AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಗಂಡನಿಂದ ದೂರ ಇರುವ ಹೆಂಡತಿ ತಾಳಿ ತೆಗೆದಿಡುವುದು ತಪ್ಪು; ಡೈವೋರ್ಸ್​ಗೆ ಒಪ್ಪಿಗೆ ನೀಡಿದ ಕೋರ್ಟ್​

ಈ ಭಾಗದಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ತಾಳಿ ಕಟ್ಟುವುದು ಅತ್ಯಗತ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಯಾವುದೇ ವಿವಾಹಿತ ಮಹಿಳೆ ತಾಳಿಯನ್ನು ತೆಗೆದು ಬ್ಯಾಂಕ್ ಲಾಕರ್​​ನಲ್ಲಿ ಇಡುವುದಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ.

Big News: ಗಂಡನಿಂದ ದೂರ ಇರುವ ಹೆಂಡತಿ ತಾಳಿ ತೆಗೆದಿಡುವುದು ತಪ್ಪು; ಡೈವೋರ್ಸ್​ಗೆ ಒಪ್ಪಿಗೆ ನೀಡಿದ ಕೋರ್ಟ್​
ಮಾಂಗಲ್ಯ
TV9 Web
| Edited By: |

Updated on:Jul 15, 2022 | 11:17 AM

Share

ಚೆನ್ನೈ: ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯ (ಮಂಗಳಸೂತ್ರ)ವನ್ನು ತೆಗೆದಿಟ್ಟರೆ ಅದರಿಂದ ಗಂಡನಿಗೆ ಮಾನಸಿಕ ಹಿಂಸೆಯಾಗುತ್ತದೆ ಎಂಬ ಕಾರಣ ನೀಡಿ ಮದ್ರಾಸ್​ ಕೋರ್ಟ್ (Madras Court)​​ ವ್ಯಕ್ತಿಯೊಬ್ಬನಿಗೆ ಡೈವೋರ್ಸ್​ ಪಡೆಯಲು ಅನುಮತಿ ನೀಡಿದೆ. ಪತ್ನಿ ಮಾಂಗಲ್ಯ (Mangalya) ಧರಿಸುತ್ತಿಲ್ಲ ಎಂಬುದನ್ನೂ ಒಂದು ಆಧಾರವಾಗಿಟ್ಟುಕೊಂಡು ನೊಂದ ವ್ಯಕ್ತಿಗೆ ಕೋರ್ಟ್​ ವಿಚ್ಛೇದನಕ್ಕೆ (Divorce) ಒಪ್ಪಿಗೆ ನೀಡಿದೆ.

ಈರೋಡ್‌ನ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ಶಿವಕುಮಾರ್ ಅವರ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿಎಂ ವೇಲುಮಣಿ ಮತ್ತು ಎಸ್ ಸೌಂಥರ್ ಅವರ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ತನಗೆ ವಿಚ್ಛೇದನ ನೀಡಲು ನಿರಾಕರಿಸಿದ ಸ್ಥಳೀಯ ಕೌಟುಂಬಿಕ ನ್ಯಾಯಾಲಯದ 2016 ಜೂನ್ 15ರ ಆದೇಶಗಳನ್ನು ರದ್ದುಗೊಳಿಸುವಂತೆ ಅವರು ಕೋರಿದ್ದರು.

ಈ ಬಗ್ಗೆ ಮಹಿಳೆಯ ವಿಚಾರಣೆ ನಡೆಸಿದಾಗ ಆಕೆ ಗಂಡನಿಂದ ದೂರವಿದ್ದ ಸಮಯದಲ್ಲಿ ಮಾಂಗಲ್ಯವನ್ನು ತೆಗೆದಿಟ್ಟಿದ್ದಾಗಿ ಒಪ್ಪಿಕೊಂಡಿದ್ದಾಳೆ. ತಾನು ತಾಳಿಯನ್ನು ಇನ್ನೂ ಇಟ್ಟುಕೊಂಡಿದ್ದೇನೆ. ಆದರೆ, ಅದರ ಜೊತೆಗಿದ್ದ ಕರಿಮಣಿ ಸರವನ್ನು ಮಾತ್ರ ತೆಗೆದಿದ್ದೇನೆ ಎಂದು ಆಕೆ ವಿವರಿಸಲು ಮುಂದಾದಳು. ಆಗ, ಮಾಂಗಲ್ಯವನ್ನು ತೆಗೆದುಹಾಕುವ ಕ್ರಿಯೆಗೆ ತನ್ನದೇ ಆದ ಮಹತ್ವವಿದೆ ಎಂದು ಕೋರ್ಟ್​ ಹೇಳಿದೆ.

ಇದನ್ನೂ ಓದಿ: Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

ಆಕೆಯ ವಕೀಲರು ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 7 ಅನ್ನು ಉಲ್ಲೇಖಿಸಿ ಮಾತನಾಡಿದ್ದು, ವಿವಾಹಿತ ಮಹಿಳೆ ತಾಳಿ ಕೊಟ್ಟಿಕೊಳ್ಳಲೇಬೇಕೆಂಬ ನಿಯಮವಿಲ್ಲ ಎಂದು ಹೇಳಿದ್ದಾರೆ. ಮಾಂಗಲ್ಯ ಹಾಕಿಕೊಳ್ಳುವುದು ಅಥವಾ ತೆಗೆದಿಡುವುದು ವೈವಾಹಿಕ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

ಆದರೆ, ಈ ಭಾಗದಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ತಾಳಿ ಕಟ್ಟುವುದು ಅತ್ಯಗತ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಯಾವುದೇ ವಿವಾಹಿತ ಮಹಿಳೆ ತಾಳಿಯನ್ನು ತೆಗೆದು ಬ್ಯಾಂಕ್ ಲಾಕರ್​​ನಲ್ಲಿ ಇಡುವುದಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ.

“ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದು ವೈವಾಹಿಕ ಜೀವನದ ನಿರಂತರತೆಯನ್ನು ಸಂಕೇತಿಸುತ್ತದೆ. ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಆದ್ದರಿಂದ, ಅರ್ಜಿದಾರರ ಹೆಂಡತಿ ಮಾಂಗಲ್ಯವನ್ನು ತೆಗೆದುಹಾಕುವ ಮೂಲಕ ಗಂಡನಿಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಹೇಳಬಹುದು ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: Crime News: ಆಸ್ಪತ್ರೆಯಲ್ಲಿ ರೋಗಿಯ ಮಾಂಗಲ್ಯ ಕದ್ದ ಆರೋಪಿ ಬಂಧನ, ಕಾರಣ ಇಲ್ಲದೇ ತಮಟೆ ಬಾರಿಸಿದ್ದಕ್ಕೆ ಹಲ್ಲೆ

ಅಲ್ಲದೆ, ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಪೊಲೀಸರ ಎದುರು ಆ ಮಹಿಳೆ ತನ್ನ ಗಂಡನಿಗೆ ಮಹಿಳಾ ಸಹೋದ್ಯೋಗಿಗಳೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಗಳನ್ನು ಮಾಡಿದ್ದಾಳೆ ಎಂದು ಪೀಠವು ಗಮನಿಸಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ತೀರ್ಪಿನ ಹಿನ್ನೆಲೆಯಲ್ಲಿ ಪತ್ನಿಯು ಪತಿಗೆ ಮಾನಸಿಕ ಹಿಂಸೆಯನ್ನು ಉಂಟುಮಾಡಿದ್ದಾಳೆ ಎಂದು ಹೇಳಲು ಯಾವುದೇ ಅನುಮಾನವಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

ಮೇಲ್ಮನವಿದಾರ ಮತ್ತು ಅವರ ಪತ್ನಿ 2011ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಈ ಅವಧಿಯಲ್ಲಿ ಪತ್ನಿ ಪುನರ್ಮಿಲನಕ್ಕೆ ಪ್ರಯತ್ನವನ್ನು ಮಾಡಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪ್ರಕರಣದ ಸತ್ಯಗಳು ಮತ್ತು ಸನ್ನಿವೇಶಗಳಲ್ಲಿ ಮತ್ತು ಹೆಂಡತಿಯು ತನ್ನ ಕೃತ್ಯದಿಂದ ಪತಿಗೆ ಮಾನಸಿಕ ಕ್ರೌರ್ಯವನ್ನುಂಟುಮಾಡಿದ್ದಾಳೆಂದು ನಾವು ಗಮನಿಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

Published On - 9:46 am, Fri, 15 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ