AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್ ಸರ್ದಾನ ಕೊವಿಡ್​ಗೆ ಬಲಿ

Rohit Sardana: ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ರೋಹಿತ್ ಸರ್ದಾನ ಅವರು ಕೊರೊನಾ ಸೋಂಕಿತರಾಗಿದ್ದು ,ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್ ಸರ್ದಾನ ಕೊವಿಡ್​ಗೆ ಬಲಿ
ರೋಹಿತ್ ಸರ್ದಾನ
ರಶ್ಮಿ ಕಲ್ಲಕಟ್ಟ
|

Updated on:Apr 30, 2021 | 2:06 PM

Share

ದೆಹಲಿ: ಕೊರೊನಾವೈರಸ್ ಸೋಂಕಿತರಾಗಿದ್ದ ಖ್ಯಾತ ಪತ್ರಕರ್ತ ರೋಹಿತ್ ಸರ್ದಾನ ಶುಕ್ರವಾರ ನಿಧನರಾಗಿದ್ದಾರೆ. ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ಸರ್ದಾನ ಅವರು ಕೊರೊನಾ ಸೋಂಕಿತರಾಗಿದ್ದು, ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

ಏಪ್ರಿಲ್ 24ರಂದು ರೋಹಿತ್ ಸರ್ದಾನ ಅವರಿಗೆ ಕೊರೊನಾ ಸೋಂಕು ತಗಲಿತ್ತು. ಈ ಬಗ್ಗೆ ಸರ್ದಾನ ಅವರೇ ಟ್ವೀಟ್ ಮಾಡಿದ್ದರು.  ಒಂದು ವಾರದ ಹಿಂದೆ ಜ್ವರ ಮತ್ತು ಇತರ ಲಕ್ಷಣ ಕಾಣಿಸಿಕೊಂಡಾಗ ಪರೀಕ್ಷೆ ನಡೆಸಿದೆ. RTPCR ನೆಗೆಟಿವ್ ಬಂತು. CTScan ಮಾಡಿಸಿದಾಗ ಕೊವಿಡ್ ಇರುವುದು ದೃಢಪಟ್ಟಿದೆ. ಈಗ  ಆರೋಗ್ಯ ಸುಧಾರಿಸಿದೆ. ನೀವು ಕೂಡಾ ನಿಮ್ಮ ಮತ್ತು ನಿಮ್ಮ ಕುಟುಂಬದ ಕಾಳಜಿ ವಹಿಸಿ ಎಂದಿದ್ದರು.

ರೋಹಿತ್ ನಿಧನ ಸುದ್ದಿಯನ್ನು ಜೀ ನ್ಯೂಸ್​ನ ಪ್ರಧಾನ ಸಂಪಾದಕ ಸುಧೀರ್  ಚೌಧರಿ ಟ್ವೀಟ್ ಮಾಡಿದ್ದು, ಕೆಲವು ಹೊತ್ತಿನ ಹಿಂದೆ ಇವಾನ್​ ಕರೆ ಮಾಡಿ   ವಿಷಯವೊಂದನ್ನು ಹೇಳಿದಾಗ ನನ್ನ  ಕೈಕಾಲು ಕಂಪಿಸಿತು. ನನ್ನ  ಗೆಳೆಯ ಹಾಗು  ಸಹೋದ್ಯೋಗಿ  ರೋಹಿತ್  ಸರ್ದಾನ ಅವರ ನಿಧನ ಸುದ್ದಿಯಾಗಿತ್ತು ಅದು . ನಮ್ಮ ಆಪ್ತರೊಬ್ಬರು ವೈರಸ್​ಗೆ ಬಲಿಯಾಗುತ್ತಾರೆ ಎಂದು  ಊಹಿಸಿರಲಿಲ್ಲ. ಈ ಸುದ್ದಿಯನ್ನು ಸ್ವೀಕರಿಸಲು ನಾನು ಸಿದ್ಧನಿರಲಿಲ್ಲ. ಭಗವಂತ ಮೋಸ ಮಾಡಿಬಿಟ್ಟ ಎಂದು ಬರೆದಿದ್ದಾರೆ

ಸರ್ದಾನ  ನಿಧನ ಸುದ್ದಿ ತಿಳಿಯುತ್ತಿದ್ದಂತೆ  ಸುದ್ದಿ ಮಾಧ್ಯಮದ ಹಿರಿಯರು, ಸಹೋದ್ಯೋಗಿಗಳು  ಆಘಾತ ವ್ಯಕ್ತಪಡಿಸಿದ್ದು  ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಗಣ್ಯರಿಂದ ಸಂತಾಪ

ರೋಹಿತ್ ಸರ್ದಾನ ನಿಧನ ಬಗ್ಗೆ ಸಂತಾಪ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ  ಕೇಂದ್ರ ಗೃಹ ಸಚಿವ ಅಮಿತ್ ಶಾ ,  ದೇಶವು ಇಂದು   ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ  ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ  ನೀಡಲಿ ಎಂದಿದ್ದಾರೆ. ಇದನ್ನೂ ಓದಿ:  Producer Chandrashekar Death: ಅಣ್ಣಯ್ಯ, ಬಿಂದಾಸ್, ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ

Published On - 1:38 pm, Fri, 30 April 21

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ