AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕದಲ್ಲಿದ್ದು, ಮದುವೆ ನಿರಾಕರಿಸಿ ಜೈಲು ಸೇರಿದ್ದವನನ್ನು ದೋಷಮುಕ್ತ ಗೊಳಿಸಿದ ಬಾಂಬೆ ಹೈಕೋರ್ಟ್​; ನ್ಯಾಯಾಧೀಶರು ಹೇಳಿದ್ದೇನು?

ಈ ಮಹಿಳೆ 1996ರಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ. ಹೀಗೆ ನನ್ನೊಂದಿಗೆ ದೈಹಿಕ ಸಂಪರ್ಕವನ್ನೂ ಬೆಳೆಸಿದ. ಆದರೆ ನಂತರ ವಿವಾಹವಾಗಲು ಒಪ್ಪಲಿಲ್ಲ ಎಂದು ಆಕೆ ದೂರಿನಲ್ಲಿ ಹೇಳಿದ್ದಳು.

ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕದಲ್ಲಿದ್ದು, ಮದುವೆ ನಿರಾಕರಿಸಿ ಜೈಲು ಸೇರಿದ್ದವನನ್ನು ದೋಷಮುಕ್ತ ಗೊಳಿಸಿದ ಬಾಂಬೆ ಹೈಕೋರ್ಟ್​; ನ್ಯಾಯಾಧೀಶರು ಹೇಳಿದ್ದೇನು?
ಬಾಂಬೆ ಹೈಕೋರ್ಟ್
TV9 Web
| Updated By: Lakshmi Hegde|

Updated on: Dec 23, 2021 | 3:20 PM

Share

ಮಹಿಳೆಯೊಬ್ಬಳನ್ನು ಮದುವೆಯಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಮದುವೆಯಾಗದೆ ವಂಚಿಸಿದ್ದ ಆರೋಪದಡಿ ಜೈಲು ಸೇರಿದ್ದ ವ್ಯಕ್ತಿಯನ್ನು 25ವರ್ಷಗಳ ನಂತರ ಬಿಡುಗಡೆ ಮಾಡಲಾಗಿದೆ. ಈತ ಮೂಲತಃ ಪಾಲ್ಘಾರ್​ನವನಾಗಿದ್ದು, ಬಾಂಬೆ ಹೈಕೋರ್ಟ್ ಈಗ ಆತನನ್ನು ದೋಷಮುಕ್ತಗೊಳಿಸಿದೆ.  ಕೇವಲ ಮದುವೆಯನ್ನು ನಿರಾಕರಿಸುವುದು ಐಪಿಸಿ ಸೆಕ್ಷನ್​ 417ರ ಪ್ರಕಾರ ಅಪರಾಧವಲ್ಲ. ಆತ ಮದುವೆಯಾಗುತ್ತೇನೆ ಎಂದು ಹೇಳಿದ್ದಕ್ಕೇ ಮಹಿಳೆ ದೈಹಿಕ ಸಂಬಂಧ ಬೆಳೆಸಲು ಒಪ್ಪಿಕೊಂಡರು ಎಂಬುದಕ್ಕೆ ಸಾಕ್ಷಿಯಿಲ್ಲ ಎಂದು ಬಾಂಬೆ ಹೈಕೋರ್ಟ್​ ತೀರ್ಪು ನೀಡುವಾಗ ಉಲ್ಲೇಖಿಸಿದೆ. 

ಈ ಮಹಿಳೆ 1996ರಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ. ಹೀಗೆ ನನ್ನೊಂದಿಗೆ ದೈಹಿಕ ಸಂಪರ್ಕವನ್ನೂ ಬೆಳೆಸಿದ. ಆದರೆ 4 ವರ್ಷಗಳ ನಂತರ ಈಗ ವಿವಾಹವಾಗಲು ಒಪ್ಪುತ್ತಿಲ್ಲ ಎಂದು ಆಕೆ ದೂರಿನಲ್ಲಿ ಹೇಳಿದ್ದಳು. ನಂತರ ಪೊಲೀಸರು ಸೆಕ್ಷನ್​ 376 (ಅತ್ಯಾಚಾರ) ಮತ್ತು ಸೆಕ್ಷನ್​ 417 (ವಂಚನೆ)ರಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಆರೋಪಿ ಇದೆಲ್ಲ ಸುಳ್ಳು ಎಂದೇ ಹೇಳುತ್ತಿದ್ದ.  ಮೊದಲು ಈ ಪ್ರಕರಣದ ವಿಚಾರಣೆ ಪಾಲ್ಘಾರ್​ ಹೆಚ್ಚುವರಿ ಸೆಷನ್ಸ್​ ಕೋರ್ಟ್​​ನಲ್ಲಿ ನಡೆಯಿತು. ಅಲ್ಲಿ ಆ ವ್ಯಕ್ತಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಯಿತು.

ನಂತರ ಪ್ರಕರಣ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿತು. ನ್ಯಾಯಮೂರ್ತಿ ಪ್ರಭು ದೇಸಾಯಿ ಇದರ ವಿಚಾರಣೆ ನಡೆಸಿದ್ದಾರೆ.  ಈ ಮಧ್ಯೆ ಮಹಿಳೆಯ ಸಹೋದರಿಯೂ ಕೋರ್ಟ್​ಗೆ ಬಂದು ಸಾಕ್ಷಿ ಹೇಳಿದ್ದಳು. ಇಬ್ಬರ ಮಧ್ಯೆ ಲವ್​ ಅಫೇರ್ ಇತ್ತು ಎಂದು ಹೇಳಿದ್ದರು. ಆದರೆ ಜಡ್ಜ್ ಪ್ರಭು ದೇಸಾಯಿ, ಮಹಿಳೆಯ ಬಳಿ ದಾಖಲೆ ಇದೆ. ಆದರೆ ಆ ಪುರುಷ ಪ್ರಾರಂಭದಿಂದಲೂ ಆಕೆಯನ್ನು ಮದುವೆಯಾಗಬಾರದು ಎಂಬ ಉದ್ದೇಶವನ್ನಿಟ್ಟುಕೊಂಡಿದ್ದ. ಹಾಗಿದ್ದಾಗ್ಯೂ ಲೈಂಗಿಕ ಸಂಪರ್ಕ ಬೆಳೆಸಿದ್ದ ಎಂಬುದಕ್ಕೆ ಅದರಲ್ಲಿ ಪುರಾವೆಗಳೇ ಇಲ್ಲ ಎಂದು ಹೇಳಿದ್ದಾರೆ. ಹಾಗೇ, ಸೆಷನ್ಸ್​ ಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿ, ಆರೋಪಿಯನ್ನು ದೋಷಮುಕ್ತಗೊಳಿಸಿದ್ದಾರೆ.

ಇದನ್ನೂ ಓದಿ: GAIL: ಗೇಲ್​ನಿಂದ ಪ್ರತಿ ಷೇರಿಗೆ ರೂ. 4ರ ಮಧ್ಯಂತರ ಲಾಭಾಂಶ ಘೋಷಣೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ