AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ಎಫೆಕ್ಟ್​: ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ

Reliance Jio | Farmers Protest: ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, 2020ರ ಡಿಸೆಂಬರ್​​ನಲ್ಲಿ ಜಿಯೋ ಪಂಜಾಬ್​ ಹಾಗೂ ಹರಿಯಾಣ ರಾಜ್ಯಗಳಲ್ಲಿ ಸಬ್​ಸ್ಕ್ರೈಬರ್​ಗಳನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಎಫೆಕ್ಟ್​: ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ
ಜಿಯೋ 888 ರೂ. ಪ್ಲ್ಯಾನ್: ಜಿಯೋ ಪ್ರಿಪೇಯ್ಡ್ ಬಳಕೆದಾರರಿಗೆ 888 ರೂ. ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆ ನೀಡಿದ್ದು, ಇದರ ವಾಲಿಡಿಟಿ 84 ದಿನಗಳು. ಈ ಪ್ಲ್ಯಾನ್​ನಲ್ಲೂ ಅನಿಯಮಿತ ಕರೆ ಹಾಗೂ ಪ್ರತಿ ದಿನ 2GB ಡೇಟಾ ಸಿಗಲಿದೆ. ಇನ್ನು ಬೋನಸ್ ಆಗಿ 5 ಜಿಬಿ 4 ಜಿ ಡೇಟಾವನ್ನು ಕೂಡ ನೀಡಲಿದೆ. ಅದರೊಂದಿಗೆ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಉಚಿತ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ಪ್ರವೇಶ ಪಡೆಯಬಹುದು.
ರಾಜೇಶ್ ದುಗ್ಗುಮನೆ
| Edited By: |

Updated on:Feb 19, 2021 | 3:16 PM

Share

ನವದೆಹಲಿ: ಕೆಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆಯಿಂದ ಮುಕೇಶ್​ ಅಂಬಾನಿಗೆ ಲಾಭವಾಗಲಿದೆ ಎನ್ನುವ ವದಂತಿಯಿಂದ ರಿಲಯನ್ಸ್​ ಜಿಯೋಗೆ ದೊಡ್ಡ ನಷ್ಟ ಉಂಟಾಗಿದೆ. ಕಳೆದ ಡಿಸೆಂಬರ್​ ತಿಂಗಳಲ್ಲಿ ಜಿಯೋ ಚಂದಾದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ. ನವೆಂಬರ್ ಅಂತ್ಯದ ವೇಳೆಗೆ ರೈತರು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಮಧ್ಯೆ, ಕೃಷಿ ಕಾಯ್ದೆಗಳು ರಿಲಯನ್ಸ್​ಗೆ ಸಹಕಾರಿಯಾಗಲಿವೆ ಎನ್ನುವ ವದಂತಿ ಹರಿದಾಡಿತ್ತು. ಇದರಿಂದ ಸಿಟ್ಟಾದ ರೈತರು ಜಿಯೋದಿಂದ ಬೇರೆ ನೆಟ್​ವರ್ಕ್​ಗೆ ಪೋರ್ಟ್​​ ಆಗಿದ್ದರು. ಇದರ ಹಿಂದೆ ಏರ್​​ಟೆಲ್​ ಹಾಗೂ ವಡಾಫೋನ್​-ಐಡಿಯಾ ಕೈವಾಡವಿದೆ ಎಂದು ಜಿಯೋ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದಲ್ಲಿ (TRAI) ದೂರನ್ನು ಕೂಡ ದಾಖಲಿಸಿತ್ತು. ಈ ಎಲ್ಲಾ ಬೆಳವಣಿಗೆಯಿಂದ ಜಿಯೋಗೆ ನಷ್ಟ ಉಂಟಾಗಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, 2020ರ ಡಿಸೆಂಬರ್​​ನಲ್ಲಿ ಜಿಯೋ ಪಂಜಾಬ್​ ಹಾಗೂ ಹರಿಯಾಣ ರಾಜ್ಯಗಳಲ್ಲಿ ಚಂದಾದಾರನ್ನು ಕಳೆದುಕೊಂಡಿದೆ. ವಿಚಿತ್ರ ಎಂದರೆ, ಜಿಯೋ​ ಚಂದಾದಾರನ್ನು ಕಳೆದುಕೊಂಡಿರುವುದು ಈ ಎರಡು ರಾಜ್ಯಗಳಲ್ಲಿ ಮಾತ್ರ. 2019ರ ನವೆಂಬರ್​ನಲ್ಲಿ ಪಂಜಾಬ್​ನಲ್ಲಿ 1.40 ಕೋಟಿ ಮಂದಿ ಜಿಯೋ ಸಿಮ್ ಬಳಸುತ್ತಿದ್ದರು. ಡಿಸೆಂಬರ್ ಅಂತ್ಯಕ್ಕೆ ಈ ಸಂಖ್ಯೆ 1.25 ಕೋಟಿಗೆ ಇಳಿಕೆ ಆಗಿತ್ತು. ಇನ್ನು, ಹರಿಯಾಣದಲ್ಲಿ ಕಳೆದ ನವೆಂಬರ್​ನಲ್ಲಿ 94.48 ಲಕ್ಷ ಇದ್ದ ಜಿಯೋ ಬಳಕೆದಾರರು ಡಿಸೆಂಬರ್​ ವೇಳೆಗೆ 89.07 ಲಕ್ಷಕ್ಕೆ ಇಳಿಕೆ ಆಗಿದೆ. ಲಾಂಚ್​ ಆದಾಗಿನಿಂದ ರಾಜ್ಯವೊಂದರಲ್ಲಿ ಜಿಯೋ ತನ್ನ ಚಂದಾದಾರನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕಳೆದುಕೊಂಡಿದ್ದು ಇದೇ ಮೊದಲು.

ಬಳಕೆದಾರರು ಕಡಿಮೆ ಆಗುವುದಕ್ಕೆ ಏರ್​ಟೆಲ್​ ಹಾಗೂ ವೊಡಾಫೋನ್​-ಇಡಿಯಾ ಕಾರಣ. ಇದಕ್ಕಾಗಿ ಅವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ರಿಲಯನ್ಸ್​ ಜಿಯೋ ಹೇಳುತ್ತಲೇ ಬಂದಿದೆ. ಆದರೆ, ಈ ಆರೋಪವನ್ನು ಏರ್​ಟೆಲ್​ ಹಾಗೂ ವೊಡಾಫೋನ್​-ಇಡಿಯಾ ತಳ್ಳಿ ಹಾಕಿವೆ. ಕೃಷಿ ಕಾಯ್ದೆಯನ್ನು ವಿರೋಧಿಸಿ ನವೆಂಬರ್​ ತಿಂಗಳಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ ಹಲವು ಹಂತದ ಮಾತುಕತೆ ಕೂಡ ವಿಫಲವಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಡೇಟಾ ಬೆಲೆ ಕಡಿಮೆಗೊಳಿಸಿದ ರಿಲಯನ್ಸ್ ಜಿಯೋವನ್ನು ಹೊಗಳಿದ ನೆಟ್‌ಫ್ಲಿಕ್ಸ್ ಸಿಇಒ

Published On - 2:57 pm, Fri, 19 February 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ