AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟುಗಳ ಮೇಲೆ ಸುಭಾಷ್ ಚಂದ್ರ ಬೋಸ್​ ಫೋಟೋ ಪ್ರಿಂಟ್​ಗೆ ಮನವಿ; 8 ವಾರದೊಳಗೆ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ ಕೋಲ್ಕತ್ತ ಹೈಕೋರ್ಟ್ ಸೂಚನೆ

ಅಂದಹಾಗೆ ಕೋಲ್ಕತ್ತ ಹೈಕೋರ್ಟ್​ಗೆ ಹೀಗೆ ಅರ್ಜಿ ಸಲ್ಲಿಸಿದವರು ಹರೇಂದ್ರನಾಥ ಬಿಸ್ವಾಸ್​ ಎಂಬುವರು. ಇವರಿಗೆ 94 ವರ್ಷ ವಯಸ್ಸಾಗಿದ್ದು, ತಮ್ಮನ್ನು ತಾವು ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಿಕೊಂಡಿದ್ದಾರೆ.

ನೋಟುಗಳ ಮೇಲೆ ಸುಭಾಷ್ ಚಂದ್ರ ಬೋಸ್​ ಫೋಟೋ ಪ್ರಿಂಟ್​ಗೆ ಮನವಿ; 8 ವಾರದೊಳಗೆ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ ಕೋಲ್ಕತ್ತ ಹೈಕೋರ್ಟ್ ಸೂಚನೆ
ನೇತಾಜಿ ಸುಭಾಷ್​ ಚಂದ್ರ ಬೋಸ್​ (ಪಿಟಿಐ ಚಿತ್ರ)
TV9 Web
| Edited By: |

Updated on:Dec 14, 2021 | 2:36 PM

Share

ಕೋಲ್ಕತ್ತ: ಕರೆನ್ಸಿ ನೋಟುಗಳ ಮೇಲೆ ನೇತಾಜಿ ಸುಭಾಷ್ ಚಂದ್ರ ಬೋಸ್(Netaji Subhash Chandra Bose)​ ಅವರ ಭಾವಚಿತ್ರವನ್ನು ಮುದ್ರಿಸಲು ಕೇಂದ್ರ ಸರ್ಕಾರ(Central Government)ಕ್ಕೆ ನಿರ್ದೇಶನ ನೀಡಬೇಕು ಎಂದು ಕಲ್ಕತ್ತಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದ್ದು, ಅದನ್ನು ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಹಾಗೇ, ಈ ಅರ್ಜಿಗೆ 8 ವಾರಗಳ ಒಳಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋಲ್ಕತ್ತ ಹೈಕೋರ್ಟ್ ಸೂಚನೆ ನೀಡಿದೆ. ನೋಟುಗಳ ಮೇಲೆ ಮಹಾತ್ಮ ಗಾಂಧೀಜಿಯವರ ಫೋಟೋ ಪ್ರಿಂಟ್​ ಮಾಡುವಂತೆ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಭಾವಚಿತ್ರವನ್ನೂ ಯಾಕೆ ಪ್ರಿಂಟ್ ಮಾಡಬಾರದು ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದ್ದು, ಅದಕ್ಕೆ ಉತ್ತರ ನೀಡುವ ಜವಾಬ್ದಾರಿಯನ್ನು ಕೋರ್ಟ್​, ಕೇಂದ್ರ ಸರ್ಕಾರಕ್ಕೆ ನೀಡಿದೆ. 

ಅಂದಹಾಗೆ ಕೋಲ್ಕತ್ತ ಹೈಕೋರ್ಟ್​ಗೆ ಹೀಗೆ ಅರ್ಜಿ ಸಲ್ಲಿಸಿದವರು ಹರೇಂದ್ರನಾಥ ಬಿಸ್ವಾಸ್​ ಎಂಬುವರು. ಇವರಿಗೆ 94 ವರ್ಷ ವಯಸ್ಸಾಗಿದ್ದು, ತಮ್ಮನ್ನು ತಾವು ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಿಕೊಂಡಿದ್ದಾರೆ. ಸುಭಾಷ್​ ಚಂದ್ರ ಬೋಸ್​ ಅವರು ಸ್ವಾತಂತ್ರ್ಯ ಹೋರಾಟಗಾರರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತೀವ್ರವಾಗಿ ಹೋರಾಟ ನಡೆಸಿದವರು. ಆದರೆ ಭಾರತದ ಕೇಂದ್ರ ಸರ್ಕಾರಗಳು ಅವರಿಗೆ ಸರಿಯಾದ ರೀತಿಯ ಮಾನ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇಂದು ಅರ್ಜಿಯ ವಿಚಾರಣೆಯನ್ನು ಕೋರ್ಟ್​ ಕೈಗೆತ್ತಿಕೊಂಡಾಗ ಭಾರತ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್​ ವೈ.ಜೆ.ದಾಸ್ತೂರ್​ ವಕಾಲತ್ತು ವಹಿಸಿದ್ದರು. ನಮಗೆ ಈ ವಿಚಾರವನ್ನು ಪರಿಶೀಲಿಸಿ, ಅಫಿಡಿವಿಟ್​ ಸಲ್ಲಿಸಲು ಎಂಟು ವಾರಗಳಾದರೂ ಸಮಯ ಬೇಕು ಎಂದು ಕೇಳಿದ್ದರು. ಅದನ್ನು ಕೋರ್ಟ್ ಮಾನ್ಯ ಮಾಡಿದೆ. ಮುಂದಿನ ವಿಚಾರಣೆ 2022ರ ಫೆಬ್ರವರಿ 21ರಂದು ನಡೆಯಲಿದೆ. ಹೈಕೋರ್ಟ್​​ನ ಮುಖ್ಯ ನ್ಯಾಯಾಧೀಶ ಪ್ರಕಾಶ್​ ಶ್ರೀವಾಸ್ತವ್​ ಮತ್ತು ನ್ಯಾಯಾಧೀಶೆ ರಾಜಶ್ರೀ ಭಾರದ್ವಾಜ್​ ಅರ್ಜಿ ವಿಚಾರಣೆ ನಡೆಸಲಿದ್ದಾರೆ.

2017ರಲ್ಲಿ ಏನಾಗಿತ್ತು? ಹಿಂದೆ 2017ರಲ್ಲಿಯೂ ಒಮ್ಮೆ ಇಂಥದ್ದೇ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಕೋಲ್ಕತ್ತ ಹೈಕೋರ್ಟ್​ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿತ್ತು. ಆಗ ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸರ್ಕಾರ, ನೋಟಿನ ವಿನ್ಯಾಸ ಮತ್ತು ಅದರಲ್ಲಿನ ಫೋಟೋ ಬದಲಾವಣೆಯ ವಿಚಾರದಲ್ಲಿ ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾದ ಪ್ರತಿಕ್ರಿಯೆಯೂ ಮುಖ್ಯ ಎಂದು ಹೇಳಿತ್ತು.  ಹಾಗೇ, 2021ರ ಫೆಬ್ರವರಿಯಲ್ಲಿ ಮದ್ರಾಸ್ ಹೈಕೋರ್ಟ್​ ಕೂಡ ಇಂಥದ್ದೇ ಒಂದು ಅರ್ಜಿಯನ್ನು ವಿಲೇವಾರಿ ಮಾಡಿದೆ. ನೇತಾಜಿ ಸುಭಾಷ್​ ಚಂದ್ರಬೋಸ್​ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂಬುದನ್ನು ಕೋರ್ಟ್ ಒಪ್ಪಿಕೊಳ್ಳುತ್ತದೆ. ಆದರೆ ಅರ್ಜಿದಾರರ ಮನವಿ ಪುರಸ್ಕರಿಸುವುದು ಕಷ್ಟ ಎಂದಿತ್ತು.

ಇದನ್ನೂ ಓದಿ: Subramanian Swamy: ಆರ್ಥಿಕತೆ, ಚೀನಾದ ಗಡಿ ವಿವಾದ ನಿರ್ವಹಣೆ ರೀತಿಗೆ ಸುಬ್ರಮಣಿಯನ್ ಸ್ವಾಮಿ ಅಸಮಾಧಾನ

Published On - 1:20 pm, Tue, 14 December 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ