AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನಿಂದ ಹಿಂತಿರುಗುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ನಿಯಮಗಳನ್ನು ಸಡಿಲಗೊಳಿಸಿ: ಬಿಜೆಪಿ ಸಂಸದ ವರುಣ್ ಗಾಂಧಿ

ಭಾರತೀಯ ಸಂಸ್ಥೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ನಾವು ನಿಯಮಗಳನ್ನು ಸಡಿಲಿಸಬೇಕಾಗುತ್ತದೆ. ಅವರ ಚಿಂತೆಗಳು ಮತ್ತು ಅವರ ಪೋಷಕರ ಚಿಂತೆಗಳು ನಮ್ಮ ಚಿಂತೆಯಾಗಬೇಕು" ಎಂದು ವರುಣ್  ಹೇಳಿದ್ದಾರೆ.

ಉಕ್ರೇನ್‌ನಿಂದ ಹಿಂತಿರುಗುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ನಿಯಮಗಳನ್ನು ಸಡಿಲಗೊಳಿಸಿ: ಬಿಜೆಪಿ ಸಂಸದ ವರುಣ್ ಗಾಂಧಿ
ಬಿಜೆಪಿ ಸಂಸದ ವರುಣ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 06, 2022 | 2:37 PM

ದೆಹಲಿ: ಉಕ್ರೇನ್‌ನಿಂದ (Ukraine) ಭಾರತಕ್ಕೆ ಮರಳುತ್ತಿರುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಅನಿಶ್ಚಿತತೆಯ ಬಗ್ಗೆ ಬಿಜೆಪಿ ಸಂಸದ ವರುಣ್ ಗಾಂಧಿ (Varun Gandhi)ಭಾನುವಾರ ಟ್ವೀಟ್ ಮಾಡಿದ್ದಾರೆ. ಕಳೆದ ವಾರ ಕೈವ್ (Kyiv) ಮೇಲೆ ರಷ್ಯಾ ದಾಳಿ ಪ್ರಾರಂಭವಾದಾಗಿನಿಂದ ಸಾವಿರಾರು ಜನರು ದೇಶಕ್ಕೆ ಹಿಂತಿರುಗಿದ್ದಾರೆ. “ಉಕ್ರೇನ್ ಬಿಕ್ಕಟ್ಟು ಸಾವಿರಾರು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ, ಒಂದೆಡೆ, ಅವರಿಗೆ ಯುದ್ಧಭೂಮಿಯ ಕಹಿ ನೆನಪುಗಳಿವೆ, ಮತ್ತೊಂದೆಡೆ , ಅವರ ಭವಿಷ್ಯವು ತೂಗಿದಂತಾಗಿದೆ ಎಂದು ಉತ್ತರ ಪ್ರದೇಶದ ಪಿಲಿಭಿತ್‌ನ 41 ವರ್ಷದ ಸಂಸದ ವರುಣ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಭಾರತೀಯ ಸಂಸ್ಥೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ನಾವು ನಿಯಮಗಳನ್ನು ಸಡಿಲಿಸಬೇಕಾಗುತ್ತದೆ. ಅವರ ಚಿಂತೆಗಳು ಮತ್ತು ಅವರ ಪೋಷಕರ ಚಿಂತೆಗಳು ನಮ್ಮ ಚಿಂತೆಯಾಗಬೇಕು” ಎಂದು ವರುಣ್  ಹೇಳಿದ್ದಾರೆ. ಪೋಲೆಂಡ್, ರೊಮೇನಿಯಾ, ಹಂಗೇರಿ ಮತ್ತು ಸ್ಲೋವಾಕ್ ಗಣರಾಜ್ಯದ ಗಡಿ ದೇಶಗಳ ಮೂಲಕ ವಿಶೇಷ ವಿಮಾನಗಳಲ್ಲಿ ಉಕ್ರೇನ್‌ನಿಂದ 13,000 ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ಕರೆತರಲಾಗಿದೆ ಎಂದು ಸರ್ಕಾರ ಹೇಳಿದ ಒಂದು ದಿನದ ನಂತರ ವರುಣ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ. ರಾಜಧಾನಿ ಕೈವ್ ಮತ್ತು ಎರಡನೇ ದೊಡ್ಡ ನಗರವಾದ ಖಾರ್ಕಿವ್ ಸೇರಿದಂತೆ ಉಕ್ರೇನ್‌ನ ಪ್ರಮುಖ ನಗರಗಳ ಮೇಲೆ ರಷ್ಯಾ ದಾಳಿಯನ್ನು ತೀವ್ರಗೊಳಿಸಿದ್ದರಿಂದ ಕಳೆದ ಒಂದು ವಾರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹಲವು ಮನವಿಗಳನ್ನು ಹಂಚಿಕೊಳ್ಳಲಾಗಿದೆ.  ಕಳೆದ ವಾರ ವರುಣ್ ಗಾಂಧಿ  “ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳದ ಕಾರಣ” 15,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯುದ್ಧದ ಮಧ್ಯೆ ಸಿಲುಕಿಕೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದು, ವಿಡಿಯೊ ಮನವಿಯೊಂದನ್ನು ತಮ್ಮ ಟ್ವೀಟ್ ಜತೆ ಹಂಚಿಕೊಂಡಿದ್ದರು.

ಉದ್ವಿಗ್ನ ಪರಿಸ್ಥಿತಿ ಉಲ್ಬಣವಾಗಿದ್ದು, ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾ ನಡೆಸಿದ ದಾಳಿಯು ಜಗತ್ತು ತನ್ನ ಉಸಿರನ್ನು ಹಿಡಿದಿಟ್ಟುಕೊಂಡಿರುವಾಗ ಬೆಂಕಿಯನ್ನು ಉಂಟುಮಾಡಿದೆ ಎಂದು ಕೈವ್ ಶುಕ್ರವಾರ ಹೇಳಿತ್ತು. ನಂತರದ ಗಂಟೆಗಳಲ್ಲಿ ಮಾಸ್ಕೊ ಮೇಲೆ “ಪರಮಾಣು ಭಯೋತ್ಪಾದನೆ” ಆಪಾದನೆ ಹೊರಿಸಲಾಯಿತು.

ಪರಿಸ್ಥಿತಿ ಹದಗೆಡುತ್ತಿರುವ ಮಧ್ಯೆ, ಭಾರತದಲ್ಲಿ ಹತಾಶ ಕುಟುಂಬಗಳು ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಒತ್ತಾಯಿಸುತ್ತಿವೆ.

ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಉಕ್ರೇನ್ ಕುರಿತು ‘ಬೇಜವಾಬ್ದಾರಿ ಹೇಳಿಕೆ’ ನೀಡಿದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದೆ. ಭಾರತದ ಸಾವಿರಾರು ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದಾರೆ.  ನಮ್ಮ ಯುವಕರು ಬಾಂಬ್ ಸ್ಫೋಟದ ನಡುವೆ ಸಿಲುಕಿಕೊಂಡಿದ್ದಾರೆ. ಈ ಯುವಕರು ತಮ್ಮನ್ನು ಉಳಿಸುವಂತೆ ಮನವಿ ಮಾಡುವ ವಿಡಿಯೊಗಳನ್ನು ಕಳುಹಿಸುತ್ತಿದ್ದಾರೆ. ಈ ಜನರು (ವಿದ್ಯಾರ್ಥಿಗಳು) ಭಾರತದಲ್ಲಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯದ ಕಾರಣ ಉಕ್ರೇನ್‌ಗೆ ಹೋಗಿದ್ದಾರೆ ಎಂದು ಪ್ರಧಾನಿಯವರ ಸಂಪುಟ ಸಚಿವರು ಹೇಳುತ್ತಾರೆ.  ವಿದ್ಯಾರ್ಥಿಗಳು ಇಲ್ಲಿ ವಿಫಲರಾದರು ಮತ್ತು ಅಲ್ಲಿಗೆ (ಉಕ್ರೇನ್‌ಗೆ) ಹೋದರು. ಇವರು ಭಾರತದ ವಿದ್ಯಾರ್ಥಿಗಳಲ್ಲವೇ? ಅವರು ನಮ್ಮವರಲ್ಲವೇ? ಅವರನ್ನು ಮರಳಿ ಕರೆತರುವುದು ನಿಮ್ಮ (ಸರ್ಕಾರದ) ಜವಾಬ್ದಾರಿಯಲ್ಲವೇ? ಎಂದು ರಾಹುಲ್ ಕೇಳಿದ್ದರು.  90 ಪ್ರತಿಶತ ಭಾರತೀಯರು ಪರೀಕ್ಷೆಯಲ್ಲಿ ತೇರ್ಗಡೆಯಾಗುವುದಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹೇಳಿಕೆಯನ್ನು ರಾಹುಲ್ ಸ್ಪಷ್ಟವಾಗಿ ಇಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿ ನಿನ್ನೆ ಯುದ್ಧ ನಿಲ್ಲಿಸಿದ್ದು ಪ್ರಧಾನಿ ನರೇಂದ್ರ ಮೋದಿ: ಹಾಲಪ್ಪ ಆಚಾರ್ ಹೇಳಿಕೆ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್