AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೂ ಬೇಡ ರಾಜೀವ್​ ಗಾಂಧಿ ಹೆಸರು’- ಅಭಿಯಾನ ಶುರುಮಾಡಿದ ಕೊಡಗು ನಿವಾಸಿಗಳು

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇಷ್ಟುದಿನ ಕ್ರೀಡಾಸಾಧಕರಿಗೆ ನೀಡುವ ಖೇಲ್​ರತ್ನ ಪ್ರಶಸ್ತಿಗೆ ಇದ್ದ ರಾಜೀವ್​ ಗಾಂಧಿ ಹೆಸರನ್ನು ತೆಗೆದಿದ್ದಾರೆ. ಅದರ ಬೆನ್ನಲ್ಲೇ ಕೊಡಗು ನಿವಾಸಿಗಳ ಅಭಿಯಾನವೂ ಶುರುವಾಗಿದೆ.

‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೂ ಬೇಡ ರಾಜೀವ್​ ಗಾಂಧಿ ಹೆಸರು’- ಅಭಿಯಾನ ಶುರುಮಾಡಿದ ಕೊಡಗು ನಿವಾಸಿಗಳು
ನಾಗರಹೊಳೆ ನ್ಯಾಶನಲ್ ಪಾರ್ಕ್​
TV9 Web
| Edited By: |

Updated on: Aug 07, 2021 | 11:35 AM

Share

ನಾಗರಹೊಳೆ ನ್ಯಾಶನಲ್​ ಪಾರ್ಕ್(Nagarahole National Park)​​ಗೆ ರಾಜೀವ್​ ಗಾಂಧಿ ನ್ಯಾಶನಲ್​ ಪಾರ್ಕ್ (Rajeev Gandhi National Park)​ ಎಂದೂ ಸಹ ಕರೆಯಲಾಗುತ್ತದೆ. ಆದರೆ ಈ ಹೆಸರನ್ನು ಬದಲಿಸಬೇಕು..ರಾಜೀವ್ ಗಾಂಧಿ ಎಂಬ ಹೆಸರು ಬೇಡ ಎಂದು ಕೊಡಗು ನಿವಾಸಿಗಳು ಆನ್​ಲೈನ್​ಲ್ಲಿ ಸಹಿ ಸಂಗ್ರಹ (Online Petition) ಅಭಿಯಾನ ಶುರು ಮಾಡಿದ್ದಾರೆ. ರಾಜೀವ್​ ಗಾಂಧಿ ನ್ಯಾಶನಲ್ ಪಾರ್ಕ್​ ಹೆಸರು ಬದಲಿಸುವ ಬಗ್ಗೆ ಅವರು ತಮ್ಮ ವಿಚಾರವನ್ನು ಹಂಚಿಕೊಂಡಿದ್ದಾರೆ. ಹಾಗೇ, ಅದಕ್ಕೆ ಒಪ್ಪಿಗೆ ಇದ್ದವರು ಬೆಂಬಲಿಸಿ ಎಂದೂ ಕೇಳಿಕೊಂಡಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ, ಅಮಿತ್​ ಶಾ, ಅರಣ್ಯ ಸಚಿವ ಭೂಪೇಂದರ್ ಸಿಂಗ್​ ಯಾದವ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಒಂದು ನಿರ್ಧಿಷ್ಟ ಕುಟುಂಬ, ಪಕ್ಷವನ್ನು ಸಮಾಧಾನಪಡಿಸಲು, ಓಲೈಸಲು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ರಾಜೀವ್​ ಗಾಂಧಿ ನ್ಯಾಶನಲ್​ ಪಾರ್ಕ್​ ಎಂದು ಹೆಸರಿಡಲಾಗಿದೆ ಎಂದು ನಾಗರಿಕರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಫೀಲ್ಡ್​ ಮಾರ್ಷಲ್​ ಕಾರಿಯಪ್ಪ, ಜನರಲ್​ ತಿಮ್ಮಯ್ಯ ಹೆಸರಿಡಿ.. ಇದೀಗ ಕೊಡಗು ನಿವಾಸಿಗಳು ಪ್ರಾರಂಭಿಸಿರುವ ಆನ್​ಲೈನ್​ ಅಭಿಯಾನಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲಿ ಹೆಚ್ಚಿನವರು ನ್ಯಾಶನಲ್​ ಪಾರ್ಕ್​ಗೆ ಫೀಲ್ಡ್​ ಮಾರ್ಷಲ್​ ಕಾರಿಯಪ್ಪ ಅಥವಾ ಜನರಲ್​ ತಿಮ್ಮಯ್ಯನವರ ಹೆಸರಿಡಿ ಎಂದೇ ಒತ್ತಾಯಿಸುತ್ತಿದ್ದಾರೆ. ಇವರಿಬ್ಬರೂ ಕೊಡಗಿನವರೇ ಆಗಿದ್ದು, ದೇಶಸೇವೆ ಮಾಡಿದ್ದಾರೆ. ಇವರಲ್ಲಿ ಯಾರ ಹೆಸರಿಟ್ಟರೂ ಅಡ್ಡಿಯಿಲ್ಲ ಎನ್ನುತ್ತಿದ್ದಾರೆ.

ಪ್ರಶಸ್ತಿ ಹೆಸರು ಬದಲಾದ ಬೆನ್ನಲ್ಲೇ ಒತ್ತಾಯ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇಷ್ಟುದಿನ ಕ್ರೀಡಾಸಾಧಕರಿಗೆ ನೀಡುವ ಖೇಲ್​ರತ್ನ ಪ್ರಶಸ್ತಿಗೆ ಇದ್ದ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಅದಕ್ಕೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ ನಾಮಕರಣ ಮಾಡಿದ್ದಾರೆ. ಇದರ ಬೆನ್ನಲ್ಲೇ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಇಡಲಾದ ರಾಜೀವ್ ಗಾಂಧಿ ಹೆಸರನ್ನೂ ಬದಲಿಸಿ ಎಂಬ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ: Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಕೊಂಚ ವಿಳಂಬ; ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?