AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು-ಸರಕಾರದ ನಡುವಿನ ಮಾತುಕತೆ ವಿಫಲಗೊಳಿಸಲು ಅಂತರಾಷ್ಟ್ರೀಯ ಸಂಚೇ ಕಾರಣ; ಆರ್​ಎಸ್​ಎಸ್​

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಚಳುವಳಿ ಕುರಿತಾಗಿ ಆರ್​ಎಸ್​ಎಸ್​ ವಿಭಿನ್ನ ನಿಲುವು ತಳೆದಿರುವಂತಿದೆ. ಈ ನಿಲುವು ಕೇಂದ್ರ ಸರಕಾರದ ನೀತಿಗಿಂತ ವಿಭಿನ್ನವಾಗಿರುವುದು ವಿಶೇಷ. ಈ ಕುರಿತಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ

ರೈತರು-ಸರಕಾರದ ನಡುವಿನ ಮಾತುಕತೆ ವಿಫಲಗೊಳಿಸಲು ಅಂತರಾಷ್ಟ್ರೀಯ ಸಂಚೇ ಕಾರಣ; ಆರ್​ಎಸ್​ಎಸ್​
ಮುಷ್ಕರನಿರತ ರೈತರು
Follow us
ಡಾ. ಭಾಸ್ಕರ ಹೆಗಡೆ
| Updated By: Digi Tech Desk

Updated on: Mar 20, 2021 | 7:23 PM

ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳುವಳಿ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತನ್ನ ದ್ವೈವಾರ್ಷಿಕ, ಅಖಿಲ ಭಾರತ ಪ್ರತಿನಿಧಿಗಳ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ರಾಜಕೀಯ ಕೂಸು, ಭಾರತೀಯ ಜನತಾ ಪಕ್ಷದ ನಿಲುವಿಗಿಂತ ಭಿನ್ನ ನಿಲುವು ತಳೆದಿದೆ. ಭಾರತೀಯ ಜನತಾ ಪಕ್ಷ ರೈತ ಚಳುವಳಿಗೆ ದೇಶ ವಿರೋಧಿ ಸಂಘಟನೆಗಳ ಸಂಬಂಧ ಇದೆ, ಬೇರೆ ದೇಶಗಳಲ್ಲಿ ಇರುವ ಇಂಥ ಸಂಘಟನೆಗಳಿಂದ ಹಣಕಾಸಿನ ನೆರವು ಹರಿದು ಬರುತ್ತಿದೆ ಎಂದು ಹೇಳಿದೆ. ಆದರೆ ಆರ್​ಎಸ್​ಎಸ್​ ರೈತರ ಚಳುವಳಿಯನ್ನು ಟೀಕಿಸದೇ, ಅಂತರಾಷ್ಟ್ರೀಯ ಮಟ್ಟದ ಶಕ್ತಿಗಳು ಕೇಂದ್ರ ಸರಕಾರ ಮತ್ತು ರೈತ ಚಳುವಳಿ ನಾಯಕರ ನಡುವಿನ ಮಾತುಕತೆ ಸಫಲವಾಗದಂತೆ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಯಾವಾಗ ದೇಶವಿರೋಧಿ ಶಕ್ತಿಗಳು ಈ ಸಮಸ್ಯೆಗೆ (ರೈತರ ಬೇಡಿಕೆ) ಒಂದು ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಕಲ್ಲು ಹಾಕುತ್ತಾರೋ, ಆಗ ಸಮಸ್ಯೆ ಮತ್ತಷ್ಟು ಕಗ್ಗಂಟಾಗುವುದು ಖಂಡಿತ. ರೈತ ಚಳುವಳಿಯನ್ನು ನಡೆಸುತ್ತಿರುವ ನಾಯಕರು ಇದಕ್ಕೆ ಅವಕಾಶ ಕೊಡಬಾರದು ಎಂದು ಅಖಿಲ ಭಾರತ ಪ್ರತಿನಿಧಿಗಳ ಸಭೆಗೆ ನೀಡಿದ ವರದಿಯಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಸರಕಾರದ ನಿಲುವಿಗಿಂತ ಭಿನ್ನವಾಗಿದೆ.

ಕೇಂದ್ರ ಸರಕಾರ ಕಳೆದ ವರ್ಷ ಜಾರಿಗೆ ತಂದಿದ್ದ ಮೂರು ರೈತರ ಕಾನೂನನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಕಳೆದ 110 ದಿನಗಳಿಂದ ರೈತರು ಚಳುವಳಿ ನಡೆಸುತ್ತಿದ್ದಾರೆ. ಅವರ ಪ್ರಕಾರ, ಆ ಮೂರು ಕಾನೂನುಗಳು ರೈತರ ವಿರೋಧಿಯಾಗಿವೆ. ರೈತರಿಗೆ ಅನುಕೂಲ ಮಾಡಿಕೊಡುವಂಥ ಕೆಲವು ವಿಚಾರಗಳು ಆ ಕಾನೂನುಗಳಲ್ಲಿ ಇಲ್ಲ ಎಂಬುದು ಅವರ ವಾದ.

ಆದರೆ ಸ್ವದೇಶಿ ಜಾಗರಣ ಮಂಚ್ ಮತ್ತು ಭಾರತೀಯ ಕಿಸಾನ್​ ಸಂಘ ರೈತ ಚಳುವಳಿಯನ್ನು ಬೆಂಬಲಿಸಿವೆ. ಈ ಮೂರು ಕಾನೂನುಗಳು ಕಾರ್ಪೋರೇಟ್​ ಜಗತ್ತಿನ ಬಲಾಢ್ಯ ಶಕ್ತಿಗಳ ಹಿತಾಸಕ್ತಿಗಳನ್ನು ಕಾಪಾಡಲು ಮುಂದಾಗಿವೆ. ತಾವು ಯಾರು ಕೂಡ ಈಗ ನಡೆಯುತ್ತಿರುವ ಚಳುವಳಿಯಲ್ಲಿ ಭಾಗವಹಿಸುವುದಿಲ್ಲ. ಆದರೆ, ನೈತಿಕ ಬೆಂಬಲ ನೀಡುತ್ತೇವೆ ಎಂದು ಬಿಕೆಎಸ್​ನ ಬದರಿ ನಾರಾಯಣ್​ ಸಿಂಗ್ ಈ ಹಿಂದೆ ಹೇಳಿದ್ದನ್ನು ಸ್ಮರಿಸಿಕೊಳ್ಳಬಹುದು.

(Report given to RSS ABPS meet says that international forces thwarted the talks between government farmers leaders)

ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ