AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್ ಸರ್ದಾನ ಕೊವಿಡ್​ಗೆ ಬಲಿ

Rohit Sardana: ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ರೋಹಿತ್ ಸರ್ದಾನ ಅವರು ಕೊರೊನಾ ಸೋಂಕಿತರಾಗಿದ್ದು ,ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್ ಸರ್ದಾನ ಕೊವಿಡ್​ಗೆ ಬಲಿ
ರೋಹಿತ್ ಸರ್ದಾನ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 30, 2021 | 2:06 PM

Share

ದೆಹಲಿ: ಕೊರೊನಾವೈರಸ್ ಸೋಂಕಿತರಾಗಿದ್ದ ಖ್ಯಾತ ಪತ್ರಕರ್ತ ರೋಹಿತ್ ಸರ್ದಾನ ಶುಕ್ರವಾರ ನಿಧನರಾಗಿದ್ದಾರೆ. ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ಸರ್ದಾನ ಅವರು ಕೊರೊನಾ ಸೋಂಕಿತರಾಗಿದ್ದು, ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

ಏಪ್ರಿಲ್ 24ರಂದು ರೋಹಿತ್ ಸರ್ದಾನ ಅವರಿಗೆ ಕೊರೊನಾ ಸೋಂಕು ತಗಲಿತ್ತು. ಈ ಬಗ್ಗೆ ಸರ್ದಾನ ಅವರೇ ಟ್ವೀಟ್ ಮಾಡಿದ್ದರು.  ಒಂದು ವಾರದ ಹಿಂದೆ ಜ್ವರ ಮತ್ತು ಇತರ ಲಕ್ಷಣ ಕಾಣಿಸಿಕೊಂಡಾಗ ಪರೀಕ್ಷೆ ನಡೆಸಿದೆ. RTPCR ನೆಗೆಟಿವ್ ಬಂತು. CTScan ಮಾಡಿಸಿದಾಗ ಕೊವಿಡ್ ಇರುವುದು ದೃಢಪಟ್ಟಿದೆ. ಈಗ  ಆರೋಗ್ಯ ಸುಧಾರಿಸಿದೆ. ನೀವು ಕೂಡಾ ನಿಮ್ಮ ಮತ್ತು ನಿಮ್ಮ ಕುಟುಂಬದ ಕಾಳಜಿ ವಹಿಸಿ ಎಂದಿದ್ದರು.

ರೋಹಿತ್ ನಿಧನ ಸುದ್ದಿಯನ್ನು ಜೀ ನ್ಯೂಸ್​ನ ಪ್ರಧಾನ ಸಂಪಾದಕ ಸುಧೀರ್  ಚೌಧರಿ ಟ್ವೀಟ್ ಮಾಡಿದ್ದು, ಕೆಲವು ಹೊತ್ತಿನ ಹಿಂದೆ ಇವಾನ್​ ಕರೆ ಮಾಡಿ   ವಿಷಯವೊಂದನ್ನು ಹೇಳಿದಾಗ ನನ್ನ  ಕೈಕಾಲು ಕಂಪಿಸಿತು. ನನ್ನ  ಗೆಳೆಯ ಹಾಗು  ಸಹೋದ್ಯೋಗಿ  ರೋಹಿತ್  ಸರ್ದಾನ ಅವರ ನಿಧನ ಸುದ್ದಿಯಾಗಿತ್ತು ಅದು . ನಮ್ಮ ಆಪ್ತರೊಬ್ಬರು ವೈರಸ್​ಗೆ ಬಲಿಯಾಗುತ್ತಾರೆ ಎಂದು  ಊಹಿಸಿರಲಿಲ್ಲ. ಈ ಸುದ್ದಿಯನ್ನು ಸ್ವೀಕರಿಸಲು ನಾನು ಸಿದ್ಧನಿರಲಿಲ್ಲ. ಭಗವಂತ ಮೋಸ ಮಾಡಿಬಿಟ್ಟ ಎಂದು ಬರೆದಿದ್ದಾರೆ

ಸರ್ದಾನ  ನಿಧನ ಸುದ್ದಿ ತಿಳಿಯುತ್ತಿದ್ದಂತೆ  ಸುದ್ದಿ ಮಾಧ್ಯಮದ ಹಿರಿಯರು, ಸಹೋದ್ಯೋಗಿಗಳು  ಆಘಾತ ವ್ಯಕ್ತಪಡಿಸಿದ್ದು  ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಗಣ್ಯರಿಂದ ಸಂತಾಪ

ರೋಹಿತ್ ಸರ್ದಾನ ನಿಧನ ಬಗ್ಗೆ ಸಂತಾಪ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ  ಕೇಂದ್ರ ಗೃಹ ಸಚಿವ ಅಮಿತ್ ಶಾ ,  ದೇಶವು ಇಂದು   ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ  ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ  ನೀಡಲಿ ಎಂದಿದ್ದಾರೆ. ಇದನ್ನೂ ಓದಿ:  Producer Chandrashekar Death: ಅಣ್ಣಯ್ಯ, ಬಿಂದಾಸ್, ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ

Published On - 1:38 pm, Fri, 30 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!