AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು

ಕೊವಿಡ್​ 19 ಲಸಿಕೆಗಳ ಮಾರುಕಟ್ಟೆ ಬಳಕೆಗೆ ಅನುಮತಿ ನೀಡಬೇಕು ಎಂದು ಸೀರಮ್​ ಇನ್​ಸ್ಟಿಟ್ಯೂಟ್​ ಮತ್ತು ಭಾರತ್​ ಬಯೋಟೆಕ್​ ಎರಡೂ ಕಂಪನಿಗಳು ಎರಡನೇ ಬಾರಿ ಸಿಡಿಎಸ್​ಸಿಒದ ವಿಷಯ ತಜ್ಞರ ಸಮಿತಿಗೆ ಅರ್ಜಿ ಸಲ್ಲಿಸಿದ್ದವು.

ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು
ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​
TV9 Web
| Edited By: |

Updated on: Jan 20, 2022 | 8:16 AM

Share

ತುರ್ತು ಪರಿಸ್ಥಿತಿಯಲ್ಲಿ  ಷರತ್ತುಬದ್ಧ ಅನುಮತಿ ಪಡೆದಿರುವ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳಿಗೆ ಸಂಪೂರ್ಣವಾಗಿ ನಿಯಮಿತ ಮಾರುಕಟ್ಟೆ ಬಳಕೆಗೆ ಅನುಮೋದನೆ ನೀಡುವಂತೆ ಭಾರತದ ಔಷಧ ನಿಯಂತ್ರಕರ ವಿಷಯ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಲಸಿಕೆಗಳಿಗೆ ಮಾರುಕಟ್ಟೆ ದೃಢೀಕರಣ ಸಿಕ್ಕರೆ, ಅವು ಔಷಧ ಮಾರುಕಟ್ಟೆಯಲ್ಲಿ ಸಿಗಲಿವೆ. ಸೀರಂ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​  ಲಸಿಕೆಗಳ ಸ್ಥಿತಿಯನ್ನು ಅಪ್​ಗ್ರೇಡ್ ಮಾಡಬೇಕು ಅಂದರೆ, ಸದ್ಯ ಅವುಗಳನ್ನು ತುರ್ತುಸಂದರ್ಭದಲ್ಲಿ ವಯಸ್ಕರಿಗೆ ಷರತ್ತುಬದ್ಧವಾಗಿ, ನಿಯಂತ್ರಿತವಾಗಿ ನೀಡಲಾಗುತ್ತಿದೆ.  ಈ ತುರ್ತು ಪರಿಸ್ಥಿತಿಯಲ್ಲಿ ನಿಯಂತ್ರಿತ ಬಳಕೆ ಎಂಬ ಲೇಬಲ್​ ತೆಗೆದುಹಾಕಿ, ಮಾರುಕಟ್ಟೆ ಬಳಕೆಗೆ ಅನುಮೋದನೆ ನೀಡಬೇಕು ಎಂದು ಡ್ರಗ್ಸ್​ ಕಂಟ್ರೋಲರ್ ಜನರಲ್​​ ಆಫ್​ ಇಂಡಿಯಾ(ಡಿಸಿಜಿಐ)ಕ್ಕೆ ವಿಷಯ ತಜ್ಞರ ಸಮಿತಿ ಸಲಹೆ ನೀಡಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್​ಸಿಒ), ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳ ಸ್ಥಿತಿಯನ್ನು ನವೀಕರಿಸಿ, ಅವುಗಳಿಗೆ ಮಾರುಕಟ್ಟೆ ಬಳಕೆ ಅನುಮತಿ ನೀಡಬೇಕು ಎಂದು ಸಿಡಿಎಸ್​ಸಿಒದ ವಿಷಯ ತಜ್ಞರ ಸಮಿತಿ ಡಿಸಿಜಿಐಗೆ ಶಿಫಾರಸ್ಸು ಮಾಡಿದೆ. ಶಿಫಾರಸ್ಸನ್ನು ಡಿಸಿಜಿಐ ಮೌಲ್ಯಮಾಪನ ಮಾಡಲಿದ್ದು, ನಂತರ ನಿರ್ಧಾರ ಪ್ರಕಟಿಸಲಿದೆ ಎಂದು  ಹೇಳಿದೆ. ತಮ್ಮ ಕೊವಿಡ್​ 19 ಲಸಿಕೆಗಳ ಮಾರುಕಟ್ಟೆ ಬಳಕೆಗೆ ಅನುಮತಿ ನೀಡಬೇಕು ಎಂದು ಸೀರಮ್​ ಇನ್​ಸ್ಟಿಟ್ಯೂಟ್​ ಮತ್ತು ಭಾರತ್​ ಬಯೋಟೆಕ್​ ಎರಡೂ ಕಂಪನಿಗಳು ಎರಡನೇ ಬಾರಿ ಸಿಡಿಎಸ್​ಸಿಒದ ವಿಷಯ ತಜ್ಞರ ಸಮಿತಿಗೆ ಅರ್ಜಿ ಸಲ್ಲಿಸಿದ್ದವು. ಅದನ್ನು ಬುಧವಾರ ಪರಿಶೀಲನೆ ಮಾಡಿದ ಸಮಿತಿ, ಡಿಸಿಜಿಐಗೆ ಶಿಫಾರಸ್ಸು ಸಲ್ಲಿಸಿದೆ. ಹಾಗೇ, ಪೂರ್ಣಪ್ರಮಾಣದ ಮಾರುಕಟ್ಟೆ ಬಳಕೆಗೂ ಕೆಲವು ಷರತ್ತುಗಳು ಅನ್ವಯ ಆಗಲಿವೆ  ಎಂದು ಪಿಟಿಐ ವರದಿ ಮಾಡಿದೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್​ಗಳು ಭಾರತದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಕೈ ಹಿಡಿದ ಸ್ವದೇಶಿ ಲಸಿಕೆಗಳು. ಇವೆರಡಕ್ಕೂ 2021ರ ಜನವರಲ್ಲಿ ತುರ್ತು ಪರಿಸ್ಥಿತಿಯ ಬಳಕೆಗೆ ಅನುಮತಿ ಸಿಕ್ಕಿದೆ. ಅದರಂತೆ ಈಗಾಗಲೇ ದೇಶಾದ್ಯಂತ ಲಕ್ಷಾಂತರ ಜನರಿಗೆ ಈ ಎರಡು ಕೊರೊನಾ ಲಸಿಕೆಗಳನ್ನು ನೀಡಲಾಗುತ್ತಿದೆ.  ಎರಡೂ ಲಸಿಕೆಗಳೂ ಎರಡು ಡೋಸ್​​ನವಾಗಿದ್ದು, 2-8 ಡಿಗ್ರಿ ಸೆಲ್ಸಿಯಸ್​​ ತಾಪಮಾನದಲ್ಲಿ ರಕ್ಷಿಸಬೇಕಾಗುತ್ತದೆ. ಇದೀಗ ಒಮ್ಮೆ ಮಾರುಕಟ್ಟೆ ಬಳಕೆಗೆ ಅನುಮೋದನೆ ಸಿಕ್ಕರೂ, ಕೂಡಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಲಸಿಕೆಗಳು ಸಿಗಲಾರವು ಎಂದು ಹೇಳಲಾಗಿದೆ.

ಇದನ್ನೂ ಓದಿ:  ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಹಣಕ್ಕೆ ಬ್ಲ್ಯಾಕ್​ಮೇಲ್: ಆರೋಪಿ ಅರೆಸ್ಟ್

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!