AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು-ಸರಕಾರದ ನಡುವಿನ ಮಾತುಕತೆ ವಿಫಲಗೊಳಿಸಲು ಅಂತರಾಷ್ಟ್ರೀಯ ಸಂಚೇ ಕಾರಣ; ಆರ್​ಎಸ್​ಎಸ್​

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಚಳುವಳಿ ಕುರಿತಾಗಿ ಆರ್​ಎಸ್​ಎಸ್​ ವಿಭಿನ್ನ ನಿಲುವು ತಳೆದಿರುವಂತಿದೆ. ಈ ನಿಲುವು ಕೇಂದ್ರ ಸರಕಾರದ ನೀತಿಗಿಂತ ವಿಭಿನ್ನವಾಗಿರುವುದು ವಿಶೇಷ. ಈ ಕುರಿತಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ

ರೈತರು-ಸರಕಾರದ ನಡುವಿನ ಮಾತುಕತೆ ವಿಫಲಗೊಳಿಸಲು ಅಂತರಾಷ್ಟ್ರೀಯ ಸಂಚೇ ಕಾರಣ; ಆರ್​ಎಸ್​ಎಸ್​
ಮುಷ್ಕರನಿರತ ರೈತರು
ಡಾ. ಭಾಸ್ಕರ ಹೆಗಡೆ
| Edited By: |

Updated on: Mar 20, 2021 | 7:23 PM

Share

ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳುವಳಿ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತನ್ನ ದ್ವೈವಾರ್ಷಿಕ, ಅಖಿಲ ಭಾರತ ಪ್ರತಿನಿಧಿಗಳ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ರಾಜಕೀಯ ಕೂಸು, ಭಾರತೀಯ ಜನತಾ ಪಕ್ಷದ ನಿಲುವಿಗಿಂತ ಭಿನ್ನ ನಿಲುವು ತಳೆದಿದೆ. ಭಾರತೀಯ ಜನತಾ ಪಕ್ಷ ರೈತ ಚಳುವಳಿಗೆ ದೇಶ ವಿರೋಧಿ ಸಂಘಟನೆಗಳ ಸಂಬಂಧ ಇದೆ, ಬೇರೆ ದೇಶಗಳಲ್ಲಿ ಇರುವ ಇಂಥ ಸಂಘಟನೆಗಳಿಂದ ಹಣಕಾಸಿನ ನೆರವು ಹರಿದು ಬರುತ್ತಿದೆ ಎಂದು ಹೇಳಿದೆ. ಆದರೆ ಆರ್​ಎಸ್​ಎಸ್​ ರೈತರ ಚಳುವಳಿಯನ್ನು ಟೀಕಿಸದೇ, ಅಂತರಾಷ್ಟ್ರೀಯ ಮಟ್ಟದ ಶಕ್ತಿಗಳು ಕೇಂದ್ರ ಸರಕಾರ ಮತ್ತು ರೈತ ಚಳುವಳಿ ನಾಯಕರ ನಡುವಿನ ಮಾತುಕತೆ ಸಫಲವಾಗದಂತೆ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಯಾವಾಗ ದೇಶವಿರೋಧಿ ಶಕ್ತಿಗಳು ಈ ಸಮಸ್ಯೆಗೆ (ರೈತರ ಬೇಡಿಕೆ) ಒಂದು ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಕಲ್ಲು ಹಾಕುತ್ತಾರೋ, ಆಗ ಸಮಸ್ಯೆ ಮತ್ತಷ್ಟು ಕಗ್ಗಂಟಾಗುವುದು ಖಂಡಿತ. ರೈತ ಚಳುವಳಿಯನ್ನು ನಡೆಸುತ್ತಿರುವ ನಾಯಕರು ಇದಕ್ಕೆ ಅವಕಾಶ ಕೊಡಬಾರದು ಎಂದು ಅಖಿಲ ಭಾರತ ಪ್ರತಿನಿಧಿಗಳ ಸಭೆಗೆ ನೀಡಿದ ವರದಿಯಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಸರಕಾರದ ನಿಲುವಿಗಿಂತ ಭಿನ್ನವಾಗಿದೆ.

ಕೇಂದ್ರ ಸರಕಾರ ಕಳೆದ ವರ್ಷ ಜಾರಿಗೆ ತಂದಿದ್ದ ಮೂರು ರೈತರ ಕಾನೂನನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಕಳೆದ 110 ದಿನಗಳಿಂದ ರೈತರು ಚಳುವಳಿ ನಡೆಸುತ್ತಿದ್ದಾರೆ. ಅವರ ಪ್ರಕಾರ, ಆ ಮೂರು ಕಾನೂನುಗಳು ರೈತರ ವಿರೋಧಿಯಾಗಿವೆ. ರೈತರಿಗೆ ಅನುಕೂಲ ಮಾಡಿಕೊಡುವಂಥ ಕೆಲವು ವಿಚಾರಗಳು ಆ ಕಾನೂನುಗಳಲ್ಲಿ ಇಲ್ಲ ಎಂಬುದು ಅವರ ವಾದ.

ಆದರೆ ಸ್ವದೇಶಿ ಜಾಗರಣ ಮಂಚ್ ಮತ್ತು ಭಾರತೀಯ ಕಿಸಾನ್​ ಸಂಘ ರೈತ ಚಳುವಳಿಯನ್ನು ಬೆಂಬಲಿಸಿವೆ. ಈ ಮೂರು ಕಾನೂನುಗಳು ಕಾರ್ಪೋರೇಟ್​ ಜಗತ್ತಿನ ಬಲಾಢ್ಯ ಶಕ್ತಿಗಳ ಹಿತಾಸಕ್ತಿಗಳನ್ನು ಕಾಪಾಡಲು ಮುಂದಾಗಿವೆ. ತಾವು ಯಾರು ಕೂಡ ಈಗ ನಡೆಯುತ್ತಿರುವ ಚಳುವಳಿಯಲ್ಲಿ ಭಾಗವಹಿಸುವುದಿಲ್ಲ. ಆದರೆ, ನೈತಿಕ ಬೆಂಬಲ ನೀಡುತ್ತೇವೆ ಎಂದು ಬಿಕೆಎಸ್​ನ ಬದರಿ ನಾರಾಯಣ್​ ಸಿಂಗ್ ಈ ಹಿಂದೆ ಹೇಳಿದ್ದನ್ನು ಸ್ಮರಿಸಿಕೊಳ್ಳಬಹುದು.

(Report given to RSS ABPS meet says that international forces thwarted the talks between government farmers leaders)

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ