AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೂ ಬೇಡ ರಾಜೀವ್​ ಗಾಂಧಿ ಹೆಸರು’- ಅಭಿಯಾನ ಶುರುಮಾಡಿದ ಕೊಡಗು ನಿವಾಸಿಗಳು

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇಷ್ಟುದಿನ ಕ್ರೀಡಾಸಾಧಕರಿಗೆ ನೀಡುವ ಖೇಲ್​ರತ್ನ ಪ್ರಶಸ್ತಿಗೆ ಇದ್ದ ರಾಜೀವ್​ ಗಾಂಧಿ ಹೆಸರನ್ನು ತೆಗೆದಿದ್ದಾರೆ. ಅದರ ಬೆನ್ನಲ್ಲೇ ಕೊಡಗು ನಿವಾಸಿಗಳ ಅಭಿಯಾನವೂ ಶುರುವಾಗಿದೆ.

‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೂ ಬೇಡ ರಾಜೀವ್​ ಗಾಂಧಿ ಹೆಸರು’- ಅಭಿಯಾನ ಶುರುಮಾಡಿದ ಕೊಡಗು ನಿವಾಸಿಗಳು
ನಾಗರಹೊಳೆ ನ್ಯಾಶನಲ್ ಪಾರ್ಕ್​
TV9 Web
| Edited By: |

Updated on: Aug 07, 2021 | 11:35 AM

Share

ನಾಗರಹೊಳೆ ನ್ಯಾಶನಲ್​ ಪಾರ್ಕ್(Nagarahole National Park)​​ಗೆ ರಾಜೀವ್​ ಗಾಂಧಿ ನ್ಯಾಶನಲ್​ ಪಾರ್ಕ್ (Rajeev Gandhi National Park)​ ಎಂದೂ ಸಹ ಕರೆಯಲಾಗುತ್ತದೆ. ಆದರೆ ಈ ಹೆಸರನ್ನು ಬದಲಿಸಬೇಕು..ರಾಜೀವ್ ಗಾಂಧಿ ಎಂಬ ಹೆಸರು ಬೇಡ ಎಂದು ಕೊಡಗು ನಿವಾಸಿಗಳು ಆನ್​ಲೈನ್​ಲ್ಲಿ ಸಹಿ ಸಂಗ್ರಹ (Online Petition) ಅಭಿಯಾನ ಶುರು ಮಾಡಿದ್ದಾರೆ. ರಾಜೀವ್​ ಗಾಂಧಿ ನ್ಯಾಶನಲ್ ಪಾರ್ಕ್​ ಹೆಸರು ಬದಲಿಸುವ ಬಗ್ಗೆ ಅವರು ತಮ್ಮ ವಿಚಾರವನ್ನು ಹಂಚಿಕೊಂಡಿದ್ದಾರೆ. ಹಾಗೇ, ಅದಕ್ಕೆ ಒಪ್ಪಿಗೆ ಇದ್ದವರು ಬೆಂಬಲಿಸಿ ಎಂದೂ ಕೇಳಿಕೊಂಡಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ, ಅಮಿತ್​ ಶಾ, ಅರಣ್ಯ ಸಚಿವ ಭೂಪೇಂದರ್ ಸಿಂಗ್​ ಯಾದವ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಒಂದು ನಿರ್ಧಿಷ್ಟ ಕುಟುಂಬ, ಪಕ್ಷವನ್ನು ಸಮಾಧಾನಪಡಿಸಲು, ಓಲೈಸಲು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ರಾಜೀವ್​ ಗಾಂಧಿ ನ್ಯಾಶನಲ್​ ಪಾರ್ಕ್​ ಎಂದು ಹೆಸರಿಡಲಾಗಿದೆ ಎಂದು ನಾಗರಿಕರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಫೀಲ್ಡ್​ ಮಾರ್ಷಲ್​ ಕಾರಿಯಪ್ಪ, ಜನರಲ್​ ತಿಮ್ಮಯ್ಯ ಹೆಸರಿಡಿ.. ಇದೀಗ ಕೊಡಗು ನಿವಾಸಿಗಳು ಪ್ರಾರಂಭಿಸಿರುವ ಆನ್​ಲೈನ್​ ಅಭಿಯಾನಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲಿ ಹೆಚ್ಚಿನವರು ನ್ಯಾಶನಲ್​ ಪಾರ್ಕ್​ಗೆ ಫೀಲ್ಡ್​ ಮಾರ್ಷಲ್​ ಕಾರಿಯಪ್ಪ ಅಥವಾ ಜನರಲ್​ ತಿಮ್ಮಯ್ಯನವರ ಹೆಸರಿಡಿ ಎಂದೇ ಒತ್ತಾಯಿಸುತ್ತಿದ್ದಾರೆ. ಇವರಿಬ್ಬರೂ ಕೊಡಗಿನವರೇ ಆಗಿದ್ದು, ದೇಶಸೇವೆ ಮಾಡಿದ್ದಾರೆ. ಇವರಲ್ಲಿ ಯಾರ ಹೆಸರಿಟ್ಟರೂ ಅಡ್ಡಿಯಿಲ್ಲ ಎನ್ನುತ್ತಿದ್ದಾರೆ.

ಪ್ರಶಸ್ತಿ ಹೆಸರು ಬದಲಾದ ಬೆನ್ನಲ್ಲೇ ಒತ್ತಾಯ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇಷ್ಟುದಿನ ಕ್ರೀಡಾಸಾಧಕರಿಗೆ ನೀಡುವ ಖೇಲ್​ರತ್ನ ಪ್ರಶಸ್ತಿಗೆ ಇದ್ದ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಅದಕ್ಕೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ ನಾಮಕರಣ ಮಾಡಿದ್ದಾರೆ. ಇದರ ಬೆನ್ನಲ್ಲೇ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಇಡಲಾದ ರಾಜೀವ್ ಗಾಂಧಿ ಹೆಸರನ್ನೂ ಬದಲಿಸಿ ಎಂಬ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ: Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಕೊಂಚ ವಿಳಂಬ; ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ