AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಇಂದು ಮೊಬೈಲ್ ಇಂಟರ್​ನೆಟ್ ಸೇವೆ ಸ್ಥಗಿತ

ಮೊಬೈಲ್ ಅಂತರ್ಜಾಲ ಸೇವೆಯನ್ನು ಕಾಶ್ಮೀರ ಕಣಿವೆ ಭಾಗದಲ್ಲಿ, ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆಯಂದು ಸ್ಥಗಿತಗೊಳಿಸುವ ಕ್ರಮ 2005ರಿಂದಲೂ ನಡೆಯುತ್ತಿದೆ.

ಕಾಶ್ಮೀರದಲ್ಲಿ ಇಂದು ಮೊಬೈಲ್ ಇಂಟರ್​ನೆಟ್ ಸೇವೆ ಸ್ಥಗಿತ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 8:41 PM

Share

ಶ್ರೀನಗರ: ಕಾಶ್ಮೀರದಲ್ಲಿ ಇಂದು (ಜ.26) ಮೊಬೈಲ್ ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯು ಸುಸೂತ್ರವಾಗಿ ನಡೆಯುವ ಉದ್ದೇಶದಿಂದ ಮೊಬೈಲ್ ಅಂತರ್ಜಾಲ ಸೌಲಭ್ಯವನ್ನು ಒಂದು ದಿನದ ಮಟ್ಟಿಗೆ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಬೈಲ್ ಇಂಟರ್​ನೆಟ್ ಸೇವೆಯನ್ನು ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ, ಶಾಂತಿಯುತವಾಗಿ ಗಣರಾಜ್ಯೋತ್ಸವ ನೆರವೇರಬೇಕು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಮೊಬೈಲ್ ಸಂಪರ್ಕ ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಮೊಬೈಲ್ ಅಂತರ್ಜಾಲ (ಇಂಟರ್​ನೆಟ್) ಸೇವೆಯನ್ನು, ಕಾಶ್ಮೀರ ಕಣಿವೆ ಭಾಗದಲ್ಲಿ, ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆಯಂದು ಸ್ಥಗಿತಗೊಳಿಸುವ ಕ್ರಮ 2005ರಿಂದಲೂ ನಡೆಯುತ್ತಿದೆ. ಭದ್ರತೆಯ ಕಾರಣಗಳಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. 2005ರಲ್ಲಿ ಉಗ್ರಗಾಮಿಗಳು ಮೊಬೈಲ್ ಫೋನ್ ಬಳಸಿ, IED (ಇಂಪ್ರೊವೈಸ್ಡ್ ಎಕ್ಸ್​ಪ್ಲೋಸಿವ್ ಡಿವೈಸ್) ಸ್ಪೋಟ ಮಾಡಿದ್ದರು. ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದ ಸ್ಥಳದಲ್ಲಿ ಈ ದುಷ್ಕೃತ್ಯ ನಡೆದಿತ್ತು. ಆ ಬಳಿಕ, ಪ್ರತಿವರ್ಷ ಮೊಬೈಲ್ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ

Published On - 12:33 pm, Tue, 26 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ