AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತನ ಮೃತದೇಹವನ್ನು ನದಿಗೆ ಎಸೆದು ಹೋದ ಸಂಬಂಧಿಕರು; ವೈರಲ್ ವಿಡಿಯೋ ನೋಡಿ ಪ್ರಕರಣ ದಾಖಲು

ವಿಡಿಯೋ ವೈರಲ್ ಆದ ಬಳಿಕ ಅವರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಅವರ ತನಿಖಾ ಮಾಹಿತಿಯಂತೆ ಸಿದ್ಧಾರ್ಥ್​ ನಗರದ ನಿವಾಸಿ ಪ್ರೇಮ್​ನಾಥ್ ಮಿಶ್ರಾರ ಮೃತದೇಹ ಇದಾಗಿದೆ.

ಕೊರೊನಾ ಸೋಂಕಿತನ ಮೃತದೇಹವನ್ನು ನದಿಗೆ ಎಸೆದು ಹೋದ ಸಂಬಂಧಿಕರು; ವೈರಲ್ ವಿಡಿಯೋ ನೋಡಿ ಪ್ರಕರಣ ದಾಖಲು
ಕೊರೊನಾ ಸೋಂಕಿತನ ಮೃತದೇಹ
TV9 Web
| Edited By: |

Updated on:Aug 14, 2021 | 1:06 PM

Share

ಲಕ್ನೋ: ಕೊರೊನಾ ಎರಡನೇ ಅಲೆ ಭಾರತದಲ್ಲಿ ವೇಗವಾಗಿ ಹರಡುತ್ತಿದೆ. ಕೊವಿಡ್-19 ಸೋಂಕಿನಿಂದ ಬಹಳಷ್ಟು ಸಾವು ನೋವು ಕೂಡ ಸಂಭವಿಸಿದೆ. ಕೊರೊನಾದಿಂದ ಮೃತಪಟ್ಟ ಮೃತದೇಹದ ಬಗ್ಗೆ ಜನರು ಭಯ, ಆತಂಕ ಹೊಂದಿರುವುದು ಅಥವಾ ಅದನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನೀಡದೇ ಇರುವುದು ಇಂಥಾ ಕೆಲವು ಘಟನೆಗಳು ಆಗಿದೆ. ಇದೀಗ ಅಂಥದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕೊರೊನಾ ಸೋಂಕಿತನ ಮೃತದೇಹವನ್ನು ಸಂಬಂಧಿಕರು ನದಿಗೆ ಎಸೆದಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಬಲರಾಮ್​ಪುರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಜಿಲ್ಲೆಯಲ್ಲಿ ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಆ ಮೂಲಕ ನದಿಗೆ ಎಸೆದ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾರದ ಹಿಂದೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಮಾಹಿತಿ ಪಡೆದು ಭಾನುವಾರ ತನಿಖೆ ಆರಂಭಿಸಿದ್ಧಾರೆ.

ಇಲ್ಲಿನ ಮುಖ್ಯ ಆರೋಗ್ಯ ಅಧಿಕಾರಿ ಡಾ. ವಿಜಯ್ ಬಹದ್ದೂರ್ ಸಿಂಗ್ ಹೇಳಿರುವಂತೆ, ವಿಡಿಯೋ ವೈರಲ್ ಆದ ಬಳಿಕ ಅವರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಅವರ ತನಿಖಾ ಮಾಹಿತಿಯಂತೆ ಸಿದ್ಧಾರ್ಥ್​ ನಗರದ ನಿವಾಸಿ ಪ್ರೇಮ್​ನಾಥ್ ಮಿಶ್ರಾರ ಮೃತದೇಹ ಇದಾಗಿದೆ. ಮಿಶ್ರಾ, ಮೇ 25ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ, ಮೇ 28ರಂದು ಮೃತಪಟ್ಟಿದ್ದರು. ಕೊರೊನಾ ಮಾರ್ಗಸೂಚಿಗಳ ಅನುಸಾರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ ಕಂಡುಬಂದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಸಿಂಗ್ ತಿಳಿಸಿದ್ದಾರೆ. ಅಲ್ಲೇ ಸಮೀಪದಲ್ಲಿ ಕಾರ್​ನಲ್ಲಿದ್ದ ಸವಾರರೊಬ್ಬರು ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಕೊರೊನಾ ಸೋಂಕಿತನ ಮೃತದೇಹದ ಜೊತೆಗೆ ಇಬ್ಬರು ಇರುವುದು ಮತ್ತು ಪಿಪಿಇ ಕಿಟ್ ಧರಿಸಿರುವ ಒಬ್ಬಾತ ಮೃತದೇಹವನ್ನು ನದಿಗೆ ಎಸೆದಿರುವುದು 45 ಸೆಕೆಂಡ್​ಗಳ ವಿಡಿಯೋ ಕ್ಲಿಪ್​ನಲ್ಲಿ ಕಂಡುಬಂದಿದೆ.

ಈ ತಿಂಗಳ ಮೊದಲ ಭಾಗದಲ್ಲಿ ಗಂಗಾ ನದಿಯಲ್ಲಿ ನೂರಾರು ಮೃತದೇಹಗಳು ತೇಲಿಬಂದಿರುವುದು ಕಂಡುಬಂದಿತ್ತು. ಜೊತೆಗೆ, ಉತ್ತರ ಪ್ರದೇಶ ಹಾಗೂ ಬಿಹಾರದ ನದಿಯ ಮರಳು ಪ್ರದೇಶದಲ್ಲಿ ಸಾವಿರಾರು ಹೆಣಗಳನ್ನು ಸಂಸ್ಕಾರ ಮಾಡಿರುವುದು ಕಂಡುಬಂದಿತ್ತು. ಇವುಗಳಲ್ಲಿ ಹಲವು ಕೊವಿಡ್-19 ಸೋಂಕಿನಿಂದ ಮೃತಪಟ್ಟ ಜನರ ಮೃತದೇಹಗಳು ಎಂದು ಅಂದಾಜಿಸಲಾಗಿತ್ತು. ಈ ಚಿತ್ರಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು.

ಇದನ್ನೂ ಓದಿ: ಕೊರೊನಾಗೆ 13 ತಿಂಗಳ ಮಗು ಬಲಿ, ಆಕ್ಸಿಜನ್ ಕೊರತೆ ಕಾರಣವೆಂದು ಕಣ್ಣೀರಿಟ್ಟ ತಂದೆ

ಜೂನ್​ನಲ್ಲಿ 12 ಕೋಟಿ ಡೋಸ್​​ಗಳಷ್ಟು ಕೊರೊನಾ ಲಸಿಕೆ ಲಭ್ಯ; ಕೇಂದ್ರ ಸರ್ಕಾರದಿಂದ ಅಭಯ

Published On - 5:02 pm, Sun, 30 May 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ