AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ಎಫೆಕ್ಟ್​: ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ

Reliance Jio | Farmers Protest: ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, 2020ರ ಡಿಸೆಂಬರ್​​ನಲ್ಲಿ ಜಿಯೋ ಪಂಜಾಬ್​ ಹಾಗೂ ಹರಿಯಾಣ ರಾಜ್ಯಗಳಲ್ಲಿ ಸಬ್​ಸ್ಕ್ರೈಬರ್​ಗಳನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಎಫೆಕ್ಟ್​: ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ
ಜಿಯೋ 888 ರೂ. ಪ್ಲ್ಯಾನ್: ಜಿಯೋ ಪ್ರಿಪೇಯ್ಡ್ ಬಳಕೆದಾರರಿಗೆ 888 ರೂ. ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆ ನೀಡಿದ್ದು, ಇದರ ವಾಲಿಡಿಟಿ 84 ದಿನಗಳು. ಈ ಪ್ಲ್ಯಾನ್​ನಲ್ಲೂ ಅನಿಯಮಿತ ಕರೆ ಹಾಗೂ ಪ್ರತಿ ದಿನ 2GB ಡೇಟಾ ಸಿಗಲಿದೆ. ಇನ್ನು ಬೋನಸ್ ಆಗಿ 5 ಜಿಬಿ 4 ಜಿ ಡೇಟಾವನ್ನು ಕೂಡ ನೀಡಲಿದೆ. ಅದರೊಂದಿಗೆ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಉಚಿತ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ಪ್ರವೇಶ ಪಡೆಯಬಹುದು.
ರಾಜೇಶ್ ದುಗ್ಗುಮನೆ
| Edited By: |

Updated on:Feb 19, 2021 | 3:16 PM

Share

ನವದೆಹಲಿ: ಕೆಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆಯಿಂದ ಮುಕೇಶ್​ ಅಂಬಾನಿಗೆ ಲಾಭವಾಗಲಿದೆ ಎನ್ನುವ ವದಂತಿಯಿಂದ ರಿಲಯನ್ಸ್​ ಜಿಯೋಗೆ ದೊಡ್ಡ ನಷ್ಟ ಉಂಟಾಗಿದೆ. ಕಳೆದ ಡಿಸೆಂಬರ್​ ತಿಂಗಳಲ್ಲಿ ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ. ನವೆಂಬರ್ ಅಂತ್ಯದ ವೇಳೆಗೆ ರೈತರು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಮಧ್ಯೆ, ಕೃಷಿ ಕಾಯ್ದೆಗಳು ರಿಲಯನ್ಸ್​ಗೆ ಸಹಕಾರಿಯಾಗಲಿವೆ ಎನ್ನುವ ವದಂತಿ ಹರಿದಾಡಿತ್ತು. ಇದರಿಂದ ಸಿಟ್ಟಾದ ರೈತರು ಜಿಯೋದಿಂದ ಬೇರೆ ನೆಟ್​ವರ್ಕ್​ಗೆ ಪೋರ್ಟ್​​ ಆಗಿದ್ದರು. ಇದರ ಹಿಂದೆ ಏರ್​​ಟೆಲ್​ ಹಾಗೂ ವಡಾಫೋನ್​-ಐಡಿಯಾ ಕೈವಾಡವಿದೆ ಎಂದು ಜಿಯೋ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದಲ್ಲಿ (TRAI) ದೂರನ್ನು ಕೂಡ ದಾಖಲಿಸಿತ್ತು. ಈ ಎಲ್ಲಾ ಬೆಳವಣಿಗೆಯಿಂದ ಜಿಯೋಗೆ ನಷ್ಟ ಉಂಟಾಗಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, 2020ರ ಡಿಸೆಂಬರ್​​ನಲ್ಲಿ ಜಿಯೋ ಪಂಜಾಬ್​ ಹಾಗೂ ಹರಿಯಾಣ ರಾಜ್ಯಗಳಲ್ಲಿ ಚಂದಾದಾರನ್ನು ಕಳೆದುಕೊಂಡಿದೆ. ವಿಚಿತ್ರ ಎಂದರೆ, ಜಿಯೋ​ ಚಂದಾದಾರನ್ನು ಕಳೆದುಕೊಂಡಿರುವುದು ಈ ಎರಡು ರಾಜ್ಯಗಳಲ್ಲಿ ಮಾತ್ರ. 2019ರ ನವೆಂಬರ್​ನಲ್ಲಿ ಪಂಜಾಬ್​ನಲ್ಲಿ 1.40 ಕೋಟಿ ಮಂದಿ ಜಿಯೋ ಸಿಮ್ ಬಳಸುತ್ತಿದ್ದರು. ಡಿಸೆಂಬರ್ ಅಂತ್ಯಕ್ಕೆ ಈ ಸಂಖ್ಯೆ 1.25 ಕೋಟಿಗೆ ಇಳಿಕೆ ಆಗಿತ್ತು. ಇನ್ನು, ಹರಿಯಾಣದಲ್ಲಿ ಕಳೆದ ನವೆಂಬರ್​ನಲ್ಲಿ 94.48 ಲಕ್ಷ ಇದ್ದ ಜಿಯೋ ಬಳಕೆದಾರರು ಡಿಸೆಂಬರ್​ ವೇಳೆಗೆ 89.07 ಲಕ್ಷಕ್ಕೆ ಇಳಿಕೆ ಆಗಿದೆ. ಲಾಂಚ್​ ಆದಾಗಿನಿಂದ ರಾಜ್ಯವೊಂದರಲ್ಲಿ ಜಿಯೋ ತನ್ನ ಚಂದಾದಾರನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕಳೆದುಕೊಂಡಿದ್ದು ಇದೇ ಮೊದಲು.

ಬಳಕೆದಾರರು ಕಡಿಮೆ ಆಗುವುದಕ್ಕೆ ಏರ್​ಟೆಲ್​ ಹಾಗೂ ವೊಡಾಫೋನ್​-ಇಡಿಯಾ ಕಾರಣ. ಇದಕ್ಕಾಗಿ ಅವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ರಿಲಯನ್ಸ್​ ಜಿಯೋ ಹೇಳುತ್ತಲೇ ಬಂದಿದೆ. ಆದರೆ, ಈ ಆರೋಪವನ್ನು ಏರ್​ಟೆಲ್​ ಹಾಗೂ ವೊಡಾಫೋನ್​-ಇಡಿಯಾ ತಳ್ಳಿ ಹಾಕಿವೆ. ಕೃಷಿ ಕಾಯ್ದೆಯನ್ನು ವಿರೋಧಿಸಿ ನವೆಂಬರ್​ ತಿಂಗಳಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ ಹಲವು ಹಂತದ ಮಾತುಕತೆ ಕೂಡ ವಿಫಲವಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಡೇಟಾ ಬೆಲೆ ಕಡಿಮೆಗೊಳಿಸಿದ ರಿಲಯನ್ಸ್ ಜಿಯೋವನ್ನು ಹೊಗಳಿದ ನೆಟ್‌ಫ್ಲಿಕ್ಸ್ ಸಿಇಒ

Published On - 2:57 pm, Fri, 19 February 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ