು ಮೊಳಗಿಸಿದರು.

ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ನಿರಾಶ್ರಿತರು, ‘ನಮ್ಮ ಮನೆಗಳನ್ನು ಅಕ್ರಮವಾಗಿ ಕಿತ್ತುಕೊಳ್ಳಲಾಗಿದೆ. ಇಲ್ಲಿರುವ ನಾವೆಲ್ಲರೂ ನಮ್ಮ ಮನೆಗಳಿಗೆ ಹಿಂದಿರುಗಬೇಕೆಂಬ ಆಸೆ ಹೊಂದಿದ್ದೇವೆ. ನಮ್ಮ ಹುಟ್ಟೂರು ನೋಡಬೇಕು, ನಮ್ಮ ಮನೆಗಳನ್ನು ನೋಡಬೇಕೆಂಬ ಆಸೆ ನಮಗಿದೆ’ ಎಂದು ಅಳಲು ತೋಡಿಕೊಂಡರು.

1947ರಲ್ಲಿ ನಡೆದ ಜನಾಂಗೀಯ ಹತ್ಯಾಕಾಂಡವನ್ನು ನಿರಾಶ್ರಿತರೊಬ್ಬರು ನೆನಪಿಸಿಕೊಂಡು ಕಣ್ಣೀರಿಟ್ಟರು. ‘1947ರಲ್ಲಿ ನನಗೆ ಆರೂವರೆ ವರ್ಷ ವಯಸ್ಸು. ನಮ್ಮ ಕುಟುಂಬದ 28 ಮಂದಿಯನ್ನು ಸಾಲಾಗಿ ನಿಲ್ಲಿಸಿ ಕೊಲ್ಲಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ತಮ್ಮೊಂದಿಗೆ ಒತ್ತಾಯದಿಂದ ಕರೆದೊಯ್ದರು. ನಾವು 1952ರಲ್ಲಿ ಇಲ್ಲಿಗೆ ಬಂದೆವು. ಸರ್ಕಾರವು ಏನಾದರೂ ಮಾಡಿದರೆ ಮತ್ತೆ ನಮ್ಮ ಮನೆಗಳಿಗೆ ಹೋಗಲು ತಯಾರಿದ್ದೇವೆ’ ಎಂದು ಹೇಳಿದರು.

ಭಾರತ ಸರ್ಕಾರವು ರಾಜತಾಂತ್ರಿಕ ಅಥವಾ ಸೇನಾ ಕಾರ್ಯಾಚರಣೆಯ ಮೂಲಕ ನಮಗೆ ನ್ಯಾಯ ಒದಗಿಸಲು ಮುಂದಾಗಬೇಕು. ನಮ್ಮ ಪೂರ್ವಜರು ವಾಸಿಸುತ್ತಿದ್ದ ಮನೆಗಳು ಪಾಕಿಸ್ತಾನದಲ್ಲಿಯೇ ಉಳಿದು ಹೋಗಿವೆ. ನಮ್ಮ ಹಕ್ಕು ನಮಗೆ ಸಿಗಬೇಕು ಎಂದು ಆಗ್ರಹಿಸಿದರು. 1947ರಲ್ಲಿ ಪಾಕಿಸ್ತಾನವು ಜಮ್ಮು ಕಾಶ್ಮೀರದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸಾವಿರಾರು ಹಿಂದೂಗಳು ಮತ್ತು ಸಿಖ್ಖರು ದೇಶಭ್ರಷ್ಟರಾಗಬೇಕಾಯಿತು. ಮೀರ್​ಪುರ್, ಮುಝಾಫರ್​ಬಾದ್, ಕೊಟ್ಲಿ ಮತ್ತಿತರ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಹಿಂದೂ ಮತ್ತು ಸಿಖ್ಖರನ್ನು ಹುಡುಕಿ ಕೊಲ್ಲಲಾಯಿತು.

Published On - 1:10 pm, Sun, 23 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ