Republic Day 2025: ಬಿಳಿ ಬಣ್ಣದ ಕುರ್ತಾ, ಕಾಫಿ ಬಣ್ಣದ ಜಾಕೆಟ್, ಕೇಸರಿ, ಹಳದಿ ಮಿಶ್ರಿತ ಪೇಟದಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ

ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಶೈಲಿಯಲ್ಲಿ ಕಾಣಿಸಿಕೊಂಡರು, ಬಿಳಿ ಬಣ್ಣದ ಕುರ್ತಾ, ಪೈಜಾ, ಕಾಫಿ ಬಣ್ಣದ ಜಾಕೆಟ್​, ಹಳಸಿ, ಕೇಸರಿ ಮಿಶ್ರಿತ ಪೇಟದಲ್ಲಿ ಸುಂದರವಾಗಿ ಕಂಡರು. ವರ್ಣರಂಜಿತ ಪೇಟವನ್ನು ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರೆಸಿದರು.ಈ ಹಿಂದೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಹುವರ್ಣದ ಬಾಂಧನಿ ಪ್ರಿಂಟ್ ಪೇಟವನ್ನು ಧರಿಸಿದ್ದರು.

Republic Day 2025: ಬಿಳಿ ಬಣ್ಣದ ಕುರ್ತಾ, ಕಾಫಿ ಬಣ್ಣದ ಜಾಕೆಟ್, ಕೇಸರಿ, ಹಳದಿ ಮಿಶ್ರಿತ ಪೇಟದಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ
ನರೇಂದ್ರ ಮೋದಿ

Updated on: Jan 26, 2025 | 12:49 PM

ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಶೈಲಿಯಲ್ಲಿ ಕಾಣಿಸಿಕೊಂಡರು, ಬಿಳಿ ಬಣ್ಣದ ಕುರ್ತಾ, ಪೈಜಾ, ಕಾಫಿ ಬಣ್ಣದ ಜಾಕೆಟ್​, ಹಳಸಿ, ಕೇಸರಿ ಮಿಶ್ರಿತ ಪೇಟದಲ್ಲಿ ಸುಂದರವಾಗಿ ಕಂಡರು. ವರ್ಣರಂಜಿತ ಪೇಟವನ್ನು ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರೆಸಿದರು.

ಈ ಹಿಂದೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಹುವರ್ಣದ ಬಾಂಧನಿ ಪ್ರಿಂಟ್ ಪೇಟವನ್ನು ಧರಿಸಿದ್ದರು. ಬಾಂಧನಿ ಒಂದು ರೀತಿಯ ಟೈ-ಡೈ ಬಟ್ಟೆಯಾಗಿದೆ, ಇದು ಗುಜರಾತ್ ಮತ್ತು ರಾಜಸ್ಥಾನದಲ್ಲಿ ಜನಪ್ರಿಯವಾಗಿದೆ. ಬಟ್ಟೆಯನ್ನು ಕಟ್ಟಿ ಗಂಟು ಹಾಕುವ ಮೂಲಕ ಬಣ್ಣ ಹಾಕುವ ವಿಧಾನ ಇದಾಗಿದೆ. ಜಾರ್ಜೆಟ್, ಶಿಫಾನ್, ರೇಷ್ಮೆ ಮತ್ತು ಹತ್ತಿ ಬಟ್ಟೆಯನ್ನು ಕಲರ್ ಪೂಲ್‌ಗೆ ಹಾಕುವ ಮೊದಲು ದಾರದಿಂದ ಬಿಗಿಯಾಗಿ ಕಟ್ಟಲಾಗುತ್ತದೆ ಮತ್ತು ಈ ದಾರವನ್ನು ತೆರೆದಾಗ, ಕಟ್ಟಿದ ಭಾಗವು ಬಣ್ಣವಾಗುತ್ತದೆ.

ನಂತರ ದಾರವನ್ನು ಬಳಸಿ ಕೈಯಿಂದ ಬಟ್ಟೆಯ ಮೇಲೆ ವಿನ್ಯಾಸವನ್ನು ಎಳೆಯಲಾಗುತ್ತದೆ. ಈ ಹಿಂದೆ 2023 ರಲ್ಲಿ, ಮೋದಿ ಬಹುವರ್ಣದ ರಾಜಸ್ಥಾನಿ ಪೇಟವನ್ನು ಕುರ್ತಾ ಮತ್ತು ಚೂಡಿದಾರ್ ಪೈಜಾಮ ಧರಿಸಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿದ್ದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಭಾನುವಾರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯ ಕೋರಿದರು.

ಮತ್ತಷ್ಟು ಓದಿ: Republic Day 2025: ಗಣರಾಜ್ಯೋತ್ಸವ: ಮೊದಲ ಬಾರಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರ ಪ್ರದರ್ಶನ

ಇಂದು ನಾವು ನಮ್ಮ ವೈಭವಯುತ ಗಣರಾಜ್ಯದ 75 ನೇ ವರ್ಷಾಚರಣೆಯನ್ನು ಆಚರಿಸುತ್ತಿದ್ದೇವೆ, ಈ ಸಂದರ್ಭದಲ್ಲಿ ನಮ್ಮ ಸಂವಿಧಾನವನ್ನು ರೂಪಿಸಿದ ಮತ್ತು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯ ಆಧಾರದ ಮೇಲೆ ನಮ್ಮ ಅಭಿವೃದ್ಧಿ ಪಯಣವನ್ನು ಖಾತರಿಪಡಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ನಾವು ನಮನ ಸಲ್ಲಿಸುತ್ತೇವೆ ಎಂದು ಹೇಳಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us