AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಸಹಾಯವನ್ನೂ ಮಾಡದ ನಿಮ್ಮದು ಇದೆಂಥಾ ಸರ್ಕಾರ?- ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಶ್ನೆ

ಸರ್ಕಾರ ರಚಿಸಿದರೆ ಸಾಕಾಗದು, ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ನೀಡಬೇಕು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಯಾವ ಸಹಾಯವನ್ನೂ ಮಾಡದ ನಿಮ್ಮದು ಇದೆಂಥಾ ಸರ್ಕಾರ?- ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಶ್ನೆ
ರಾಹುಲ್​ ಗಾಂಧಿ
TV9 Web
| Edited By: |

Updated on: Nov 24, 2021 | 4:52 PM

Share

ಪ್ರತಿದಿನವೂ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಆಯಾ ದಿನದ ಕೊವಿಡ್​ 19 ಕೇಸ್​​ಗಳ ಅಂಕಿಸಂಖ್ಯೆಯನ್ನು ಬಿಡುಗಡೆ ಮಾಡುತ್ತಿದೆ. ಒಂದು ದಿನದಲ್ಲಿ ಪತ್ತೆಯಾದ ಪ್ರಕರಣಗಳು, ಸೋಂಕಿನಿಂದ ಸತ್ತವರ ಸಂಖ್ಯೆ, ಒಟ್ಟಾರೆ ಸೋಂಕಿತರ ಸಂಖ್ಯೆ, ಚೇತರಿಕೆ ರೇಟ್​ ಹೀಗೆ ಸಮಗ್ರ ಮಾಹಿತಿಯನ್ನೂ ನೀಡುತ್ತಿದೆ. ಆದರೆ ಕಾಂಗ್ರೆಸ್​ ಸೇರಿ ಪ್ರತಿಪಕ್ಷಗಳು ಈ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅನುಮಾನ ವ್ಯಕ್ತಪಡಿಸುತ್ತ ಬಂದಿವೆ. ಕೇಂದ್ರ ಸರ್ಕಾರ ಸರಿಯಾದ ಡಾಟಾವನ್ನು ನೀಡುತ್ತಿಲ್ಲ ಎಂಬುದು ವಿಪಕ್ಷಗಳ ಆರೋಪ. ಈಗ ಕೂಡ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕೊವಿಡ್​ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್​ ಗಾಂಧಿ ಕಾಂಗ್ರೆಸ್​ ಪಕ್ಷದ ಎರಡು ಬೇಡಿಕೆಗಳಿವೆ ಎಂದು ಹೇಳಿದ್ದಾರೆ. ಒಂದನೇಯದು, ಕೊವಿಡ್​ 19ನಿಂದ ಮೃತಪಟ್ಟವರ ನೈಜವಾದ ಅಂಕಿ-ಸಂಖ್ಯೆಯನ್ನುತಿಳಿಸಬೇಕು. ಎರಡನೇದಾಗಿ ಕೊವಿಡ್​19ನಿಂದ ಮೃತರಾದವರ ಕುಟುಂಬಕ್ಕೆ  4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರ ರಚಿಸಿದರೆ ಸಾಕಾಗದು, ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ನೀಡಬೇಕು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.  ಹಾಗೇ, ಒಂದು ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ.

ಗುಜರಾತ್​ ಮಾದರಿಯಲ್ಲಿ ಅಭಿವೃದ್ಧಿಯೆಂಬುದು ಇತರ ರಾಜ್ಯಗಳಿಗೆ ಮಾನದಂಡವಾಗಬೇಕು ಎಂದು ಬಿಜೆಪಿ ಸರ್ಕಾರ ಹೇಳುತ್ತಿದೆ. ಆದರೆ ಕೊವಿಡ್​ನಿಂದ ತತ್ತರಿಸುತ್ತಿರುವ ಜನರು ಆಸ್ಪತ್ರೆಗಳಲ್ಲಿ ಬೆಡ್​ಗಳಿಲ್ಲದೆ ಪರದಾಡುತ್ತಿದ್ದಾಗ ನೀವ್ಯಾರೂ ಸಹಾಯಕ್ಕೆ ಬಂದಿಲ್ಲ.. ಜನರು ತಮ್ಮ ಪ್ರೀತಿಪಾತ್ರರಿಗೆ ಚಿಕಿತ್ಸೆ ಕೊಡಿಸಲು 10-15 ಲಕ್ಷ ರೂಪಾಯಿ ಖರ್ಚು ಮಾಡಬೇಕಾಗಿ ಬಂದಾಗಲೂ ನೀವು ನೆರವು ನೀಡಲಿಲ್ಲ. ಇದೀಗ ಮೃತರ ಕುಟುಂಬಕ್ಕೆ ಯೋಗ್ಯ ರೀತಿಯಲ್ಲಿ ಪರಿಹಾರ ನೀಡಲೂ ಮುಂದಾಗುತ್ತಿಲ್ಲ. ನಿಮ್ಮದು ಇದ್ಯಾವ ಮಾದರಿಯ ಸರ್ಕಾರ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಬಿಎಸ್ ಯಡಿಯೂರಪ್ಪ ಹೇಳಿಕೆ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ