AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ಎಫೆಕ್ಟ್​: ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ

Reliance Jio | Farmers Protest: ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, 2020ರ ಡಿಸೆಂಬರ್​​ನಲ್ಲಿ ಜಿಯೋ ಪಂಜಾಬ್​ ಹಾಗೂ ಹರಿಯಾಣ ರಾಜ್ಯಗಳಲ್ಲಿ ಸಬ್​ಸ್ಕ್ರೈಬರ್​ಗಳನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಎಫೆಕ್ಟ್​: ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ
ಜಿಯೋ 888 ರೂ. ಪ್ಲ್ಯಾನ್: ಜಿಯೋ ಪ್ರಿಪೇಯ್ಡ್ ಬಳಕೆದಾರರಿಗೆ 888 ರೂ. ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆ ನೀಡಿದ್ದು, ಇದರ ವಾಲಿಡಿಟಿ 84 ದಿನಗಳು. ಈ ಪ್ಲ್ಯಾನ್​ನಲ್ಲೂ ಅನಿಯಮಿತ ಕರೆ ಹಾಗೂ ಪ್ರತಿ ದಿನ 2GB ಡೇಟಾ ಸಿಗಲಿದೆ. ಇನ್ನು ಬೋನಸ್ ಆಗಿ 5 ಜಿಬಿ 4 ಜಿ ಡೇಟಾವನ್ನು ಕೂಡ ನೀಡಲಿದೆ. ಅದರೊಂದಿಗೆ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಉಚಿತ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ಪ್ರವೇಶ ಪಡೆಯಬಹುದು.
ರಾಜೇಶ್ ದುಗ್ಗುಮನೆ
| Edited By: |

Updated on:Feb 19, 2021 | 3:16 PM

Share

ನವದೆಹಲಿ: ಕೆಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆಯಿಂದ ಮುಕೇಶ್​ ಅಂಬಾನಿಗೆ ಲಾಭವಾಗಲಿದೆ ಎನ್ನುವ ವದಂತಿಯಿಂದ ರಿಲಯನ್ಸ್​ ಜಿಯೋಗೆ ದೊಡ್ಡ ನಷ್ಟ ಉಂಟಾಗಿದೆ. ಕಳೆದ ಡಿಸೆಂಬರ್​ ತಿಂಗಳಲ್ಲಿ ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ. ನವೆಂಬರ್ ಅಂತ್ಯದ ವೇಳೆಗೆ ರೈತರು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಮಧ್ಯೆ, ಕೃಷಿ ಕಾಯ್ದೆಗಳು ರಿಲಯನ್ಸ್​ಗೆ ಸಹಕಾರಿಯಾಗಲಿವೆ ಎನ್ನುವ ವದಂತಿ ಹರಿದಾಡಿತ್ತು. ಇದರಿಂದ ಸಿಟ್ಟಾದ ರೈತರು ಜಿಯೋದಿಂದ ಬೇರೆ ನೆಟ್​ವರ್ಕ್​ಗೆ ಪೋರ್ಟ್​​ ಆಗಿದ್ದರು. ಇದರ ಹಿಂದೆ ಏರ್​​ಟೆಲ್​ ಹಾಗೂ ವಡಾಫೋನ್​-ಐಡಿಯಾ ಕೈವಾಡವಿದೆ ಎಂದು ಜಿಯೋ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದಲ್ಲಿ (TRAI) ದೂರನ್ನು ಕೂಡ ದಾಖಲಿಸಿತ್ತು. ಈ ಎಲ್ಲಾ ಬೆಳವಣಿಗೆಯಿಂದ ಜಿಯೋಗೆ ನಷ್ಟ ಉಂಟಾಗಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, 2020ರ ಡಿಸೆಂಬರ್​​ನಲ್ಲಿ ಜಿಯೋ ಪಂಜಾಬ್​ ಹಾಗೂ ಹರಿಯಾಣ ರಾಜ್ಯಗಳಲ್ಲಿ ಚಂದಾದಾರನ್ನು ಕಳೆದುಕೊಂಡಿದೆ. ವಿಚಿತ್ರ ಎಂದರೆ, ಜಿಯೋ​ ಚಂದಾದಾರನ್ನು ಕಳೆದುಕೊಂಡಿರುವುದು ಈ ಎರಡು ರಾಜ್ಯಗಳಲ್ಲಿ ಮಾತ್ರ. 2019ರ ನವೆಂಬರ್​ನಲ್ಲಿ ಪಂಜಾಬ್​ನಲ್ಲಿ 1.40 ಕೋಟಿ ಮಂದಿ ಜಿಯೋ ಸಿಮ್ ಬಳಸುತ್ತಿದ್ದರು. ಡಿಸೆಂಬರ್ ಅಂತ್ಯಕ್ಕೆ ಈ ಸಂಖ್ಯೆ 1.25 ಕೋಟಿಗೆ ಇಳಿಕೆ ಆಗಿತ್ತು. ಇನ್ನು, ಹರಿಯಾಣದಲ್ಲಿ ಕಳೆದ ನವೆಂಬರ್​ನಲ್ಲಿ 94.48 ಲಕ್ಷ ಇದ್ದ ಜಿಯೋ ಬಳಕೆದಾರರು ಡಿಸೆಂಬರ್​ ವೇಳೆಗೆ 89.07 ಲಕ್ಷಕ್ಕೆ ಇಳಿಕೆ ಆಗಿದೆ. ಲಾಂಚ್​ ಆದಾಗಿನಿಂದ ರಾಜ್ಯವೊಂದರಲ್ಲಿ ಜಿಯೋ ತನ್ನ ಚಂದಾದಾರನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕಳೆದುಕೊಂಡಿದ್ದು ಇದೇ ಮೊದಲು.

ಬಳಕೆದಾರರು ಕಡಿಮೆ ಆಗುವುದಕ್ಕೆ ಏರ್​ಟೆಲ್​ ಹಾಗೂ ವೊಡಾಫೋನ್​-ಇಡಿಯಾ ಕಾರಣ. ಇದಕ್ಕಾಗಿ ಅವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ರಿಲಯನ್ಸ್​ ಜಿಯೋ ಹೇಳುತ್ತಲೇ ಬಂದಿದೆ. ಆದರೆ, ಈ ಆರೋಪವನ್ನು ಏರ್​ಟೆಲ್​ ಹಾಗೂ ವೊಡಾಫೋನ್​-ಇಡಿಯಾ ತಳ್ಳಿ ಹಾಕಿವೆ. ಕೃಷಿ ಕಾಯ್ದೆಯನ್ನು ವಿರೋಧಿಸಿ ನವೆಂಬರ್​ ತಿಂಗಳಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ ಹಲವು ಹಂತದ ಮಾತುಕತೆ ಕೂಡ ವಿಫಲವಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಡೇಟಾ ಬೆಲೆ ಕಡಿಮೆಗೊಳಿಸಿದ ರಿಲಯನ್ಸ್ ಜಿಯೋವನ್ನು ಹೊಗಳಿದ ನೆಟ್‌ಫ್ಲಿಕ್ಸ್ ಸಿಇಒ

Published On - 2:57 pm, Fri, 19 February 21

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು