Rahul Gandhi: ಮಾನನಷ್ಟ ಪ್ರಕರಣದ ತೀರ್ಪಿನಲ್ಲಿ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ರಾಹುಲ್ ಗಾಂಧಿ ಸಿದ್ಧತೆ

ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾದ ಕಾರಣ ಲೋಕಸಭಾ ಸದಸ್ಯತ್ವ ಹಾಗೂ ಸರ್ಕಾರಿ ಬಂಗಲೆಯನ್ನು ಕಳೆದುಕೊಂಡಿರುವ ರಾಹುಲ್ ಗಾಂಧಿ ಇದೀಗ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

Rahul Gandhi: ಮಾನನಷ್ಟ ಪ್ರಕರಣದ ತೀರ್ಪಿನಲ್ಲಿ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ರಾಹುಲ್ ಗಾಂಧಿ ಸಿದ್ಧತೆ
ರಾಹುಲ್ ಗಾಂಧಿ
Follow us
|

Updated on:Apr 02, 2023 | 12:04 PM

ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾದ ಕಾರಣ ಲೋಕಸಭಾ ಸದಸ್ಯತ್ವ ಹಾಗೂ ಸರ್ಕಾರಿ ಬಂಗಲೆಯನ್ನು ಕಳೆದುಕೊಂಡಿರುವ ರಾಹುಲ್ ಗಾಂಧಿ(Rahul Gandhi) ಇದೀಗ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ಪ್ರಕರಣದ ಸಂಬಂಧ ರಾಹುಲ್ ಗಾಂಧಿ ಇದೀಗ  ಮೇಲ್ಮನವಿ ಸಲ್ಲಿಸಲಿದ್ದಾರೆ. ಮಾರ್ಚ್​ 24 ರಂದು ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾದ ಬಳಿಕ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲಾಗಿತ್ತು.

ಅದೇ ಸಮಯದಲ್ಲಿ 11 ದಿನಗಳ ನಂತರ ರಾಹುಲ್ ಗಾಂಧಿ ಸೂರತ್ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿಯವರ ಕಾನೂನು ತಂಡ ಏಪ್ರಿಲ್​ 3 ರಂದು ಅಂದರೆ ಸೋಮವಾರ ನ್ಯಾಯಾಲಯದ ಮೊರೆ ಹೋಗಲಿದೆ.

ಮತ್ತಷ್ಟು ಓದಿ: ಆರ್‌ಎಸ್‌ಎಸ್ 21ನೇ ಶತಮಾನದ ಕೌರವರು ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ಇದೆಲ್ಲದರ ನಡುವೆ ಗುಜರಾತ್ ಕಾಂಗ್ರೆಸ್ ಈ ತಿಂಗಳು ರಾಜ್ಯಾದ್ಯಂತ 300 ಕ್ಕೂ ಹೆಚ್ಚು ಸಮಾವೇಶಗಳನ್ನು ಆಯೋಜಿಸುತ್ತಿದೆ ಮತ್ತು ಬಿಜೆಪಿ ವೈಫಲ್ಯಗಳನ್ನು ಎತ್ತಿ ತೋರಿಸಲು ಮುಂದಾಗಿದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ.

ಎರಡು ಹಂತಗಳಲ್ಲಿ ಏಪ್ರಿಲ್ 6 ರಿಂದ 12 ಹಾಗೂ ಏಪ್ರಿಲ್ 15 ರಿಂದ 25ರವರೆಗೆ ಸಮಾವೇಶವನ್ನು ನಡೆಸಲು ಯೋಜಿಸಲಾಗಿದೆ. ರಾಹುಲ್ ಗಾಂಧಿ ಕೊನೆಯದಾಗಿ ಮಾರ್ಚ್​ 23 ರಂದು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:59 am, Sun, 2 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ