AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2023: ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ತವ್ಯಪಥದಲ್ಲಿ ನೌಕಾದಳವನ್ನು ಮುನ್ನಡೆಸಲಿದ್ದಾರೆ ಕನ್ನಡತಿ ದಿಶಾ ಅಮೃತ್

ಜನವರಿ 26 ರಂದು ದೆಹಲಿಯ ಕರ್ತವ್ಯಪಥದಲ್ಲಿ ನಡೆಯಲಿರುವ ಸೇನಾಪಡೆಗಳ ಪಥ ಸಂಚಲನದಲ್ಲಿ ನೌಕಾಪಡೆ ತುಕಡಿಯನ್ನು ಮಂಗಳೂರಿನ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ಮುನ್ನಡೆಸಲಿದ್ದಾರೆ.

Republic Day 2023: ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ತವ್ಯಪಥದಲ್ಲಿ ನೌಕಾದಳವನ್ನು ಮುನ್ನಡೆಸಲಿದ್ದಾರೆ ಕನ್ನಡತಿ ದಿಶಾ ಅಮೃತ್
ದಿಶಾ ಅಮೃತ್
ನಯನಾ ರಾಜೀವ್
|

Updated on: Jan 24, 2023 | 1:02 PM

Share

ಜನವರಿ 26 ರಂದು ದೆಹಲಿಯ ಕರ್ತವ್ಯಪಥದಲ್ಲಿ ನಡೆಯಲಿರುವ ಸೇನಾಪಡೆಗಳ ಪಥ ಸಂಚಲನದಲ್ಲಿ ನೌಕಾಪಡೆ ತುಕಡಿಯನ್ನು ಮಂಗಳೂರಿನ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ಮುನ್ನಡೆಸಲಿದ್ದಾರೆ. ರಾಜಪಥ್​ಗೆ ಕರ್ತವ್ಯಪಥ ಎಂದು ಮರು ನಾಮಕರಣ ಮಾಡಿದ ನಂತರ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವ ಇದಾಗಿದ್ದು, ಅಂಡಮಾನ್ ನಿಕೋಬಾರ್ ಕಾರ್ಯ ನಿರ್ವಹಿಸುತ್ತಿರುವ ನೌಕಾ ವಾಯು ಕಾರ್ಯಾಚರಣೆಯ ಅಧಿಕಾರಿ ಆಗಿರುವ 29 ವರ್ಷದ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ನೌಕಾಪಡೆಯ ವಿಭಾಗವನ್ನು ಮುನ್ನಡೆಸಲಿದ್ದಾರೆ.

ಒಟ್ಟು 144 ಸದಸ್ಯರ ಯುವ ನಾವಿಕರ ತಂಡವನ್ನು ದಿವ್ಯಾ ಅಮೃತ್ ಮುನ್ನಡೆಸಲಿದ್ದು, ಇದರಲ್ಲಿ ಮೂವರು ಮಹಿಳೆಯರು ಮತ್ತು ಐವರು ಪುರುಷರು ಅಗ್ನಿವೀರರಾಗಿ ತರಬೇತಿ ಪಡೆಯುತ್ತಿದ್ದಾರೆ. ಮತ್ತೊಬ್ಬ ಮಹಿಳಾ ಅಧಿಕಾರಿ ಸಬ್ –ಲೆಫ್ಟಿನೆಂಟ್ ಎಸ್. ವಲ್ಲಿ ಮೀನಾ ಮೂರು ದಳದ ಕಮಾಂಡರ್​ಗಳಲ್ಲಿ ಒಬ್ಬರಾಗಿರುತ್ತಾರೆ.

ಮತ್ತಷ್ಟು ಓದಿ: Republic Day Interesting Facts: ಸಂವಿಧಾನವು ಜನವರಿ 26 ರಂದು ಏಕೆ ಜಾರಿಗೆ ಬಂತು, ಭಾರತದ ಸಂವಿಧಾನಕ್ಕೆ ಸಂಬಂಧಿಸಿದ ಆಸಕ್ತಿದಾಯಕ ವಿಷಯಗಳು ಇಲ್ಲಿವೆ

ನೌಕಾದಳದ ಸ್ತಬ್ಧಚಿತ್ರವು ‘ನಾರಿಶಕ್ತಿ‘ಯನ್ನು ಧ್ಯೇಯ ಹೊಂದಿದ್ದು, ಮೇಕ್ ಇನ್ ಇಂಡಿಯಾದ ಯೋಜನೆಯಡಿ ತಯಾರಿಸಿದ ಸ್ಕಾರ್ಪೀನ್, ಕಲ್ವರಿ ಜಲಾಂತರ್ಗಾಮಿ ನೌಕೆಗಳು ಸೇರಿದಂತೆ ನೌಕಾಪಡೆಯ ಬಹು ಆಯಾಮದ ಸಾಮರ್ಥ್ಯ ಪರೇಡ್​ನಲ್ಲಿ ಪ್ರದರ್ಶನಗೊಳ್ಳಲಿದೆ.

ಲೆಫ್ಟಿನೆಂಟ್ ದಿಶಾ ಮಹಿಳಾ ಅಧಿಕಾರಿ ಎಂದು ಕರೆಸಿಕೊಳ್ಳುವ ಬದಲು ಅಧಿಕಾರಿ ಎಂದು ಕರೆಸಿಕೊಳ್ಳಲು ಇಷ್ಟಪಡುತ್ತಾರೆ ಎಂದು ವಾಯುಪಡೆ ಮೂಲಗಳು ತಿಳಿಸಿವೆ. ನಾನು ಪುರುಷ ಸಹೋದ್ಯೋಗಿಗಳಷ್ಟೇ ಸಮನಾಗಿದ್ದೇನೆ. ಅದನ್ನು ಸಾಬೀತು ಕೂಡ ಮಾಡಿದ್ದೇನೆ. ನೌಕಾಪಡೆಯ ಕವಾಯತು ತಂಡವನ್ನು ಮುನ್ನಡೆಸುವುದು ನನ್ನ ಜೀವಮಾನದ ಅದ್ಭುತ ಅವಕಾಶ ಎಂದು ದಿಶಾ ಹೇಳಿದ್ದಾರೆ. ಡಾ. ಅಶ್ವತ್ಥ ನಾರಾಯಣ ಕೂಡ ಅಭಿನಂದನೆ ಸಲ್ಲಿಸಿದ್ದಾರೆ.

ದಿಶಾ ಅಮೃತ್ ಮಂಗಳೂರಿನ ಬೋಳೂರಿನ ತಿಲಕ್​ ನಗರದ ನಿವಾಸಿಯಾಗಿದ್ದು, ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

ತಂದೆ ಅಮೃತ್​ಕುಮಾರ್ ಮತ್ತು ತಾಯಿ ಲೀಲಾ. ಬಾಲ್ಯದಿಂದಲೇ ನೌಕಾಪಡೆಯ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದ ದಿಶಾ, ಶಾಲೆಯಲ್ಲಿ ಕಲಿಯುತ್ತಿರುವಾಗಲೇ ದೆಹಲಿಯ ಗಣರಾಜ್ಯೋತ್ಸವ ಪರೇಡ್​ಗೆ ಆಯ್ಕೆಯಾಗಿದ್ದರು.

ಎಂಜಿನಿಯರಿಂಗ್ ವ್ಯಾಸಂಗ ಮಾಡುವಾಗಲೇ ನೌಕಾಪಡೆಯ ವಿವಿಧ ಅರ್ಹತಾ ಪರೀಕ್ಷೆಗಳನ್ನು ಎದುರಿಸಿದ್ದರು. 2008ರಿಂದಲೇ ಸಶಸ್ತ್ರ ಪಡೆಗಳ ಗಣರಾಜ್ಯೋತ್ಸವ ದಿನದ ತುಕಡಿಯ ಭಾಗವಾಗುವ ಕನಸು ಹೊಂದಿದ್ದೆ. ನನ್ನ ತಂದೆ ಕೂಡ ಸಶಸ್ತ್ರ ಪಡೆಯ ಭಾಗವಾಗಲು ಬಯಸಿದ್ದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ. ನಾನು ನೌಕಾಪಡೆಯ ಭಾಗವಾಗಿರುವುದಕ್ಕೆ ಹೆಮ್ಮೆಇದೆ ಎಂದಿದ್ದಾರೆ.

ಕೆಲವು ಬಾರಿ ಇದರಲ್ಲಿ ವಿಫಲರಾದರೂ ಛಲ ಬಿಡದೆ ನೌಕಾಪಡೆಯ ವಿಶೇಷ ಅಧಿಕಾರಿಯಾಗಿ ನೇಮಕಗೊಂಡರು. ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಕಲಿಯುವಾಗಲೇ ನೌಕಾಪಡೆಯ ವಿವಿಧ ಅರ್ಹತಾ ಪರೀಕ್ಷೆಗಳನ್ನು ಎದುರಿಸಿದ್ದರು. ಕೆಲವು ಬಾರಿ ಇದರಲ್ಲಿ ವಿಫಲರಾದರೂ ಛಲ ಬಿಡದೇ ಭಾರತೀಯ ನೌಕಾಪಡೆಯ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿದ್ದರು.

2016ರಲ್ಲಿ ನೌಕಾಪಡೆಗೆ ಸೇರಿದ ದಿಶಾ, 2017ರಲ್ಲಿ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!