AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮ ಪುರಸ್ಕಾರ | ಎಸ್​ಪಿಬಿ, ಬಿ.ಎಂ. ಹೆಗ್ಡೆಗೆ ಪದ್ಮವಿಭೂಷಣ, ಕಂಬಾರಗೆ ಪದ್ಮಭೂಷಣ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಕೇಂದ್ರ ಸರ್ಕಾರ ವಿವಿಧ ಪ್ರಶಸ್ತಿ ಪುರಸ್ಕಾರಗಳನ್ನು ಘೋಷಣೆ ಮಾಡಿದೆ. ಎಸ್​.ಪಿ. ಬಾಲಸುಬ್ರಹ್ಮಣ್ಯಂ, ಬಿ.ಎಂ. ಹೆಗ್ಡೆ ಸೇರಿದಂತೆ ಹಲವು ಗಣ್ಯರಿಗೆ ಪದ್ಮವಿಭೂಷಣ ಗೌರವ ಸಿಕ್ಕಿದೆ.

ಪದ್ಮ ಪುರಸ್ಕಾರ | ಎಸ್​ಪಿಬಿ, ಬಿ.ಎಂ. ಹೆಗ್ಡೆಗೆ ಪದ್ಮವಿಭೂಷಣ, ಕಂಬಾರಗೆ ಪದ್ಮಭೂಷಣ
ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ
TV9 Web
| Edited By: |

Updated on:Apr 06, 2022 | 8:40 PM

Share

ದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಕೇಂದ್ರ ಸರ್ಕಾರ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಗಮನಾರ್ಹ ಸಾಧನೆ ಮಾಡಿರುವ ಪೊಲೀಸ್ ಸಿಬ್ಬಂದಿಗೂ ವಿವಿಧ ಮೆಡಲ್​ಗಳನ್ನು ಘೋಷಿಸಲಾಗಿದೆ.

ಪದ್ಮ ವಿಭೂಷಣ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ (ಕಲೆ), ಉಡುಪಿಯ ಖ್ಯಾತ ವೈದ್ಯ ಡಾ. ಬೆಳ್ಳೆ ಮೋನಪ್ಪ ಹೆಗ್ಡೆ (ಬಿ.ಎಂ. ಹೆಗ್ಡೆ-ಔಷಧ ಕ್ಷೇತ್ರ), ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ (ಸಾರ್ವಜನಿಕ ಕ್ಷೇತ್ರ), ನರೀಂದರ್ ಸಿಂಗ್ ಕಪಾನಿ (ವಿಜ್ಞಾನ ಮತ್ತು ಇಂಜಿನಿಯರಿಂಗ್) ಮೌಲಾನಾ ವಹಿದುದೀನ್ ಖಾನ್ (ಆಧ್ಯಾತ್ಮ ವಿಭಾಗ), ಬಿ.ಬಿ. ಲಾಲ್ (ಪುರಾತತ್ವ ಶಾಸ್ತ್ರ ವಿಭಾಗ) ಹಾಗೂ ಒಡಿಶಾದ ಸುದರ್ಶನ್ ಸಾಹೊ (ಕಲೆ).

ಪದ್ಮ ಭೂಷಣ 10 ಸಾಧಕರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ, ಮಾಜಿ ಕೇಂದ್ರ ಸಚಿವ ದಿವಂಗತ ರಾಮ್‌ವಿಲಾಸ್‌ ಪಾಸ್ವಾನ್, ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್‌, ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್, ಗುಜರಾತ್ ಮಾಜಿ ಮುಖ್ಯಮಂತ್ರಿ ಕೆಶು ಭಾಯ್ ಪಟೇಲ್, ಕೆ.ಎಸ್.​​ ಚಿತ್ರ, ನೃಪೇಂದ್ರ ಮಿಸ್ರಾ, ಕಲ್ಬೆ ಸಾದಿಕ್, ರಜನಿಕಾಂತ್ ದೇವಿದಾಸ್ ಶ್ರೋಫ್, ತಾರ್​ಲೋಚನ್ ಸಿಂಗ್ ಮುಂತಾದವರಿಗೆ ಪದ್ಮ ಭೂಷಣ ಲಭಿಸಿದೆ.

ಸಾಹಿತಿ ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ ಮತ್ತು ವೈದ್ಯ ಬಿ.ಎಂ. ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಿಕ್ಕಿದೆ.

ಪದ್ಮಶ್ರೀ ದೇಶದ 102 ಸಾಧಕರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಕರ್ನಾಟಕದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಆರ್.ಲಕ್ಷ್ಮೀನಾರಾಯಣ ಕಶ್ಯಪ್‌ (ಶಿಕ್ಷಣ), ಬಿ.ಮಂಜಮ್ಮ ಜೋಗತಿ (ಕಲೆ), ಕೆ.ವೈ.ವೆಂಕಟೇಶ್ (ಕ್ರೀಡೆ) ಕ್ಷೇತ್ರದಿಂದ ಪದ್ಮಶ್ರೀಗೆ ಆಯ್ಕೆಯಾಗಿದ್ದಾರೆ.

ಪೊಲೀಸ್ ಮೆಡಲ್ ಪೊಲೀಸ್ ಮೆಡಲ್ ಫಾರ್ ಮೆರಿಟೋರಿಯಸ್ ಸರ್ವೀಸ್​ಗೆ ಕರ್ನಾಟಕದಿಂದ 19 ಮಂದಿ ಪೊಲೀಸರು ಆಯ್ಕೆಯಾಗಿದ್ದಾರೆ. IGP ಡಾ. ಸುಬ್ರಮಣ್ಯೇಶ್ವರ ರಾವ್ ಅಯ್ಯಂಕಿ, SP ಬಾಬಾಸಾಬ್ ಶಿವಗೌಡ ನೆಮಗೌಡ್, DYSPಗಳಾದ ಬಸವಣ್ಣಪ್ಪ ರಾಮಚಂದ್ರ, ಅಶೋಕ ಡಿ, ಸಿ. ಬಾಲಕೃಷ್ಣ, ವಾಸುದೇವ್ ವಿ.ಕೆ., CI ಬಾಲಚಂದ್ರ ನಾಯ್ಕ್, ACIಗಳಾದ ಹೊನ್ನಗಂಗಯ್ಯ ಈಶ್ವರಯ್ಯ, ಪ್ರಕಾಶ್, ಪೊಲೀಸ್ ಅಧಿಕಾರಿ ಬಸವಯ್ಯ ಪುಟ್ಟಸ್ವಾಮಿ, ರಿಸರ್ವ್ SIಗಳಾದ ವೆಂಕಟೇಶ್, ಮೋಹನ್​ರಾಜು ಕುರುಡಗಿ, ವೆಂಕಟಸ್ವಾಮಿ ಚಿನ್ನಪ್ಪ, ಜೀತೇಂದ್ರ ಕುಡುಕಾಡಿ ರಾಧಾಕೃಷ್ಣ ರೈ, ಶಶಿಕಕುಮಾರ್, ಸಶಸ್ತ್ರ ಪಡೆಯ ಮುಖ್ಯ ಪೇದೆ ರಾಮಚಂದ್ರ ಲೋಕೇಶ್, ಮುಖ್ಯ ಪೇದೆ ಶ್ರೀ ಉಸ್ಮಾನ್ ಸಾಬ್, ಸತೀಶ್ ಕೆಂಪಯ್ಯ ವೆಂಕಟಪ್ಪ ಹಾಗೂ ಪ್ರಕಾಶ್ ಶೆಟ್ಟಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪೊಲೀಸ್ ಮೆಡಲ್ ಪಡೆಯಲಿದ್ದಾರೆ.

ಗಣರಾಜ್ಯೋತ್ಸವ ವಿಶೇಷ | ಸಂವಿಧಾನ ಪ್ರತಿಯ ಮೆರುಗು ಹೆಚ್ಚಿಸಿದ ಶಾಂತಿನಿಕೇತನ ಕಲಾವಿದರ ಚಿತ್ರಕಲೆ

Published On - 9:15 pm, Mon, 25 January 21

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ