AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2025: ಬಿಳಿ ಬಣ್ಣದ ಕುರ್ತಾ, ಕಾಫಿ ಬಣ್ಣದ ಜಾಕೆಟ್, ಕೇಸರಿ, ಹಳದಿ ಮಿಶ್ರಿತ ಪೇಟದಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ

ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಶೈಲಿಯಲ್ಲಿ ಕಾಣಿಸಿಕೊಂಡರು, ಬಿಳಿ ಬಣ್ಣದ ಕುರ್ತಾ, ಪೈಜಾ, ಕಾಫಿ ಬಣ್ಣದ ಜಾಕೆಟ್​, ಹಳಸಿ, ಕೇಸರಿ ಮಿಶ್ರಿತ ಪೇಟದಲ್ಲಿ ಸುಂದರವಾಗಿ ಕಂಡರು. ವರ್ಣರಂಜಿತ ಪೇಟವನ್ನು ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರೆಸಿದರು.ಈ ಹಿಂದೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಹುವರ್ಣದ ಬಾಂಧನಿ ಪ್ರಿಂಟ್ ಪೇಟವನ್ನು ಧರಿಸಿದ್ದರು.

Republic Day 2025: ಬಿಳಿ ಬಣ್ಣದ ಕುರ್ತಾ, ಕಾಫಿ ಬಣ್ಣದ ಜಾಕೆಟ್, ಕೇಸರಿ, ಹಳದಿ ಮಿಶ್ರಿತ ಪೇಟದಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jan 26, 2025 | 12:49 PM

Share

ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಶೈಲಿಯಲ್ಲಿ ಕಾಣಿಸಿಕೊಂಡರು, ಬಿಳಿ ಬಣ್ಣದ ಕುರ್ತಾ, ಪೈಜಾ, ಕಾಫಿ ಬಣ್ಣದ ಜಾಕೆಟ್​, ಹಳಸಿ, ಕೇಸರಿ ಮಿಶ್ರಿತ ಪೇಟದಲ್ಲಿ ಸುಂದರವಾಗಿ ಕಂಡರು. ವರ್ಣರಂಜಿತ ಪೇಟವನ್ನು ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರೆಸಿದರು.

ಈ ಹಿಂದೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಹುವರ್ಣದ ಬಾಂಧನಿ ಪ್ರಿಂಟ್ ಪೇಟವನ್ನು ಧರಿಸಿದ್ದರು. ಬಾಂಧನಿ ಒಂದು ರೀತಿಯ ಟೈ-ಡೈ ಬಟ್ಟೆಯಾಗಿದೆ, ಇದು ಗುಜರಾತ್ ಮತ್ತು ರಾಜಸ್ಥಾನದಲ್ಲಿ ಜನಪ್ರಿಯವಾಗಿದೆ. ಬಟ್ಟೆಯನ್ನು ಕಟ್ಟಿ ಗಂಟು ಹಾಕುವ ಮೂಲಕ ಬಣ್ಣ ಹಾಕುವ ವಿಧಾನ ಇದಾಗಿದೆ. ಜಾರ್ಜೆಟ್, ಶಿಫಾನ್, ರೇಷ್ಮೆ ಮತ್ತು ಹತ್ತಿ ಬಟ್ಟೆಯನ್ನು ಕಲರ್ ಪೂಲ್‌ಗೆ ಹಾಕುವ ಮೊದಲು ದಾರದಿಂದ ಬಿಗಿಯಾಗಿ ಕಟ್ಟಲಾಗುತ್ತದೆ ಮತ್ತು ಈ ದಾರವನ್ನು ತೆರೆದಾಗ, ಕಟ್ಟಿದ ಭಾಗವು ಬಣ್ಣವಾಗುತ್ತದೆ.

ನಂತರ ದಾರವನ್ನು ಬಳಸಿ ಕೈಯಿಂದ ಬಟ್ಟೆಯ ಮೇಲೆ ವಿನ್ಯಾಸವನ್ನು ಎಳೆಯಲಾಗುತ್ತದೆ. ಈ ಹಿಂದೆ 2023 ರಲ್ಲಿ, ಮೋದಿ ಬಹುವರ್ಣದ ರಾಜಸ್ಥಾನಿ ಪೇಟವನ್ನು ಕುರ್ತಾ ಮತ್ತು ಚೂಡಿದಾರ್ ಪೈಜಾಮ ಧರಿಸಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿದ್ದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಭಾನುವಾರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯ ಕೋರಿದರು.

ಮತ್ತಷ್ಟು ಓದಿ: Republic Day 2025: ಗಣರಾಜ್ಯೋತ್ಸವ: ಮೊದಲ ಬಾರಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರ ಪ್ರದರ್ಶನ

ಇಂದು ನಾವು ನಮ್ಮ ವೈಭವಯುತ ಗಣರಾಜ್ಯದ 75 ನೇ ವರ್ಷಾಚರಣೆಯನ್ನು ಆಚರಿಸುತ್ತಿದ್ದೇವೆ, ಈ ಸಂದರ್ಭದಲ್ಲಿ ನಮ್ಮ ಸಂವಿಧಾನವನ್ನು ರೂಪಿಸಿದ ಮತ್ತು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯ ಆಧಾರದ ಮೇಲೆ ನಮ್ಮ ಅಭಿವೃದ್ಧಿ ಪಯಣವನ್ನು ಖಾತರಿಪಡಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ನಾವು ನಮನ ಸಲ್ಲಿಸುತ್ತೇವೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ