AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು-ಸರಕಾರದ ನಡುವಿನ ಮಾತುಕತೆ ವಿಫಲಗೊಳಿಸಲು ಅಂತರಾಷ್ಟ್ರೀಯ ಸಂಚೇ ಕಾರಣ; ಆರ್​ಎಸ್​ಎಸ್​

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಚಳುವಳಿ ಕುರಿತಾಗಿ ಆರ್​ಎಸ್​ಎಸ್​ ವಿಭಿನ್ನ ನಿಲುವು ತಳೆದಿರುವಂತಿದೆ. ಈ ನಿಲುವು ಕೇಂದ್ರ ಸರಕಾರದ ನೀತಿಗಿಂತ ವಿಭಿನ್ನವಾಗಿರುವುದು ವಿಶೇಷ. ಈ ಕುರಿತಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ

ರೈತರು-ಸರಕಾರದ ನಡುವಿನ ಮಾತುಕತೆ ವಿಫಲಗೊಳಿಸಲು ಅಂತರಾಷ್ಟ್ರೀಯ ಸಂಚೇ ಕಾರಣ; ಆರ್​ಎಸ್​ಎಸ್​
ಮುಷ್ಕರನಿರತ ರೈತರು
ಡಾ. ಭಾಸ್ಕರ ಹೆಗಡೆ
| Edited By: |

Updated on: Mar 20, 2021 | 7:23 PM

Share

ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳುವಳಿ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತನ್ನ ದ್ವೈವಾರ್ಷಿಕ, ಅಖಿಲ ಭಾರತ ಪ್ರತಿನಿಧಿಗಳ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ರಾಜಕೀಯ ಕೂಸು, ಭಾರತೀಯ ಜನತಾ ಪಕ್ಷದ ನಿಲುವಿಗಿಂತ ಭಿನ್ನ ನಿಲುವು ತಳೆದಿದೆ. ಭಾರತೀಯ ಜನತಾ ಪಕ್ಷ ರೈತ ಚಳುವಳಿಗೆ ದೇಶ ವಿರೋಧಿ ಸಂಘಟನೆಗಳ ಸಂಬಂಧ ಇದೆ, ಬೇರೆ ದೇಶಗಳಲ್ಲಿ ಇರುವ ಇಂಥ ಸಂಘಟನೆಗಳಿಂದ ಹಣಕಾಸಿನ ನೆರವು ಹರಿದು ಬರುತ್ತಿದೆ ಎಂದು ಹೇಳಿದೆ. ಆದರೆ ಆರ್​ಎಸ್​ಎಸ್​ ರೈತರ ಚಳುವಳಿಯನ್ನು ಟೀಕಿಸದೇ, ಅಂತರಾಷ್ಟ್ರೀಯ ಮಟ್ಟದ ಶಕ್ತಿಗಳು ಕೇಂದ್ರ ಸರಕಾರ ಮತ್ತು ರೈತ ಚಳುವಳಿ ನಾಯಕರ ನಡುವಿನ ಮಾತುಕತೆ ಸಫಲವಾಗದಂತೆ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಯಾವಾಗ ದೇಶವಿರೋಧಿ ಶಕ್ತಿಗಳು ಈ ಸಮಸ್ಯೆಗೆ (ರೈತರ ಬೇಡಿಕೆ) ಒಂದು ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಕಲ್ಲು ಹಾಕುತ್ತಾರೋ, ಆಗ ಸಮಸ್ಯೆ ಮತ್ತಷ್ಟು ಕಗ್ಗಂಟಾಗುವುದು ಖಂಡಿತ. ರೈತ ಚಳುವಳಿಯನ್ನು ನಡೆಸುತ್ತಿರುವ ನಾಯಕರು ಇದಕ್ಕೆ ಅವಕಾಶ ಕೊಡಬಾರದು ಎಂದು ಅಖಿಲ ಭಾರತ ಪ್ರತಿನಿಧಿಗಳ ಸಭೆಗೆ ನೀಡಿದ ವರದಿಯಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಸರಕಾರದ ನಿಲುವಿಗಿಂತ ಭಿನ್ನವಾಗಿದೆ.

ಕೇಂದ್ರ ಸರಕಾರ ಕಳೆದ ವರ್ಷ ಜಾರಿಗೆ ತಂದಿದ್ದ ಮೂರು ರೈತರ ಕಾನೂನನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಕಳೆದ 110 ದಿನಗಳಿಂದ ರೈತರು ಚಳುವಳಿ ನಡೆಸುತ್ತಿದ್ದಾರೆ. ಅವರ ಪ್ರಕಾರ, ಆ ಮೂರು ಕಾನೂನುಗಳು ರೈತರ ವಿರೋಧಿಯಾಗಿವೆ. ರೈತರಿಗೆ ಅನುಕೂಲ ಮಾಡಿಕೊಡುವಂಥ ಕೆಲವು ವಿಚಾರಗಳು ಆ ಕಾನೂನುಗಳಲ್ಲಿ ಇಲ್ಲ ಎಂಬುದು ಅವರ ವಾದ.

ಆದರೆ ಸ್ವದೇಶಿ ಜಾಗರಣ ಮಂಚ್ ಮತ್ತು ಭಾರತೀಯ ಕಿಸಾನ್​ ಸಂಘ ರೈತ ಚಳುವಳಿಯನ್ನು ಬೆಂಬಲಿಸಿವೆ. ಈ ಮೂರು ಕಾನೂನುಗಳು ಕಾರ್ಪೋರೇಟ್​ ಜಗತ್ತಿನ ಬಲಾಢ್ಯ ಶಕ್ತಿಗಳ ಹಿತಾಸಕ್ತಿಗಳನ್ನು ಕಾಪಾಡಲು ಮುಂದಾಗಿವೆ. ತಾವು ಯಾರು ಕೂಡ ಈಗ ನಡೆಯುತ್ತಿರುವ ಚಳುವಳಿಯಲ್ಲಿ ಭಾಗವಹಿಸುವುದಿಲ್ಲ. ಆದರೆ, ನೈತಿಕ ಬೆಂಬಲ ನೀಡುತ್ತೇವೆ ಎಂದು ಬಿಕೆಎಸ್​ನ ಬದರಿ ನಾರಾಯಣ್​ ಸಿಂಗ್ ಈ ಹಿಂದೆ ಹೇಳಿದ್ದನ್ನು ಸ್ಮರಿಸಿಕೊಳ್ಳಬಹುದು.

(Report given to RSS ABPS meet says that international forces thwarted the talks between government farmers leaders)

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು