AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕದಲ್ಲಿದ್ದು, ಮದುವೆ ನಿರಾಕರಿಸಿ ಜೈಲು ಸೇರಿದ್ದವನನ್ನು ದೋಷಮುಕ್ತ ಗೊಳಿಸಿದ ಬಾಂಬೆ ಹೈಕೋರ್ಟ್​; ನ್ಯಾಯಾಧೀಶರು ಹೇಳಿದ್ದೇನು?

ಈ ಮಹಿಳೆ 1996ರಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ. ಹೀಗೆ ನನ್ನೊಂದಿಗೆ ದೈಹಿಕ ಸಂಪರ್ಕವನ್ನೂ ಬೆಳೆಸಿದ. ಆದರೆ ನಂತರ ವಿವಾಹವಾಗಲು ಒಪ್ಪಲಿಲ್ಲ ಎಂದು ಆಕೆ ದೂರಿನಲ್ಲಿ ಹೇಳಿದ್ದಳು.

ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕದಲ್ಲಿದ್ದು, ಮದುವೆ ನಿರಾಕರಿಸಿ ಜೈಲು ಸೇರಿದ್ದವನನ್ನು ದೋಷಮುಕ್ತ ಗೊಳಿಸಿದ ಬಾಂಬೆ ಹೈಕೋರ್ಟ್​; ನ್ಯಾಯಾಧೀಶರು ಹೇಳಿದ್ದೇನು?
ಬಾಂಬೆ ಹೈಕೋರ್ಟ್
TV9 Web
| Edited By: |

Updated on: Dec 23, 2021 | 3:20 PM

Share

ಮಹಿಳೆಯೊಬ್ಬಳನ್ನು ಮದುವೆಯಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಮದುವೆಯಾಗದೆ ವಂಚಿಸಿದ್ದ ಆರೋಪದಡಿ ಜೈಲು ಸೇರಿದ್ದ ವ್ಯಕ್ತಿಯನ್ನು 25ವರ್ಷಗಳ ನಂತರ ಬಿಡುಗಡೆ ಮಾಡಲಾಗಿದೆ. ಈತ ಮೂಲತಃ ಪಾಲ್ಘಾರ್​ನವನಾಗಿದ್ದು, ಬಾಂಬೆ ಹೈಕೋರ್ಟ್ ಈಗ ಆತನನ್ನು ದೋಷಮುಕ್ತಗೊಳಿಸಿದೆ.  ಕೇವಲ ಮದುವೆಯನ್ನು ನಿರಾಕರಿಸುವುದು ಐಪಿಸಿ ಸೆಕ್ಷನ್​ 417ರ ಪ್ರಕಾರ ಅಪರಾಧವಲ್ಲ. ಆತ ಮದುವೆಯಾಗುತ್ತೇನೆ ಎಂದು ಹೇಳಿದ್ದಕ್ಕೇ ಮಹಿಳೆ ದೈಹಿಕ ಸಂಬಂಧ ಬೆಳೆಸಲು ಒಪ್ಪಿಕೊಂಡರು ಎಂಬುದಕ್ಕೆ ಸಾಕ್ಷಿಯಿಲ್ಲ ಎಂದು ಬಾಂಬೆ ಹೈಕೋರ್ಟ್​ ತೀರ್ಪು ನೀಡುವಾಗ ಉಲ್ಲೇಖಿಸಿದೆ. 

ಈ ಮಹಿಳೆ 1996ರಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ. ಹೀಗೆ ನನ್ನೊಂದಿಗೆ ದೈಹಿಕ ಸಂಪರ್ಕವನ್ನೂ ಬೆಳೆಸಿದ. ಆದರೆ 4 ವರ್ಷಗಳ ನಂತರ ಈಗ ವಿವಾಹವಾಗಲು ಒಪ್ಪುತ್ತಿಲ್ಲ ಎಂದು ಆಕೆ ದೂರಿನಲ್ಲಿ ಹೇಳಿದ್ದಳು. ನಂತರ ಪೊಲೀಸರು ಸೆಕ್ಷನ್​ 376 (ಅತ್ಯಾಚಾರ) ಮತ್ತು ಸೆಕ್ಷನ್​ 417 (ವಂಚನೆ)ರಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಆರೋಪಿ ಇದೆಲ್ಲ ಸುಳ್ಳು ಎಂದೇ ಹೇಳುತ್ತಿದ್ದ.  ಮೊದಲು ಈ ಪ್ರಕರಣದ ವಿಚಾರಣೆ ಪಾಲ್ಘಾರ್​ ಹೆಚ್ಚುವರಿ ಸೆಷನ್ಸ್​ ಕೋರ್ಟ್​​ನಲ್ಲಿ ನಡೆಯಿತು. ಅಲ್ಲಿ ಆ ವ್ಯಕ್ತಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಯಿತು.

ನಂತರ ಪ್ರಕರಣ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿತು. ನ್ಯಾಯಮೂರ್ತಿ ಪ್ರಭು ದೇಸಾಯಿ ಇದರ ವಿಚಾರಣೆ ನಡೆಸಿದ್ದಾರೆ.  ಈ ಮಧ್ಯೆ ಮಹಿಳೆಯ ಸಹೋದರಿಯೂ ಕೋರ್ಟ್​ಗೆ ಬಂದು ಸಾಕ್ಷಿ ಹೇಳಿದ್ದಳು. ಇಬ್ಬರ ಮಧ್ಯೆ ಲವ್​ ಅಫೇರ್ ಇತ್ತು ಎಂದು ಹೇಳಿದ್ದರು. ಆದರೆ ಜಡ್ಜ್ ಪ್ರಭು ದೇಸಾಯಿ, ಮಹಿಳೆಯ ಬಳಿ ದಾಖಲೆ ಇದೆ. ಆದರೆ ಆ ಪುರುಷ ಪ್ರಾರಂಭದಿಂದಲೂ ಆಕೆಯನ್ನು ಮದುವೆಯಾಗಬಾರದು ಎಂಬ ಉದ್ದೇಶವನ್ನಿಟ್ಟುಕೊಂಡಿದ್ದ. ಹಾಗಿದ್ದಾಗ್ಯೂ ಲೈಂಗಿಕ ಸಂಪರ್ಕ ಬೆಳೆಸಿದ್ದ ಎಂಬುದಕ್ಕೆ ಅದರಲ್ಲಿ ಪುರಾವೆಗಳೇ ಇಲ್ಲ ಎಂದು ಹೇಳಿದ್ದಾರೆ. ಹಾಗೇ, ಸೆಷನ್ಸ್​ ಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿ, ಆರೋಪಿಯನ್ನು ದೋಷಮುಕ್ತಗೊಳಿಸಿದ್ದಾರೆ.

ಇದನ್ನೂ ಓದಿ: GAIL: ಗೇಲ್​ನಿಂದ ಪ್ರತಿ ಷೇರಿಗೆ ರೂ. 4ರ ಮಧ್ಯಂತರ ಲಾಭಾಂಶ ಘೋಷಣೆ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್