AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೂ ಬೇಡ ರಾಜೀವ್​ ಗಾಂಧಿ ಹೆಸರು’- ಅಭಿಯಾನ ಶುರುಮಾಡಿದ ಕೊಡಗು ನಿವಾಸಿಗಳು

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇಷ್ಟುದಿನ ಕ್ರೀಡಾಸಾಧಕರಿಗೆ ನೀಡುವ ಖೇಲ್​ರತ್ನ ಪ್ರಶಸ್ತಿಗೆ ಇದ್ದ ರಾಜೀವ್​ ಗಾಂಧಿ ಹೆಸರನ್ನು ತೆಗೆದಿದ್ದಾರೆ. ಅದರ ಬೆನ್ನಲ್ಲೇ ಕೊಡಗು ನಿವಾಸಿಗಳ ಅಭಿಯಾನವೂ ಶುರುವಾಗಿದೆ.

‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೂ ಬೇಡ ರಾಜೀವ್​ ಗಾಂಧಿ ಹೆಸರು’- ಅಭಿಯಾನ ಶುರುಮಾಡಿದ ಕೊಡಗು ನಿವಾಸಿಗಳು
ನಾಗರಹೊಳೆ ನ್ಯಾಶನಲ್ ಪಾರ್ಕ್​
TV9 Web
| Edited By: |

Updated on: Aug 07, 2021 | 11:35 AM

Share

ನಾಗರಹೊಳೆ ನ್ಯಾಶನಲ್​ ಪಾರ್ಕ್(Nagarahole National Park)​​ಗೆ ರಾಜೀವ್​ ಗಾಂಧಿ ನ್ಯಾಶನಲ್​ ಪಾರ್ಕ್ (Rajeev Gandhi National Park)​ ಎಂದೂ ಸಹ ಕರೆಯಲಾಗುತ್ತದೆ. ಆದರೆ ಈ ಹೆಸರನ್ನು ಬದಲಿಸಬೇಕು..ರಾಜೀವ್ ಗಾಂಧಿ ಎಂಬ ಹೆಸರು ಬೇಡ ಎಂದು ಕೊಡಗು ನಿವಾಸಿಗಳು ಆನ್​ಲೈನ್​ಲ್ಲಿ ಸಹಿ ಸಂಗ್ರಹ (Online Petition) ಅಭಿಯಾನ ಶುರು ಮಾಡಿದ್ದಾರೆ. ರಾಜೀವ್​ ಗಾಂಧಿ ನ್ಯಾಶನಲ್ ಪಾರ್ಕ್​ ಹೆಸರು ಬದಲಿಸುವ ಬಗ್ಗೆ ಅವರು ತಮ್ಮ ವಿಚಾರವನ್ನು ಹಂಚಿಕೊಂಡಿದ್ದಾರೆ. ಹಾಗೇ, ಅದಕ್ಕೆ ಒಪ್ಪಿಗೆ ಇದ್ದವರು ಬೆಂಬಲಿಸಿ ಎಂದೂ ಕೇಳಿಕೊಂಡಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ, ಅಮಿತ್​ ಶಾ, ಅರಣ್ಯ ಸಚಿವ ಭೂಪೇಂದರ್ ಸಿಂಗ್​ ಯಾದವ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಒಂದು ನಿರ್ಧಿಷ್ಟ ಕುಟುಂಬ, ಪಕ್ಷವನ್ನು ಸಮಾಧಾನಪಡಿಸಲು, ಓಲೈಸಲು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ರಾಜೀವ್​ ಗಾಂಧಿ ನ್ಯಾಶನಲ್​ ಪಾರ್ಕ್​ ಎಂದು ಹೆಸರಿಡಲಾಗಿದೆ ಎಂದು ನಾಗರಿಕರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಫೀಲ್ಡ್​ ಮಾರ್ಷಲ್​ ಕಾರಿಯಪ್ಪ, ಜನರಲ್​ ತಿಮ್ಮಯ್ಯ ಹೆಸರಿಡಿ.. ಇದೀಗ ಕೊಡಗು ನಿವಾಸಿಗಳು ಪ್ರಾರಂಭಿಸಿರುವ ಆನ್​ಲೈನ್​ ಅಭಿಯಾನಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲಿ ಹೆಚ್ಚಿನವರು ನ್ಯಾಶನಲ್​ ಪಾರ್ಕ್​ಗೆ ಫೀಲ್ಡ್​ ಮಾರ್ಷಲ್​ ಕಾರಿಯಪ್ಪ ಅಥವಾ ಜನರಲ್​ ತಿಮ್ಮಯ್ಯನವರ ಹೆಸರಿಡಿ ಎಂದೇ ಒತ್ತಾಯಿಸುತ್ತಿದ್ದಾರೆ. ಇವರಿಬ್ಬರೂ ಕೊಡಗಿನವರೇ ಆಗಿದ್ದು, ದೇಶಸೇವೆ ಮಾಡಿದ್ದಾರೆ. ಇವರಲ್ಲಿ ಯಾರ ಹೆಸರಿಟ್ಟರೂ ಅಡ್ಡಿಯಿಲ್ಲ ಎನ್ನುತ್ತಿದ್ದಾರೆ.

ಪ್ರಶಸ್ತಿ ಹೆಸರು ಬದಲಾದ ಬೆನ್ನಲ್ಲೇ ಒತ್ತಾಯ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇಷ್ಟುದಿನ ಕ್ರೀಡಾಸಾಧಕರಿಗೆ ನೀಡುವ ಖೇಲ್​ರತ್ನ ಪ್ರಶಸ್ತಿಗೆ ಇದ್ದ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಅದಕ್ಕೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ ನಾಮಕರಣ ಮಾಡಿದ್ದಾರೆ. ಇದರ ಬೆನ್ನಲ್ಲೇ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಇಡಲಾದ ರಾಜೀವ್ ಗಾಂಧಿ ಹೆಸರನ್ನೂ ಬದಲಿಸಿ ಎಂಬ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ: Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಕೊಂಚ ವಿಳಂಬ; ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್