AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಸಹಾಯವನ್ನೂ ಮಾಡದ ನಿಮ್ಮದು ಇದೆಂಥಾ ಸರ್ಕಾರ?- ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಶ್ನೆ

ಸರ್ಕಾರ ರಚಿಸಿದರೆ ಸಾಕಾಗದು, ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ನೀಡಬೇಕು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಯಾವ ಸಹಾಯವನ್ನೂ ಮಾಡದ ನಿಮ್ಮದು ಇದೆಂಥಾ ಸರ್ಕಾರ?- ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಶ್ನೆ
ರಾಹುಲ್​ ಗಾಂಧಿ
TV9 Web
| Edited By: |

Updated on: Nov 24, 2021 | 4:52 PM

Share

ಪ್ರತಿದಿನವೂ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಆಯಾ ದಿನದ ಕೊವಿಡ್​ 19 ಕೇಸ್​​ಗಳ ಅಂಕಿಸಂಖ್ಯೆಯನ್ನು ಬಿಡುಗಡೆ ಮಾಡುತ್ತಿದೆ. ಒಂದು ದಿನದಲ್ಲಿ ಪತ್ತೆಯಾದ ಪ್ರಕರಣಗಳು, ಸೋಂಕಿನಿಂದ ಸತ್ತವರ ಸಂಖ್ಯೆ, ಒಟ್ಟಾರೆ ಸೋಂಕಿತರ ಸಂಖ್ಯೆ, ಚೇತರಿಕೆ ರೇಟ್​ ಹೀಗೆ ಸಮಗ್ರ ಮಾಹಿತಿಯನ್ನೂ ನೀಡುತ್ತಿದೆ. ಆದರೆ ಕಾಂಗ್ರೆಸ್​ ಸೇರಿ ಪ್ರತಿಪಕ್ಷಗಳು ಈ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅನುಮಾನ ವ್ಯಕ್ತಪಡಿಸುತ್ತ ಬಂದಿವೆ. ಕೇಂದ್ರ ಸರ್ಕಾರ ಸರಿಯಾದ ಡಾಟಾವನ್ನು ನೀಡುತ್ತಿಲ್ಲ ಎಂಬುದು ವಿಪಕ್ಷಗಳ ಆರೋಪ. ಈಗ ಕೂಡ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕೊವಿಡ್​ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್​ ಗಾಂಧಿ ಕಾಂಗ್ರೆಸ್​ ಪಕ್ಷದ ಎರಡು ಬೇಡಿಕೆಗಳಿವೆ ಎಂದು ಹೇಳಿದ್ದಾರೆ. ಒಂದನೇಯದು, ಕೊವಿಡ್​ 19ನಿಂದ ಮೃತಪಟ್ಟವರ ನೈಜವಾದ ಅಂಕಿ-ಸಂಖ್ಯೆಯನ್ನುತಿಳಿಸಬೇಕು. ಎರಡನೇದಾಗಿ ಕೊವಿಡ್​19ನಿಂದ ಮೃತರಾದವರ ಕುಟುಂಬಕ್ಕೆ  4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರ ರಚಿಸಿದರೆ ಸಾಕಾಗದು, ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ನೀಡಬೇಕು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.  ಹಾಗೇ, ಒಂದು ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ.

ಗುಜರಾತ್​ ಮಾದರಿಯಲ್ಲಿ ಅಭಿವೃದ್ಧಿಯೆಂಬುದು ಇತರ ರಾಜ್ಯಗಳಿಗೆ ಮಾನದಂಡವಾಗಬೇಕು ಎಂದು ಬಿಜೆಪಿ ಸರ್ಕಾರ ಹೇಳುತ್ತಿದೆ. ಆದರೆ ಕೊವಿಡ್​ನಿಂದ ತತ್ತರಿಸುತ್ತಿರುವ ಜನರು ಆಸ್ಪತ್ರೆಗಳಲ್ಲಿ ಬೆಡ್​ಗಳಿಲ್ಲದೆ ಪರದಾಡುತ್ತಿದ್ದಾಗ ನೀವ್ಯಾರೂ ಸಹಾಯಕ್ಕೆ ಬಂದಿಲ್ಲ.. ಜನರು ತಮ್ಮ ಪ್ರೀತಿಪಾತ್ರರಿಗೆ ಚಿಕಿತ್ಸೆ ಕೊಡಿಸಲು 10-15 ಲಕ್ಷ ರೂಪಾಯಿ ಖರ್ಚು ಮಾಡಬೇಕಾಗಿ ಬಂದಾಗಲೂ ನೀವು ನೆರವು ನೀಡಲಿಲ್ಲ. ಇದೀಗ ಮೃತರ ಕುಟುಂಬಕ್ಕೆ ಯೋಗ್ಯ ರೀತಿಯಲ್ಲಿ ಪರಿಹಾರ ನೀಡಲೂ ಮುಂದಾಗುತ್ತಿಲ್ಲ. ನಿಮ್ಮದು ಇದ್ಯಾವ ಮಾದರಿಯ ಸರ್ಕಾರ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಬಿಎಸ್ ಯಡಿಯೂರಪ್ಪ ಹೇಳಿಕೆ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್