AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್ ಮತ್ತೊಂದು ಮೈಲಿಗಲ್ಲು, ಇಂಧನ ವಲಯದಲ್ಲಿ ಜಾಗತಿಕವಾಗಿ 2ನೇ ಸ್ಥಾನ

ವಿಶ್ವದ ಅತಿದೊಡ್ಡ ಉದ್ದಿಮೆಯಾಗಿ ಬೆಳೆಯುವತ್ತ ದಾಪುಗಾಲಿಡುತ್ತಿರುವ ಮುಕೇಶ್ ಆಂಬಾನಿಯ ರಿಲಯನ್ಸ್ ಸಂಸ್ಥೆಯು, ಕಳೆದ ಶುಕ್ರವಾರದಂದು ತನ್ನ ಗುರಿಗೆ ಮತ್ತಷ್ಟು ಹತ್ತಿರವಾಗಿದೆ. ಇಂಧನ ವಲಯದಲ್ಲಿ ಅಮೆರಿಕದ ದೈತ್ಯ ಎಕ್ಸಾನ್ ಕಂಪನಿಯನ್ನು ಹಿಂದಿಕ್ಕಿರುವ ರಿಲಯನ್ಸ್, ಜಗತ್ತಿನ ಎರಡನೇ ಅತಿ ದೊಡ್ಡ ಇಂಧನ ಸಂಸ್ಥೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 1.75 ಟ್ರಿಲಿಯನ್ ಡಾಲರ್ನಷ್ಟು ಮಾರುಕಟ್ಟೆ ಪಾಲು ಹೊಂದಿರುವ ಸೌದಿ ಅರೇಬಿಯಾದ ಅರಾಮ್ಕೊ ಸಂಸ್ಥೆ ಮಾತ್ರ ರಿಲಯನ್ಸ್ ಇಂಡಸ್ಟ್ರೀಸ್ಗಿಂತ ಗಾತ್ರ, ಆದಾಯ ಮತ್ತು ವಹಿವಾಟಿನಲ್ಲಿ ಮುಂದಿದೆ. ಮೂಲಗಳ ಪ್ರಕಾರ ಈ ವರ್ಷ ಅಂಬಾನಿ ಕಂಪನಿಯ […]

ರಿಲಯನ್ಸ್ ಮತ್ತೊಂದು ಮೈಲಿಗಲ್ಲು, ಇಂಧನ ವಲಯದಲ್ಲಿ ಜಾಗತಿಕವಾಗಿ 2ನೇ ಸ್ಥಾನ
ಆಯೇಷಾ ಬಾನು
| Edited By: |

Updated on:Jul 28, 2020 | 12:04 PM

Share

ವಿಶ್ವದ ಅತಿದೊಡ್ಡ ಉದ್ದಿಮೆಯಾಗಿ ಬೆಳೆಯುವತ್ತ ದಾಪುಗಾಲಿಡುತ್ತಿರುವ ಮುಕೇಶ್ ಆಂಬಾನಿಯ ರಿಲಯನ್ಸ್ ಸಂಸ್ಥೆಯು, ಕಳೆದ ಶುಕ್ರವಾರದಂದು ತನ್ನ ಗುರಿಗೆ ಮತ್ತಷ್ಟು ಹತ್ತಿರವಾಗಿದೆ. ಇಂಧನ ವಲಯದಲ್ಲಿ ಅಮೆರಿಕದ ದೈತ್ಯ ಎಕ್ಸಾನ್ ಕಂಪನಿಯನ್ನು ಹಿಂದಿಕ್ಕಿರುವ ರಿಲಯನ್ಸ್, ಜಗತ್ತಿನ ಎರಡನೇ ಅತಿ ದೊಡ್ಡ ಇಂಧನ ಸಂಸ್ಥೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

1.75 ಟ್ರಿಲಿಯನ್ ಡಾಲರ್ನಷ್ಟು ಮಾರುಕಟ್ಟೆ ಪಾಲು ಹೊಂದಿರುವ ಸೌದಿ ಅರೇಬಿಯಾದ ಅರಾಮ್ಕೊ ಸಂಸ್ಥೆ ಮಾತ್ರ ರಿಲಯನ್ಸ್ ಇಂಡಸ್ಟ್ರೀಸ್ಗಿಂತ ಗಾತ್ರ, ಆದಾಯ ಮತ್ತು ವಹಿವಾಟಿನಲ್ಲಿ ಮುಂದಿದೆ.

ಮೂಲಗಳ ಪ್ರಕಾರ ಈ ವರ್ಷ ಅಂಬಾನಿ ಕಂಪನಿಯ ಷೇರು ಶೇಕಡಾ 50 ರಷ್ಟು ಏರಿಕೆಯಾಗಿದೆ. ರಿಲಯನ್ಸ್ ಸಂಸ್ಥೆ ಈಗಾಗಲೇ ಡಿಜಿಟಲ್ ಮತ್ತು ರಿಟೇಲ್ ಉದ್ಯಮಗಳಲ್ಲಿ ಶೇಕಡಾ 46ರಷ್ಟು ವಿದೇಶಿ ಹೂಡಿಕೆ ಗಿಟ್ಟಿಸಿಕೊಂಡಿದ್ದು ಸ್ವದೇಶದ ಹೂಡಿಕೆದಾರರನ್ನು ಸಹ ಸೆಳೆಯುತ್ತಿದೆ.

ತಮ್ಮ ತಂದೆ ಧೀರೂಭಾಯಿ ಮರಣಾನಂತರ ಕಂಪನಿಯ ಸಾರಥ್ಯವಹಿಸಿಕೊಂಡ ಮುಕೇಶ್, ಅತ್ಯಂತ ಚಾಣಾಕ್ಷತೆಯಂದ ಅದನ್ನು ಮುನ್ನಡೆಸುತ್ತಾ ವಿಶ್ವದ ಅತಿದೊಡ್ಡ ಕಂಪನಿಗಳಲ್ಲೊಂದಾಗಿ ಮಾರ್ಪಡಿಸಿದ್ದಾರೆ. ಅವರ ಕಾರ್ಯಕ್ಷಮತೆ ಮತ್ತು ವ್ಯಾವಹಾರಿಕ ಬದ್ಧಿಮತ್ತಗೆ ಮಾರುಹೋಗಿರುವ ಗೂಗಲ್ ಮತ್ತು ಫೇಸ್ಬುಕ್ನಂಥ ಪ್ರತಿಷ್ಥಿತ ಸಂಸ್ಥೆಗಳು ಸಹ ರಿಲಯನ್ಸ್ನಲ್ಲಿ ಹೂಡಿಕೆ ಮಾಡಿವೆ.

ಕೊರೊನಾ ಹೊಡೆತಕ್ಕೆ ವಿಶ್ವದ ಎಲ್ಲಾ ಪ್ರಮುಖ ಕಂಪನಿಗಳು ತತ್ತರಿಸಿ ಅಪಾರ ನಷ್ಟ ಅನುಭವಿಸುತ್ತಿದ್ದರೆ, ರಿಲಯನ್ಸ್ ಮಾತ್ರ ತನ್ನ ಮಾರುಕಟ್ಟೆ ಹಾಗೂ ವಹಿವಾಟನ್ನು ಸತತವಾಗಿ ವಿಸ್ತರಿಸುತ್ತಿದೆ.

Published On - 8:06 am, Tue, 28 July 20

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ