AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2022 Parade: ಗಣರಾಜ್ಯೋತ್ಸವ ಪಥಸಂಚಲನಕ್ಕೆ ಪೂರ್ವಾಭ್ಯಾಸ; ಈ ಬಾರಿಯ ಪರೇಡ್​ನ ವಿಶೇಷತೆಗಳೇನು?

Ganatantra Diwas Parade Rehearsal: ಕಾರ್ಯಕ್ರಮದ ಹಿನ್ನೆಲೆಯಲ್ಲಿ ರೈಲು ಹಾಗೂ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ರೈಲ್ವೇ ಇಲಾಖೆ ಮಾಹಿತಿಯಂತೆ ಜನವರಿ 23 ಹಾಗೂ 26 ರಂದು ಹಲವು ರೈಲುಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

Republic Day 2022 Parade: ಗಣರಾಜ್ಯೋತ್ಸವ ಪಥಸಂಚಲನಕ್ಕೆ ಪೂರ್ವಾಭ್ಯಾಸ; ಈ ಬಾರಿಯ ಪರೇಡ್​ನ ವಿಶೇಷತೆಗಳೇನು?
ಗಣರಾಜ್ಯೋತ್ಸವ ದಿನಾಚರಣೆಯ ಪಥಸಂಚಲನ
TV9 Web
| Updated By: ganapathi bhat|

Updated on:Jan 23, 2022 | 12:54 PM

Share

ದೆಹಲಿ: ಗಣರಾಜ್ಯೋತ್ಸವ ದಿನಾಚರಣೆಯ ಪಥಸಂಚಲನದ ರಿಹರ್ಸಲ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿದೆ. ವಿಜಯ್ ಚೌಕ್ ನಿಂದ ಆರಂಭವಾಗುವ ಪರೇಡ್ ನೇಷನಲ್ ಸ್ಟೇಡಿಯಂ ಪ್ರವೇಶಿಸಲಿದೆ. ಫುಲ್ ಡ್ರೆಸ್ ರಿಹರ್ಸಲ್ ಇದಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ರೈಲು, ಮೆಟ್ರೋ ಹಾಗೂ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ರೈಲ್ವೇ ಮಾಹಿತಿಯಂತೆ ಜನವರಿ 23 ಹಾಗೂ 26 ರಂದು ಹಲವು ರೈಲುಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಅದೇ ರೀತಿ ರಸ್ತೆ ಸಂಚಾರದಲ್ಲಿ ಕೂಡ ನಿರ್ಬಂಧಗಳನ್ನು ಹೇರಲಾಗಿದೆ. ವಿಜಯ್ ಚೌಕ್​ನಿಂದ ಇಂಡಿಯಾ ಗೇಟ್ ವರೆಗಿನ ರಾಜ್​ಪಥ್ ಮಾರ್ಗದಲ್ಲಿ ಪಥಸಂಚಲನ ರಿಹರ್ಸಲ್ ಮುಗಿಯುವ ವರೆಗೂ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.

ಪಥಸಂಚಲನ ಹಿನ್ನೆಲೆಯಲ್ಲಿ ಪೊಲೀಸ್ ಜಂಟಿ ಆಯುಕ್ತ ವಿವೇಕ್ ಕಿಶೋರ್ ಕೊರೊನಾ ನಿಯಮ ಪಾಲನೆಯ ಕುರಿತಾಗಿಯೂ ಹೇಳಿಕೆ ನೀಡಿದ್ದಾರೆ. ಗ್ಲೌಸ್, ಮಾಸ್ಕ್, ಸ್ಯಾನಿಟೈಸರ್ ಹಾಗೂ ವೈದ್ಯಕೀಯ ತಂಡಗಳು ಇರಲಿವೆ. ಜನವರಿ 26ರ ಪಥಸಂಚಲನ ವೇಳೆಯಲ್ಲಿ ಇವು ಕಾರ್ಯನಿರ್ವಹಿಸಲಿವೆ. ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಿರುವ ವ್ಯಕ್ತಿಗೆ ವೈದ್ಯಕೀಯ ನೆರವು ಬೇಕು ಎಂದು ಆದರೂ ವೈದ್ಯಕೀಯ ತಂಡವು ತಕ್ಷಣವೇ ಅವರಿಗೆ ಅಗತ್ಯಸೇವೆ ನೀಡಲಿದೆ ಎಂದು ಹೇಳಲಾಗಿದೆ.

ಈ ಬಾರಿಯ ಗಣರಾಜ್ಯೋತ್ಸವ ಥೀಮ್ ಏನು?, ಪಥಸಂಚಲನ 30 ನಿಮಿಷ ವಿಳಂಬ ಎಂಬ ಮಾಹಿತಿ

ಗಣರಾಜ್ಯೋತ್ಸವ ಪಥಸಂಚಲನವನ್ನು ಜನವರಿ 26 ರಂದು ಪರಿಪೂರ್ಣವಾಗಿ ವೀಕ್ಷಿಸಬಹುದಾಗಿದೆ. ಈ ಬಾರಿ ಗಣರಾಜ್ಯೋತ್ಸವ ಪಥಸಂಚಲನಕ್ಕೆ India@75 ಎಂಬ ಥೀಮ್ ಇದೆ. ಭಾರತದ ಸ್ವಾತಂತ್ರ್ಯಕ್ಕೆ 75 ವರ್ಷಗಳ ಹೊತ್ತಲ್ಲಿ ಈ ರೀತಿ ಗಣರಾಜ್ಯೋತ್ಸವ ಆಚರಣೆ ಆಗಲಿದೆ.

75 ವರ್ಷಗಳಲ್ಲೇ ಮೊದಲ ಬಾರಿಗೆ ಪಥಸಂಚಲನ 30 ನಿಮಿಷ ವಿಳಂಬ ಆಗಲಿದೆ ಎಂದು ತಿಳಿದುಬಂದಿದೆ. ಕೊರೊನಾ ಕಾರಣದಿಂದ 10 ಗಂಟೆಯ ಬದಲಾಗಿ 30 ನಿಮಿಷ ವಿಳಂಬವಾಗಿ ಪಥಸಂಚಲನ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಈ ಬಾರಿ 21 ಟ್ಯಾಬ್ಲೋಗಳು ಭಾಗವಹಿಸಲಿವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಟ್ಟು 56 ಸ್ತಬ್ಧಚಿತ್ರಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅದರಲ್ಲಿ 21 ಆಯ್ಕೆ ಆಗಿವೆ ಎಂದು ತಿಳಿದುಬಂದಿದೆ. ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಕೇವಲ 24,000 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಕೊರೊನಾ ಸೋಂಕಿಗೆ ಮೊದಲು ಸುಮಾರು 1.25 ಲಕ್ಷ ಮಂದಿಗೆ ಪಥಸಂಚಲನ ನೋಡಲು ಅವಕಾಶ ನೀಡಲಾಗುತ್ತಿತ್ತು.

ದೆಹಲಿಯ ರಂಗಶಾಲಾ ಶಿಬಿರದಲ್ಲಿ ಕಲಾ ತಂಡಗಳಿಂದ ಗಣರಾಜ್ಯೋತ್ಸವ ತಯಾರಿ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ: ಮಂಗಳೂರಿನಲ್ಲಿ ಮೆರವಣಿಗೆ ನಡೆಸಿ ಪ್ರತಿಭಟಿಸಲು ಜನಾರ್ದನ ಪೂಜಾರಿ ಕರೆ

ಇದನ್ನೂ ಓದಿ: ಗೌರವ ಹೆಚ್ಚಿಸಿಕೊಂಡ ಇಳಕಲ್ ಸೀರೆ, ಗುಳೇದಗುಡ್ಡ ಖಣ; ಗಣರಾಜ್ಯೋತ್ಸವ ಸ್ತಬ್ಧಚಿತ್ರಕ್ಕೆ ಆಯ್ಕೆ

Published On - 12:53 pm, Sun, 23 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ