AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2023: ಮತ್ತೊಮ್ಮೆ ಒಗ್ಗಟ್ಟಿನ ಮಂತ್ರ ಪಠಿಸಿ, ಸ್ವಾತಂತ್ರ್ಯ ಹೋರಾಟಗಾರರ ಕನಸನ್ನು ನನಸು ಮಾಡಲು ದೇಶದ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

ದೇಶವು ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಒಂದು ದೇಶವಾಗಿ ಎಲ್ಲಾ ನಾಗರಿಕರಿಗೆ ಜನವರಿ 26 ರ ದಿನವು ಬಹಳ ಮುಖ್ಯವಾಗಿದೆ, ಏಕೆಂದರೆ ಈ ದಿನದಂದು ನಾವು ದೇಶದ ಸಂವಿಧಾನವನ್ನು ಪಡೆದುಕೊಂಡಿದ್ದೇವೆ.

Republic Day 2023: ಮತ್ತೊಮ್ಮೆ ಒಗ್ಗಟ್ಟಿನ ಮಂತ್ರ ಪಠಿಸಿ, ಸ್ವಾತಂತ್ರ್ಯ ಹೋರಾಟಗಾರರ ಕನಸನ್ನು ನನಸು ಮಾಡಲು ದೇಶದ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jan 26, 2023 | 9:16 AM

Share

ದೇಶವು ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಒಂದು ದೇಶವಾಗಿ ಎಲ್ಲಾ ನಾಗರಿಕರಿಗೆ ಜನವರಿ 26 ರ ದಿನವು ಬಹಳ ಮುಖ್ಯವಾಗಿದೆ, ಏಕೆಂದರೆ ಈ ದಿನದಂದು ನಾವು ದೇಶದ ಸಂವಿಧಾನವನ್ನು ಪಡೆದುಕೊಂಡಿದ್ದೇವೆ. ಈ ಸಂಬಂಧ ಪ್ರಧಾನಿ ನರೇಂದ್ರ  ಮೋದಿ ಗಣರಾಜ್ಯೋತ್ಸವಕ್ಕೂ ಮುನ್ನ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಮೋದಿ ಟ್ವೀಟ್ ಮಾಡಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವು ಇದನ್ನು ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ.

ಮತ್ತೊಂದೆಡೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ ಮತ್ತು ದೇಶವಾಸಿಗಳಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ಅಮಿತ್ ಶಾ ಅವರು ತಮ್ಮ ಟ್ವೀಟ್‌ನಲ್ಲಿ, 74ನೇ ಗಣರಾಜ್ಯೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು.

ಮತ್ತಷ್ಟು ಓದಿ: Republic Day 2023: ಗಣರಾಜ್ಯೋತ್ಸವ ಆಚರಣೆಗೆ ವಿದ್ಯುದ್ದೀಪಾಲಂಕಾರದಿಂದ ಝಗಮಗಿಸಿದ ಕಟ್ಟಡಗಳು

ಇಂದು, ದೇಶವನ್ನು ವಿಮೋಚನೆಗೊಳಿಸಲು, ಬಲಪಡಿಸಲು ಮತ್ತು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಎಲ್ಲ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ತಯಾರಕರು ಮತ್ತು ವೀರ ಸೈನಿಕರಿಗೆ ನಾನು ನಮಸ್ಕರಿಸುತ್ತೇನೆ.

ರಾಜನಾಥ್ ಸಿಂಗ್ ತಮ್ಮ ಟ್ವೀಟ್‌ನಲ್ಲಿ, ‘ಗಣರಾಜ್ಯೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಇಂದು, ಈ ದಿನವು ಎಲ್ಲಾ ಭಾರತೀಯರಿಗೆ ದೇಶದ ಸಾಂವಿಧಾನಿಕ ಸಂಪ್ರದಾಯಗಳನ್ನು ಬಲಪಡಿಸಲು ಮತ್ತು ನವ ಭಾರತವನ್ನು ನಿರ್ಮಿಸುವ ಸಂಕಲ್ಪಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಲು ಒಂದು ಅವಕಾಶವಾಗಿದೆ. ಭಾರತದ ಎಲ್ಲಾ ಸಂವಿಧಾನ ರಚನೆಕಾರರಿಗೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನಗಳು ಎಂದಿದ್ದಾರೆ.

ಗಣರಾಜ್ಯೋತ್ಸವದ ವಿಶೇಷತೆ ಏನು? ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿಯ ಗಣರಾಜ್ಯೋತ್ಸವದ ನೇತೃತ್ವ ವಹಿಸಲಿದ್ದು, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪರೇಡ್‌ನಲ್ಲಿ ಪ್ರದರ್ಶಿಸಲಾಗುವ ಮಿಲಿಟರಿ ಶಸ್ತ್ರಾಸ್ತ್ರಗಳಲ್ಲಿ ಭಾರತದಲ್ಲಿ ತಯಾರಿಸಿದ ಉಪಕರಣಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಇದು ಸ್ವಾವಲಂಬಿ ಭಾರತದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ.

ಮುಖ್ಯ ಯುದ್ಧ ಟ್ಯಾಂಕ್ ಅರ್ಜುನ್, ನಾಗ್ ಮಿಸೈಲ್ ಸಿಸ್ಟಮ್ (ನಾಮಿಸ್) ಮತ್ತು ಕೆ-9 ವಜ್ರವನ್ನು ಸಹ ಪ್ರದರ್ಶಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಹೇಳಿಕೆಯ ಪ್ರಕಾರ, ಭಾರತೀಯ ನೌಕಾಪಡೆಯ ತುಕಡಿಯು ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ನೇತೃತ್ವದಲ್ಲಿ 144 ಯುವ ನಾವಿಕರನ್ನು ಒಳಗೊಂಡಿರುತ್ತದೆ. ಮೊದಲ ಬಾರಿಗೆ ಈ ಪರೇಡ್​ನಲ್ಲಿ ಮೂವರು ಮಹಿಳೆಯರು ಮತ್ತು ಆರು ಅಗ್ನಿವೀರರು ಇರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಹುತಾತ್ಮರಿಗೆ ಗೌರವ ಅರ್ಪಿಸಲಿದ್ದಾರೆ. ಪ್ರಧಾನಿ ಮತ್ತು ಇತರ ಗಣ್ಯರು ಪರೇಡ್ ವೀಕ್ಷಿಸಲು ಕರ್ತವ್ಯ ಪಥದಲ್ಲಿ ವಂದನಾ ವೇದಿಕೆಗೆ ತೆರಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:14 am, Thu, 26 January 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ