AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ, ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವು

ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತದಿಂದಾಗಿ ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಗಾಗಿ ತಮಿಳುನಾಡಿನ ತಿರುವರೂರು ಸರ್ಕಾರಿ ಆಸ್ಪತ್ರೆಗೆ 48 ವರ್ಷದ ಮಹಿಳೆ ದಾಖಲಾಗಿದ್ದರು. ವೆಂಟಿಲೇಟರ್‌ನಲ್ಲಿರುವಾಗ ವಿದ್ಯುತ್ ವ್ಯತ್ಯಯದಿಂದಾಗಿ ಕೆಲಸ ಮಾಡುವುದನ್ನು ನಿಲ್ಲಿಸಿ ಸಾವನ್ನಪ್ಪಿದ್ದಾರೆ.

ತಮಿಳುನಾಡು: ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ, ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವು
ಆಸ್ಪತ್ರೆ, ರೋಗಿ, ವೈದ್ಯರುImage Credit source: India Today
ನಯನಾ ರಾಜೀವ್
|

Updated on: Nov 29, 2023 | 2:29 PM

Share

ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಗಾಗಿ ತಮಿಳುನಾಡಿನ ತಿರುವರೂರು ಸರ್ಕಾರಿ ಆಸ್ಪತ್ರೆಗೆ 48 ವರ್ಷದ ಮಹಿಳೆ ದಾಖಲಾಗಿದ್ದರು. ವೆಂಟಿಲೇಟರ್‌ನಲ್ಲಿರುವಾಗ ವಿದ್ಯುತ್ ವ್ಯತ್ಯಯದಿಂದಾಗಿ ಕೆಲಸ ಮಾಡುವುದನ್ನು ನಿಲ್ಲಿಸಿ ಸಾವನ್ನಪ್ಪಿದ್ದಾರೆ.

ರೋಗಿಯ ಕುಟುಂಬ ಸದಸ್ಯರು, ಅಮರಾವತಿ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ವಿದ್ಯುತ್ ಬ್ಯಾಕಪ್ ಲಭ್ಯವಿಲ್ಲದೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆರೋಪವನ್ನು ಸರ್ಕಾರ ತಳ್ಳಿ ಹಾಕಿದೆ, ರೋಗಿಯ ಸಾವಿಗೆ ಕಾರಣವಾದ ವಿಷಯದ ಬಗ್ಗೆ ತನಿಖೆ ನಡೆಸಲು ಆಸ್ಪತ್ರೆಯು ತಂಡವನ್ನು ಸಹ ರಚಿಸಿದೆ.

ತುರ್ತು ವಿಭಾಗದಲ್ಲಿ ವಿದ್ಯುತ್ ಇಲ್ಲದೇ ಇರುವುದು ಹೇಗೆ ಎಂದು ವೈದ್ಯರಲ್ಲಿ ಕೇಳುತ್ತಿರುವ ವಿಡಿಯೋ ಇದೀಗ ಬಹಿರಂಗವಾಗಿದೆ. ವೈದ್ಯರು ಟಾರ್ಚ್ ಬೆಳಕಿನಲ್ಲಿ ರೋಗಿಗೆ ಇಂಜೆಕ್ಷನ್ ನೀಡುವುದನ್ನು ಸಹ ಕಾಣಬಹುದು.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ ಆರೋಪ: ರೋಗಿ ಸಾವು, ಶವವಿಟ್ಟು ಕುಟುಂಬಸ್ಥರಿಂದ ಪ್ರತಿಭಟನೆ

ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಂದ ರೋಗಿಯು ವೈದ್ಯಕೀಯ ಸ್ಥಿತಿಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಬ್ರಮಣಿಯನ್ ಮಂಗಳವಾರ ಹೇಳಿದ್ದಾರೆ. ವಿದ್ಯುತ್ ಕಡಿತವು ಕೇವಲ ಐದು ನಿಮಿಷಗಳ ಕಾಲ ಮಾತ್ರ ಇತ್ತು ಮತ್ತು ವೆಂಟಿಲೇಟರ್‌ಗಳು ಕನಿಷ್ಠ ಒಂದು ಗಂಟೆಗಳ ಕಾಲ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದವು ಎಂದು ಅವರು ಹೇಳಿದರು.

ವೆಂಟಿಲೇಟರ್ ಬೆಂಬಲದಲ್ಲಿರುವ ಇತರ ನಾಲ್ಕು ರೋಗಿಗಳು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ ಎಂದು ಸುಬ್ರಮಣಿಯನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್