AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್ ವಿಮಾ ಭ್ರಷ್ಟಾಚಾರ ಪ್ರಕರಣ: ಜಮ್ಮು, ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್​ಗೆ ಸಿಬಿಐ ಸಮನ್ಸ್

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಏಪ್ರಿಲ್ 28 ರಂದು ರಿಲಯನ್ಸ್ ಜನರಲ್ ಇನ್ಶುರೆನ್ಸ್ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಬರುವಂತೆ ಸಮನ್ಸ್​ ನೀಡಿದೆ.

ರಿಲಯನ್ಸ್ ವಿಮಾ ಭ್ರಷ್ಟಾಚಾರ ಪ್ರಕರಣ: ಜಮ್ಮು, ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್​ಗೆ ಸಿಬಿಐ ಸಮನ್ಸ್
ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:Apr 22, 2023 | 11:34 AM

Share

ದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu, Kashmir) ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ (Satya Pal Malik) ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಏಪ್ರಿಲ್ 28 ರಂದು ರಿಲಯನ್ಸ್ ಜನರಲ್ ಇನ್ಶುರೆನ್ಸ್ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಬರುವಂತೆ ಸಮನ್ಸ್​ ನೀಡಿದೆ. ದೆಹಲಿಯಲ್ಲಿರುವ ಏಜೆನ್ಸಿಯ ಅಕ್ಬರ್ ರೋಡ್ ಗೆಸ್ಟ್‌ಹೌಸ್‌ನಲ್ಲಿ ಕೆಲವು ಸ್ಪಷ್ಟೀಕರಣಗಳಿಗಾಗಿ ಸಿಬಿಐ ನನಗೆ ನೋಟಿಸ್ ನೀಡಿದೆ ಎಂದು ಸತ್ಯಪಾಲ್ ಮಲಿಕ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ಸಿಬಿಐ ರಿಲಯನ್ಸ್ ಜನರಲ್ ಇನ್ಶುರೆನ್ಸ್ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಕೆಲವು ಸ್ಪಷ್ಟೀಕರಣಗಳನ್ನು ಕೇಳಲು ಬಯಸುತ್ತಿದೆ, ಅದಕ್ಕಾಗಿ ನನ್ನನ್ನೂ ದೆಹಲಿಗೆ ಬರುವಂತೆ ತಿಳಿಸಿದೆ. ನಾನು ಈಗಾಗಲೇ ರಾಜಸ್ಥಾನಕ್ಕೆ ಹೋಗುತ್ತಿದ್ದೇನೆ ಹಾಗಾಗಿ ನಾನು ಏಪ್ರಿಲ್ 27 ರಿಂದ 29 ರವರೆಗೆ ದಿನಾಂಕವನ್ನು ತನಿಖಾ ದಳಕ್ಕೆ ನೀಡಿದ್ದೇನೆ ಸತ್ಯಪಾಲ್ ಮಲಿಕ್ ಪಿಟಿಐಗೆ ತಿಳಿಸಿದರು.

ಸತ್ಯಪಾಲ್ ಮಲಿಕ್ ಅವರು 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದಾಗ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಡೆತನದ ಕಂಪನಿಯ ಒಪ್ಪಂದವನ್ನು ರದ್ದುಗೊಳಿಸಿದ್ದರು. ತನಿಖಾ ಸಂಸ್ಥೆ ದಾಖಲಿಸಿಕೊಂಡ ಎಫ್‌ಐಆರ್ (ಮೊದಲ ಮಾಹಿತಿ ವರದಿಯಲ್ಲಿ) ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ವೈದ್ಯಕೀಯ ವಿಮಾ ಯೋಜನೆಯನ್ನು ಮಾಡುವಾಗ ದೊಡ್ಡ ಹಗರಣದಲ್ಲಿ ರಿಲಯನ್ಸ್ ಜನರಲ್ ಇನ್ಶುರೆನ್ಸ್ ಜೊತೆಗೆ ಟ್ರಿನಿಟಿ ಮರುವಿಮಾ ಬ್ರೋಕರ್‌ಗಳ ಕೈವಾಡ ಇದೆ ಎಂದು ಸಿಬಿಐ ಹೇಳಿದೆ.

ಸತ್ಯಪಾಲ್ ಮಲಿಕ್ ಅವರು ವಿಮಾ ಈ ಯೋಜನೆಯಲ್ಲಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ, ಈ ಕಾರಣಕ್ಕೆ ಸಿಬಿಐ ಅವರನ್ನು ತನಿಖೆಗೆ ಬರುವಂತೆ ತಿಳಿಸಿದೆ. ಸುಮಾರು 3.5 ಲಕ್ಷ ಉದ್ಯೋಗಿಗಳನ್ನು ಒಳಗೊಂಡಿರುವ ಈ ಯೋಜನೆಯನ್ನು ಸೆಪ್ಟೆಂಬರ್ 2018ರಲ್ಲಿ ಬಿಡುಗಡೆ ಮಾಡಲಾಗಿತ್ತು. ನಂತರ ಈ ಯೋಜನೆಯನ್ನು ಅಂದಿನ ಜಮ್ಮು ಮತ್ತು ಕಾಶ್ಮೀರದ ಗವರ್ನರ್​ ಸತ್ಯಪಾಲ್ ಮಲಿಕ್ ಒಂದು ತಿಂಗಳೊಳಗೆ ರದ್ದುಗೊಳಿಸಿದರು.

ಇದನ್ನೂ ಓದಿ;ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ: ಮೇಘಾಲಯ ಗವರ್ನರ್ ಸತ್ಯಪಾಲ್ ಮಲಿಕ್

ರಾಜ್ಯ ಸರ್ಕಾರಿ ನೌಕರರು ಒಪ್ಪಂದವನ್ನು ಮೋಸವಾಗಿದೆ ಎಂದು ಪ್ರಾಥಮಿಕವಾಗಿ ಕಾಣುತ್ತಿದೆ ಎಂದು ಈ ಯೋಜನೆಯನ್ನು ಸತ್ಯಪಾಲ್ ಮಲಿಕ್ ರದ್ದುಗೊಳಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಪರಿಶೀಲಿಸಿದ ನಂತರ ಈ ತೀರ್ಮಾನಕ್ಕೆ ಬರಲಾಗಿತ್ತು ಎಂದು ಸತ್ಯಪಾಲ್ ಮಲಿಕ್ ಹೇಳಿದ್ದರು. ನಾನೇ ಈ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದ್ದೇನೆ ಮತ್ತು ಒಪ್ಪಂದವನ್ನು ತಪ್ಪಾಗಿ ನೀಡಲಾಗಿದೆ ಎಂಬ ತೀರ್ಮಾನಕ್ಕೆ ಬಂದ ನಂತರ ಈ ಯೋಜನೆಯನ್ನು ನಾನು ಅದನ್ನು ರದ್ದುಗೊಳಿಸಿದೆ ಹೇಳಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸತ್ಯಪಾಲ್ ಮಲಿಕ್ ಅವರು ವಿಮಾ ಸಂಸ್ಥೆಗಳ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಕಿರು ಜಲವಿದ್ಯುತ್ ಯೋಜನೆಯಲ್ಲಿ ಸಿವಿಲ್ ಕಾಮಗಾರಿಯ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಿಬಿಐಗೆ ದೂರು ನೀಡಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Sat, 22 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ