ಕರ್ನಾಟಕದ ಹಿಜಾಬ್​ ವಿವಾದಕ್ಕೆ ಪಾಕಿಸ್ತಾನಿ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​​ ಪ್ರತಿಕ್ರಿಯೆ; ಭಯಾನಕ ಎಂದು ಟ್ವೀಟ್​

ಮಲಾಲಾ ಯೂಸುಫ್​ 1997ರಲ್ಲಿ ಪಾಕಿಸ್ತಾನದ ಮಿಂಗೋರಾ ಎಂಬಲ್ಲಿ ಜನಿಸಿದ್ದಾರೆ. ತಮ್ಮ ಚಿಕ್ಕವಯಸ್ಸಿನಿಂದಲೇ ಹೆಣ್ಣುಮಕ್ಕಳ ಶಿಕ್ಷಣ, ವಿದ್ಯಾಭ್ಯಾಸದ ಹಕ್ಕನ್ನು ಪ್ರತಿಪಾದಿಸುತ್ತ ಬಂದಿದ್ದಾರೆ.

ಕರ್ನಾಟಕದ ಹಿಜಾಬ್​ ವಿವಾದಕ್ಕೆ ಪಾಕಿಸ್ತಾನಿ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​​ ಪ್ರತಿಕ್ರಿಯೆ; ಭಯಾನಕ ಎಂದು ಟ್ವೀಟ್​
ಮಲಾಲಾ ಯೂಸುಫ್​
Follow us
| Updated By: Lakshmi Hegde

Updated on: Feb 09, 2022 | 8:04 AM

ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ, ನೊಬೆಲ್​ ಪ್ರಶಸ್ತಿ ಪುರಸ್ಕೃತೆ ಪಾಕಿಸ್ತಾನದ ಮಲಾಲಾ ಯೂಸುಫ್​ ಝಾಯಿ(Malala Yousafzai) ಕೂಡ ಕರ್ನಾಟಕದ ಹಿಜಾಬ್​ ವಿವಾದದ (Hijab Controversy) ಬಗ್ಗೆ ಮಾತನಾಡಿದ್ದಾರೆ. ಸದ್ಯ ಕರ್ನಾಟಕದಲ್ಲಿ ಹಿಜಾಬ್​-ಕೇಸರಿ ಶಾಲು ತಾರಕಕ್ಕೇರಿದೆ. ಕಾಲೇಜು ಕ್ಯಾಂಪಸ್​ ಒಳಗೆ, ಕ್ಲಾಸ್​ರೂಮ್​​​ನೊಳಗೆ ಹಿಜಾಬ್​ ಹಾಕಿಕೊಂಡು ಬರಬೇಡಿ ಎಂದು ಹೇಳಿದ್ದಕ್ಕೆ ಮುಸ್ಲಿಂ ಹುಡುಗಿಯರು ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಹಿಂದೂ ಸಮುದಾಯದವರು ಕೇಸರಿಶಾಲು ಹಾಕಿಕೊಂಡು ಬರುತ್ತಿದ್ದಾರೆ. ಅವರು ಕ್ಲಾಸ್​​ರೂಂನಲ್ಲೂ ಧರ್ಮಾಚರಣೆ ಮಾಡುತ್ತಾರೆ ಎಂದಾದರೆ, ನಾವೂ ನಮ್ಮ ಧರ್ಮಾಚರಣೆ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಿನಲ್ಲಿ ಇದೀಗ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹಿಜಾಬ್​-ಕೇಸರಿಶಾಲು ವಿವಾದ ತಾರಕಕ್ಕೇರಿದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಲಾಲಾ ಯೂಸುಫ್​, ಹಿಜಾಬ್​ ಅಥವಾ ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ. ಹಿಜಾಬ್ ಧರಿಸಿಬಂದಿದ್ದಾರೆ ಎಂಬ ಕಾರಣಕ್ಕೆ ಹೆಣ್ಣುಮಕ್ಕಳನ್ನು ಕ್ಲಾಸ್​ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕ. ಹುಡುಗಿಯರು ಹೆಚ್ಚು ಬಟ್ಟೆ ಧರಿಸುವುದಕ್ಕೆ ಮತ್ತು ಕಡಿಮೆ ಬಟ್ಟೆ ಧರಿಸುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸುವುದು ಯಾವಾಗಿನಿಂದಲೂ ಇದ್ದೇಇದೆ. ಆದರೆ ಹಿಜಾಬ್​​ ಧರಿಸಿ ಬರುತ್ತಾರೆಂದು ಮುಸ್ಲಿಂ ಮಹಿಳೆಯರನ್ನು ತುಚ್ಛವಾಗಿ ಕಾಣಬಾರದು ಎಂದು ಹೇಳಿದ್ದಾರೆ.

ಮಲಾಲಾ ಯೂಸುಫ್​ 1997ರಲ್ಲಿ ಪಾಕಿಸ್ತಾನದ ಮಿಂಗೋರಾ ಎಂಬಲ್ಲಿ ಜನಿಸಿದ್ದಾರೆ. ತಮ್ಮ ಚಿಕ್ಕವಯಸ್ಸಿನಿಂದಲೇ ಹೆಣ್ಣುಮಕ್ಕಳ ಶಿಕ್ಷಣ, ವಿದ್ಯಾಭ್ಯಾಸದ ಹಕ್ಕನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಹೆಣ್ಣುಮಕ್ಕಳ ಶಿಕ್ಷಣದ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. 2012ರಲ್ಲಿ ಅಂದರೆ ಅವರಿಗೆ ಕೇವಲ 11ವರ್ಷವಾಗಿದ್ದಾಗ ಒಮ್ಮೆ ಸಾರ್ವಜನಿಕವಾಗಿ ಹೆಣ್ಣುಮಕ್ಕಳ ಶಿಕ್ಷಣ ಹಕ್ಕಿನ ಬಗ್ಗೆ ಮಾತನಾಡುತ್ತಿದ್ದರು. ಆಗ ಅವರಿಗೆ ತಾಲಿಬಾನ್​ ಉಗ್ರರು ಗುಂಡು ಹೊಡೆದಿದ್ದರು. ತಾಲಿಬಾನಿಗಳು ಮೊದಲಿನಿಂದಲೂ ಹೆಣ್ಣುಮಕ್ಕಳು ಶಿಕ್ಷಣ ಕಲಿಯುವುದನ್ನು ವಿರೋಧಿಸುತ್ತಲೇ ಇದ್ದಾರೆ. ಅಂಥ ತಾಲಿಬಾನಿಗಳ ಕ್ರೌರ್ಯಕ್ಕೂ ಹೆದರದೆ ಮಲಾಲಾ ನಿರ್ಭಿಡೆಯಿಂದ ಮಾತನಾಡಿದ್ದರು. ಅಂದು ಗುಂಡೇಟಿನಿಂದ ಗಾಯಗೊಂಡಿದ್ದ ಮಲಾಲಾರನ್ನು ಬರ್ಮಿಂಗ್​ಹ್ಯಾಂ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಗುಣಮುಖರಾದ ಬಳಿಕ ಕೂಡ ಅವರು ಹೆಣ್ಣುಮಕ್ಕಳ ಶಿಕ್ಷಣದ ಬಗೆಗಿನ ಹೋರಾಟವನ್ನೇ ಮುಂದುವರಿಸಿದ್ದಾರೆ.  ಅದಾದ ಬಳಿಕ ಯುಕೆಯಲ್ಲಿಯೇ ವಾಸಿಸುತ್ತಿದ್ದರು

ಇದನ್ನೂ ಓದಿ: ಹಿಜಾಬ್​​ ಹೆಸರಲ್ಲಿ ದೇಶದ ಪುತ್ರಿಯರ ಭವಿಷ್ಯವನ್ನೇ ಲೂಟಿ ಮಾಡಲಾಗುತ್ತಿದೆ; ಉಡುಪಿ ಕಾಲೇಜು ವಿವಾದದಲ್ಲಿ ಕಾಲಿಟ್ಟ ರಾಹುಲ್ ಗಾಂಧಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ