AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಇಂದು ಮೊಬೈಲ್ ಇಂಟರ್​ನೆಟ್ ಸೇವೆ ಸ್ಥಗಿತ

ಮೊಬೈಲ್ ಅಂತರ್ಜಾಲ ಸೇವೆಯನ್ನು ಕಾಶ್ಮೀರ ಕಣಿವೆ ಭಾಗದಲ್ಲಿ, ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆಯಂದು ಸ್ಥಗಿತಗೊಳಿಸುವ ಕ್ರಮ 2005ರಿಂದಲೂ ನಡೆಯುತ್ತಿದೆ.

ಕಾಶ್ಮೀರದಲ್ಲಿ ಇಂದು ಮೊಬೈಲ್ ಇಂಟರ್​ನೆಟ್ ಸೇವೆ ಸ್ಥಗಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 8:41 PM

Share

ಶ್ರೀನಗರ: ಕಾಶ್ಮೀರದಲ್ಲಿ ಇಂದು (ಜ.26) ಮೊಬೈಲ್ ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯು ಸುಸೂತ್ರವಾಗಿ ನಡೆಯುವ ಉದ್ದೇಶದಿಂದ ಮೊಬೈಲ್ ಅಂತರ್ಜಾಲ ಸೌಲಭ್ಯವನ್ನು ಒಂದು ದಿನದ ಮಟ್ಟಿಗೆ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಬೈಲ್ ಇಂಟರ್​ನೆಟ್ ಸೇವೆಯನ್ನು ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ, ಶಾಂತಿಯುತವಾಗಿ ಗಣರಾಜ್ಯೋತ್ಸವ ನೆರವೇರಬೇಕು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಮೊಬೈಲ್ ಸಂಪರ್ಕ ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಮೊಬೈಲ್ ಅಂತರ್ಜಾಲ (ಇಂಟರ್​ನೆಟ್) ಸೇವೆಯನ್ನು, ಕಾಶ್ಮೀರ ಕಣಿವೆ ಭಾಗದಲ್ಲಿ, ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆಯಂದು ಸ್ಥಗಿತಗೊಳಿಸುವ ಕ್ರಮ 2005ರಿಂದಲೂ ನಡೆಯುತ್ತಿದೆ. ಭದ್ರತೆಯ ಕಾರಣಗಳಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. 2005ರಲ್ಲಿ ಉಗ್ರಗಾಮಿಗಳು ಮೊಬೈಲ್ ಫೋನ್ ಬಳಸಿ, IED (ಇಂಪ್ರೊವೈಸ್ಡ್ ಎಕ್ಸ್​ಪ್ಲೋಸಿವ್ ಡಿವೈಸ್) ಸ್ಪೋಟ ಮಾಡಿದ್ದರು. ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದ ಸ್ಥಳದಲ್ಲಿ ಈ ದುಷ್ಕೃತ್ಯ ನಡೆದಿತ್ತು. ಆ ಬಳಿಕ, ಪ್ರತಿವರ್ಷ ಮೊಬೈಲ್ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ

Published On - 12:33 pm, Tue, 26 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ