AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಸಹಾಯವನ್ನೂ ಮಾಡದ ನಿಮ್ಮದು ಇದೆಂಥಾ ಸರ್ಕಾರ?- ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಶ್ನೆ

ಸರ್ಕಾರ ರಚಿಸಿದರೆ ಸಾಕಾಗದು, ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ನೀಡಬೇಕು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಯಾವ ಸಹಾಯವನ್ನೂ ಮಾಡದ ನಿಮ್ಮದು ಇದೆಂಥಾ ಸರ್ಕಾರ?- ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಶ್ನೆ
ರಾಹುಲ್​ ಗಾಂಧಿ
TV9 Web
| Edited By: |

Updated on: Nov 24, 2021 | 4:52 PM

Share

ಪ್ರತಿದಿನವೂ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಆಯಾ ದಿನದ ಕೊವಿಡ್​ 19 ಕೇಸ್​​ಗಳ ಅಂಕಿಸಂಖ್ಯೆಯನ್ನು ಬಿಡುಗಡೆ ಮಾಡುತ್ತಿದೆ. ಒಂದು ದಿನದಲ್ಲಿ ಪತ್ತೆಯಾದ ಪ್ರಕರಣಗಳು, ಸೋಂಕಿನಿಂದ ಸತ್ತವರ ಸಂಖ್ಯೆ, ಒಟ್ಟಾರೆ ಸೋಂಕಿತರ ಸಂಖ್ಯೆ, ಚೇತರಿಕೆ ರೇಟ್​ ಹೀಗೆ ಸಮಗ್ರ ಮಾಹಿತಿಯನ್ನೂ ನೀಡುತ್ತಿದೆ. ಆದರೆ ಕಾಂಗ್ರೆಸ್​ ಸೇರಿ ಪ್ರತಿಪಕ್ಷಗಳು ಈ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅನುಮಾನ ವ್ಯಕ್ತಪಡಿಸುತ್ತ ಬಂದಿವೆ. ಕೇಂದ್ರ ಸರ್ಕಾರ ಸರಿಯಾದ ಡಾಟಾವನ್ನು ನೀಡುತ್ತಿಲ್ಲ ಎಂಬುದು ವಿಪಕ್ಷಗಳ ಆರೋಪ. ಈಗ ಕೂಡ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕೊವಿಡ್​ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್​ ಗಾಂಧಿ ಕಾಂಗ್ರೆಸ್​ ಪಕ್ಷದ ಎರಡು ಬೇಡಿಕೆಗಳಿವೆ ಎಂದು ಹೇಳಿದ್ದಾರೆ. ಒಂದನೇಯದು, ಕೊವಿಡ್​ 19ನಿಂದ ಮೃತಪಟ್ಟವರ ನೈಜವಾದ ಅಂಕಿ-ಸಂಖ್ಯೆಯನ್ನುತಿಳಿಸಬೇಕು. ಎರಡನೇದಾಗಿ ಕೊವಿಡ್​19ನಿಂದ ಮೃತರಾದವರ ಕುಟುಂಬಕ್ಕೆ  4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರ ರಚಿಸಿದರೆ ಸಾಕಾಗದು, ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ನೀಡಬೇಕು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.  ಹಾಗೇ, ಒಂದು ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ.

ಗುಜರಾತ್​ ಮಾದರಿಯಲ್ಲಿ ಅಭಿವೃದ್ಧಿಯೆಂಬುದು ಇತರ ರಾಜ್ಯಗಳಿಗೆ ಮಾನದಂಡವಾಗಬೇಕು ಎಂದು ಬಿಜೆಪಿ ಸರ್ಕಾರ ಹೇಳುತ್ತಿದೆ. ಆದರೆ ಕೊವಿಡ್​ನಿಂದ ತತ್ತರಿಸುತ್ತಿರುವ ಜನರು ಆಸ್ಪತ್ರೆಗಳಲ್ಲಿ ಬೆಡ್​ಗಳಿಲ್ಲದೆ ಪರದಾಡುತ್ತಿದ್ದಾಗ ನೀವ್ಯಾರೂ ಸಹಾಯಕ್ಕೆ ಬಂದಿಲ್ಲ.. ಜನರು ತಮ್ಮ ಪ್ರೀತಿಪಾತ್ರರಿಗೆ ಚಿಕಿತ್ಸೆ ಕೊಡಿಸಲು 10-15 ಲಕ್ಷ ರೂಪಾಯಿ ಖರ್ಚು ಮಾಡಬೇಕಾಗಿ ಬಂದಾಗಲೂ ನೀವು ನೆರವು ನೀಡಲಿಲ್ಲ. ಇದೀಗ ಮೃತರ ಕುಟುಂಬಕ್ಕೆ ಯೋಗ್ಯ ರೀತಿಯಲ್ಲಿ ಪರಿಹಾರ ನೀಡಲೂ ಮುಂದಾಗುತ್ತಿಲ್ಲ. ನಿಮ್ಮದು ಇದ್ಯಾವ ಮಾದರಿಯ ಸರ್ಕಾರ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಬಿಎಸ್ ಯಡಿಯೂರಪ್ಪ ಹೇಳಿಕೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!