ಮೋದಿ ಸರ್ಕಾರ ಪ್ರತಿ ಭಾರತೀಯರ ಬದುಕನ್ನು ಗೌರವಿಸುತ್ತದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು, ಮೋದಿ ಹೈ ತೋ ಮುಮ್ಕಿನ್ ಹೈ. ನಲವತ್ತೈದು ದಿನಗಳ ಹಿಂದೆ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಯಿತು. ಈಗ, ನಮ್ಮ ನೌಕಾಪಡೆಯ ಯೋಧರನ್ನು ಮನೆಗೆ ಕರೆತರುವ ಮೂಲಕ, ಮೋದಿ ಸರ್ಕಾರವು ಪ್ರತಿ ಜೀವವೂ ಮುಖ್ಯವಾಗಿದೆ ಎಂದು ಸಾಬೀತು ಪಡಿಸಿದೆ ಎಂದಿದ್ದಾರೆ.

ದೆಹಲಿ ಫೆಬ್ರುವರಿ 12: ಕತಾರ್ನಲ್ಲಿ (Qatar) ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿದ್ದಕ್ಕಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. “ಪ್ರಧಾನಿ ಮೋದಿ (PM Modi) ಅವರಿಗೆ ಧನ್ಯವಾದಗಳು, ಮೋದಿ ಹೈ ತೋ ಮುಮ್ಕಿನ್ ಹೈ. ನಲವತ್ತೈದು ದಿನಗಳ ಹಿಂದೆ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಯಿತು. ಈಗ, ನಮ್ಮ ನೌಕಾಪಡೆಯ ಯೋಧರನ್ನು ಮನೆಗೆ ಕರೆತರುವ ಮೂಲಕ, ಮೋದಿ ಸರ್ಕಾರವು ಪ್ರತಿ ಜೀವವೂ ಮುಖ್ಯವಾಗಿದೆ ಎಂದು ಸಾಬೀತು ಪಡಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಗೆಲುವಿನಲ್ಲಿ, ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಸಿಬ್ಬಂದಿಗಳನ್ನು ಸೋಮವಾರ ದೋಹಾ ಬಿಡುಗಡೆ ಮಾಡಿದೆ.
#WATCH | On the release of eight Indian Navy veterans from Qatar, Union Minister Anurag Thakur says, “… 45 days ago, their death sentence had been reduced to life imprisonment. And now, by bringing our Navy veterans back home, it is proved that every life is important in the… pic.twitter.com/JJY30mYR6n
— ANI (@ANI) February 12, 2024
ಉಕ್ರೇನ್ನಲ್ಲಿ ಆಪರೇಷನ್ ಗಂಗಾನ ಯಶಸ್ವಿ ಸ್ಥಳಾಂತರಿಸುವ ಪ್ರಯತ್ನಗಳು ಮತ್ತು ನೇಪಾಳ ಮತ್ತು ಅಫ್ಘಾನಿಸ್ತಾನ ಸೇರಿದಂತೆ ವಿವಿಧ ಸಂಘರ್ಷ ಮತ್ತು ವಿಪತ್ತು ಪೀಡಿತ ದೇಶಗಳಿಂದ ಭಾರತೀಯ ವಲಸೆಗಾರರನ್ನು ಸುರಕ್ಷಿತವಾಗಿ ಹಿಂದಿರುಗಿಸುವ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರದ ಬದ್ಧತೆಯನ್ನು ಕೇಂದ್ರ ಸಚಿವರು ಎತ್ತಿ ತೋರಿಸಿದರು. “ಕಳೆದ 10 ವರ್ಷಗಳಲ್ಲಿ ಇದು ಸಂಭವಿಸಿದೆ. ವಿಶ್ವದಲ್ಲಿ ಭಾರತದ ಘನತೆ ಹೆಚ್ಚಾಗಿದೆ” ಎಂದು ಠಾಕೂರ್ ಹೇಳಿದ್ದು, ಭಾರತದ ಜಾಗತಿಕ ನಿಲುವಿನ ಮೇಲೆ ಸರ್ಕಾರದ ಕ್ರಮಗಳ ಸಕಾರಾತ್ಮಕ ಪರಿಣಾಮವನ್ನು ಒತ್ತಿ ಹೇಳಿದರು.
ಎಂಟು ಮಾಜಿ ನೌಕಾಪಡೆ ಅಧಿಕಾರಿಗಳಲ್ಲಿ ಏಳು ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಇಂದು (ಸೋಮವಾರ) ಅಧಿಕೃತ ಹೇಳಿಕೆಯ ಮೂಲಕ ತಿಳಿಸಿದೆ. ಅನುಭವಿ ಅಧಿಕಾರಿಗಳನ್ನು ಮುಕ್ತಗೊಳಿಸುವ ನಿರ್ಧಾರವನ್ನು ಸ್ವಾಗತಿಸುವ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ, “ಕತಾರ್ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ. ಅವರಲ್ಲಿ ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಮನೆಗೆ ಬರಲು ಅನುವು ಮಾಡಿಕೊಡಲು ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದಿದೆ.
ತಮ್ಮ ಯುಎಇ ಭೇಟಿಯನ್ನು ಪೂರ್ಣಗೊಳಿಸಿದ ನಂತರ, ಪ್ರಧಾನಿ ಮೋದಿ ಫೆಬ್ರವರಿ 14 ರಂದು ದೋಹಾಗೆ ಪ್ರಯಾಣಿಸಲಿದ್ದು, ಅಲ್ಲಿ ಕತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ ಹೇಳುತ್ತಿದ್ದಾರೆ: ಪ್ರಲ್ಹಾದ್ ಜೋಶಿ
ಆಗಸ್ಟ್ 2022 ರಿಂದ ಸುಮಾರು 18 ತಿಂಗಳ ಕಾಲ ಕತಾರ್ನಲ್ಲಿ ಬಂಧಿತರಾಗಿದ್ದ ಎಂಟು ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ನಂತರ ಭಾರತದ ರಾಜತಾಂತ್ರಿಕ ವಿಜಯದ ನಂತರ ಈ ಭೇಟಿ ಮಹತ್ವವನ್ನು ಪಡೆದುಕೊಂಡಿದೆ. “ಫೆಬ್ರವರಿ 14 ರಂದು ಯುಎಇಯಿಂದ ತಮ್ಮ ಭೇಟಿಯನ್ನು ಪೂರ್ಣಗೊಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 14 ರಂದು ದೋಹಾ, ಕತಾರ್ಗೆ ಪ್ರಯಾಣಿಸಲಿದ್ದಾರೆ. ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಕತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಮತ್ತು ಇತರ ಉನ್ನತ ಗಣ್ಯರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ”ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಪ್ರಧಾನಿ ಮೋದಿಯವರ ಯುಎಇ ಭೇಟಿಯ ಕುರಿತು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ