AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಹತ್ಯೆಗೆಂದು 60 ಶೂಟರ್​ಗಳನ್ನು ನೇಮಿಸಿದ್ದ ಲಾರೆನ್ಸ್ ಬಿಷ್ಣೋಯ್​

ಬಾಲಿವುಡ್ ಸೂಪರ್​ಸ್ಟಾರ್ ಸಲ್ಮಾನ್​ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಲಾರೆನ್ಸ್​ ಬಿಷ್ಣೋಯ್ 60 ಶೂಟರ್​ಗಳನ್ನು ನೇಮಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಹಲವು ವರ್ಷಗಳಿಂದ ಸಲ್ಮಾನ್ ಖಾನ್ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ. 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಭಾಗಿಯಾಗಿದ್ದರು.

ಸಲ್ಮಾನ್ ಖಾನ್ ಹತ್ಯೆಗೆಂದು 60 ಶೂಟರ್​ಗಳನ್ನು ನೇಮಿಸಿದ್ದ ಲಾರೆನ್ಸ್ ಬಿಷ್ಣೋಯ್​
ಸಲ್ಮಾನ್ ಖಾನ್ Image Credit source: Koimoi
ನಯನಾ ರಾಜೀವ್
|

Updated on: Oct 15, 2024 | 2:04 PM

Share

ಬಾಲಿವುಡ್ ಸೂಪರ್​ಸ್ಟಾರ್ ಸಲ್ಮಾನ್​ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಲಾರೆನ್ಸ್​ ಬಿಷ್ಣೋಯ್ 60 ಶೂಟರ್​ಗಳನ್ನು ನೇಮಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಹಲವು ವರ್ಷಗಳಿಂದ ಸಲ್ಮಾನ್ ಖಾನ್ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ. 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಭಾಗಿಯಾಗಿದ್ದರು.

ಲಾರೆನ್ಸ್ ಸೇರಿರುವ ಬಿಷ್ಣೋಯ್ ಸಮುದಾಯವು ಕೃಷ್ಣಮೃಗವನ್ನು ಪವಿತ್ರವೆಂದು ಪರಿಗಣಿಸುತ್ತದೆ, ಇದು ಲಾರೆನ್ಸ್​ ಅಸಮಾಧಾನಕ್ಕೆ ಮೂಲ ಕಾರಣವೆಂದೇ ಹೇಳಬಹುದು. ಜೀ ನ್ಯೂಸ್‌ನ ಇತ್ತೀಚಿನ ವರದಿಯ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್‌ಗೆ ಅನೇಕ ಬಾರಿ ಬೆದರಿಕೆಗಳನ್ನು ಹಾಕಿದೆ.

ಗ್ಯಾಂಗ್ 60 ಶೂಟರ್​ಗಳನ್ನು ನೇಮಿಸಿಕೊಂಡಿದ್ದು, ಖಾನ್ ಸುರಕ್ಷತೆ ಕುರಿತು ಗಂಭೀರ ಕಳವಳ ಉಂಟಾಗಿದೆ. ಈಗಾಗಲೇ ಪದೇ ಪದೇ ಬೆದರಿಕೆಯೊಡ್ಡುತ್ತಿರುವುದರಿಂದ ಸಲ್ಮಾನ್ ಖಾನ್ ಸುತ್ತ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಮತ್ತಷ್ಟು ಓದಿ: ಬಾಬಾ ಸಿದ್ದಿಕಿ ಹಂತಕರಿಗೆ ಶಸ್ತ್ರಾಸ್ತ್ರ ಒದಗಿಸಿದ್ದು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​

ಶನಿವಾರ ನಡೆದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಘಟನೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ.

ಬಾಬಾ ಸಿದ್ದಿಕಿ ಕಚೇರಿಯಿಂದ ಮನೆಗೆ ಮರಳುತ್ತಿರುವ ಸಮಯದಲ್ಲಿ ದುಷ್ಕರ್ಮಿಗಳು ಆರು ಸುತ್ತಿನ ಗುಂಡು ಹಾರಿಸಿದ್ದರು ಅದರಲ್ಲಿ 3 ಗುಂಡುಗಳು ಸಿದ್ದಿಕಿ ದೇಹ ಹೊಕ್ಕಿದ್ದವು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ, ಅವರು ಸಲ್ಮಾನ್​ ಖಾನ್​ಗೂ ಆಪ್ತರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ