AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಹೇಳಿಕೆ ನೀಡಿದ ಶರದ್ ಪವಾರ್ ವಿರುದ್ಧ ಪಿಯೂಷ್ ಗೋಯಲ್ ವಾಗ್ದಾಳಿ

ವಿಶ್ವದ ಯಾವುದೇ ಭಾಗದಲ್ಲಿ ಭಯೋತ್ಪಾದನೆಯ ಪಿಡುಗನ್ನು ಎಲ್ಲಾ ರೀತಿಯಲ್ಲೂ ಖಂಡಿಸಬೇಕು ಎಂದು ಹೇಳಿದ ಗೋಯಲ್, ಪವಾರ್ ಅವರು ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕಣ್ಣೀರು ಸುರಿಸಿದ ಮತ್ತು ಭಾರತದ ನೆಲದಲ್ಲಿ ಭಯೋತ್ಪಾದಕ ದಾಳಿಗಳು ನಡೆದಾಗ ಮಲಗಿದ್ದ ಅದೇ ಸರ್ಕಾರದ ಭಾಗವಾಗಿದ್ದರು ಎಂದಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಹೇಳಿಕೆ ನೀಡಿದ ಶರದ್ ಪವಾರ್ ವಿರುದ್ಧ ಪಿಯೂಷ್ ಗೋಯಲ್ ವಾಗ್ದಾಳಿ
ಪಿಯೂಷ್ ಗೋಯಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 18, 2023 | 7:22 PM

Share

ದೆಹಲಿ ಅಕ್ಟೋಬರ್ 18: ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ (Israel-Palestine Conflict) ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal)  ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿರಿಯ ನಾಯಕನಿಗೆ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ “ಸಾಧಾರಣ ದೃಷ್ಟಿಕೋನ” ಇದ್ದು, ಇಂಥಾ ಕೊಳೆತ ಮನಸ್ಥಿತಿ ನಿಲ್ಲಬೇಕಿದೆ ಎಂದು ಗೋಯಲ್ ಹೇಳಿದ್ದಾರೆ. 1991 ರಿಂದ 1993 ರವರೆಗೆ ಪ್ರಧಾನಿ ಪಿ.ವಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಭಾರತದ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ ಪವಾರ್, ಪ್ಯಾಲೆಸ್ತೀನ್ ಮೂಲದ ಭಯೋತ್ಪಾದಕ ಗುಂಪು ಹಮಾಸ್‌ನೊಂದಿಗಿನ ಯುದ್ಧ ಮಾಡುತ್ತಿರುವ ಇಸ್ರೇಲ್‌ನ ಪರವಾಗಿ ಭಾರತ 100 ಪ್ರತಿಶತದಷ್ಟು ಬೆಂಬಲವಾಗಿ ನಿಂತಿದೆ ಎಂದು ನಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಭಾರತದ ನಿಲುವಿನ ಬಗ್ಗೆ ಶರದ್ ಪವಾರ್‌ನಂತಹ ಹಿರಿಯ ನಾಯಕ “ಅಸಂಬದ್ಧ” ಹೇಳಿಕೆಗಳನ್ನು ನೀಡಿದಾಗ ಅದು ತುಂಬಾ ನೋವಿನ ಸಂಗತಿಯಾಗಿದೆ ಎಂದು ಕೇಂದ್ರ ಸಚಿವರು ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಶ್ವದ ಯಾವುದೇ ಭಾಗದಲ್ಲಿ ಭಯೋತ್ಪಾದನೆಯ ಪಿಡುಗನ್ನು ಎಲ್ಲಾ ರೀತಿಯಲ್ಲೂ ಖಂಡಿಸಬೇಕು ಎಂದು ಹೇಳಿದ ಗೋಯಲ್, ಪವಾರ್ ಅವರು ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕಣ್ಣೀರು ಸುರಿಸಿದ ಮತ್ತು ಭಾರತದ ನೆಲದಲ್ಲಿ ಭಯೋತ್ಪಾದಕ ದಾಳಿಗಳು ನಡೆದಾಗ ಮಲಗಿದ್ದ ಅದೇ ಸರ್ಕಾರದ ಭಾಗವಾಗಿದ್ದರು ಎಂದಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯು “ಗಂಭೀರ ಮತ್ತು ಸೂಕ್ಷ್ಮವಾಗಿದೆ”. ಅಫ್ಘಾನಿಸ್ತಾನ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಇತರ ರಾಷ್ಟ್ರಗಳಂತಹ ಮುಸ್ಲಿಂ ರಾಷ್ಟ್ರಗಳ ದೃಷ್ಟಿಕೋನಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಬೆಲೆ ಹೆಚ್ಚಳದ ಹಿಂದೆ ಅದಾನಿ ಗ್ರೂಪ್ ಕೈವಾಡ, ₹32,000 ಕೋಟಿ ಹಗರಣ ಆರೋಪ ಹೊರಿಸಿದ ರಾಹುಲ್ ಗಾಂಧಿ

ಅಕ್ಟೋಬರ್ 8 ರಂದು, ಹಮಾಸ್ ತನ್ನ ಅತಿಕ್ರಮಣವನ್ನು ಪ್ರಾರಂಭಿಸಿದ ಒಂದು ದಿನದ ನಂತರ, ಪ್ರಧಾನಿ ಮೋದಿ ಇಸ್ರೇಲ್ ಗೆ ಒಗ್ಗಟ್ಟು ವ್ಯಕ್ತಪಡಿಸಿ “ಭಯೋತ್ಪಾದಕ” ದಾಳಿಗಳನ್ನು ಖಂಡಿಸಿದರು. ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಮೋದಿ ಹೇಳಿದರು.

ಅಕ್ಟೋಬರ್ 10 ರಂದು, ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಭಾರತದ ಜನರು ತಮ್ಮ ದೇಶದೊಂದಿಗೆ ದೃಢವಾಗಿ ನಿಂತಿದ್ದಾರೆ, ಎಲ್ಲಾ ರೀತಿಯ ಭಯೋತ್ಪಾದನೆಯನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಏತನ್ಮಧ್ಯೆ,ವಿದೇಶಾಂಗ ಸಚಿವಾಲಯ ಇಸ್ರೇಲಿ ನಗರಗಳ ಮೇಲೆ ಹಮಾಸ್‌ನ ದಾಳಿಗಳನ್ನು “ಭಯೋತ್ಪಾದಕ ದಾಳಿ” ಎಂದು ವಿವರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ