AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೆಂಪು ಬಣ್ಣದ ಪೇಟ ಧರಿಸಿ ಗಮನಸೆಳೆದ ಪ್ರಧಾನಿ

ಮೂಲಗಳ ಮಾಹಿತಿಯ ಪ್ರಕಾರ, ಮೋದಿ ಧರಿಸಿದ್ದ ಈ ಮುಂಡಾಸು ಜಾಮ್​ನಗರದಲ್ಲಿ ತಯಾರಾದದ್ದಾಗಿದೆ. ಗುಜರಾತ್​ನ ರಾಜರ ಕುಟುಂಬ ಈ ಪೇಟವನ್ನು ಪ್ರಧಾನಿಗೆ ಮೊದಲ ಬಾರಿಗೆ ಉಡುಗೊರೆ ನೀಡಿದೆ.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೆಂಪು ಬಣ್ಣದ ಪೇಟ ಧರಿಸಿ ಗಮನಸೆಳೆದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ganapathi bhat|

Updated on:Apr 06, 2022 | 8:38 PM

Share

ದೆಹಲಿ: ಭಾರತವು 72ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಇಂದು ಆಚರಿಸಲಾಯಿತು. ಪದ್ಧತಿಯಂತೆ ದೆಹಲಿ ರಾಜಪಥ್​ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡರು.

ದೆಹಲಿ ಗಣರಾಜ್ಯೋತ್ಸವ ಸಮಾರಂಭ ಆರಂಭವಾದಾಗ, ನೆರೆದಿದ್ದ ಜನರ ಮನಸೆಳೆದ ಒಂದು ವಿಚಾರವೆಂದರೆ ಪ್ರಧಾನಿ ನರೇಂದ್ರ ಮೋದಿ ಧರಿಸಿದ್ದ ಪೇಟ. ಬಿಳಿ ಕುರ್ತಾ, ಪೈಜಾಮಾ ಜೊತೆಗೆ, ಬೂದು ಬಣ್ಣದ ಕೋಟ್ ಹಾಗೂ ಶಾಲು ಧರಿಸಿದ್ದ ಪ್ರಧಾನಿ ಕೆಂಪು ಬಣ್ಣದ ಪೇಟ ತೊಟ್ಟು ಜನರ ಕಣ್ಸೆಳೆದರು.

ಮೂಲಗಳ ಮಾಹಿತಿಯ ಪ್ರಕಾರ, ಮೋದಿ ಧರಿಸಿದ್ದ ಈ ಮುಂಡಾಸು ಜಾಮ್​ನಗರದಲ್ಲಿ ತಯಾರಾದದ್ದಾಗಿದೆ. ಗುಜರಾತ್​ನ ರಾಜರ ಕುಟುಂಬ ಈ ಪೇಟವನ್ನು ಪ್ರಧಾನಿಗೆ ಮೊದಲ ಬಾರಿಗೆ ಉಡುಗೊರೆ ನೀಡಿದೆ ಎಂದು ತಿಳಿದುಬಂದಿದೆ. ಜಾಮ್​ನಗರ್ ಲೋಕಸಭಾ ಸದಸ್ಯ, ಪೂನಾಬೆನ್ ಮಾದಮ್ ಟ್ವೀಟ್ ಮಾಡಿರುವಂತೆ, ಶ್ರೀಮಂತ ಸಂಸ್ಕೃತಿಯನ್ನು ಹೊಂದಿರುವ ಜಾಮ್​ನಗರ್​ನಲ್ಲಿ ಈ ಪೇಟ ತಯಾರಾಗಿದೆ.

ಪ್ರಧಾನಿ ಮೋದಿ ವಿಭಿನ್ನ ಉಡುಪು, ವಸ್ತ್ರ, ಪೇಟಗಳ ಮೂಲಕ ಗಮನ ಸೆಳೆಯುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಬಾರಿಯ ಗಣರಾಜ್ಯೋತ್ಸವದಲ್ಲೂ ಮೋದಿ ಕೇಸರಿ ಪೇಟ ಧರಿಸಿ ಕಾಣಿಸಿಕೊಂಡಿದ್ದರು. ಅಂತೆಯೇ, ಕಳೆದ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು, ರಾಜಸ್ಥಾನದ ಕೇಸರಿ ಮತ್ತು ಹಳದಿ ಬಣ್ನದ ಪೇಟದಲ್ಲಿ ಗಮನ ಸೆಳೆದಿದ್ದರು.

ಭಾರತದ ವೈವಿಧ್ಯತೆ ಸಾರಿದ ‘ಗೂಗಲ್ ಡೂಡಲ್​’; ಗಣರಾಜ್ಯೋತ್ಸವಕ್ಕೆ ಗೌರವ ಸಲ್ಲಿಸಿದ ಇಂಟರ್​ನೆಟ್​ ದೈತ್ಯ

ಗಣರಾಜ್ಯೋತ್ಸವ ವಿಶೇಷ | ಭಾರತದ ಸಂವಿಧಾನ ರಚನಾ ಸಮಿತಿಯಲ್ಲಿ ನಾರೀಶಕ್ತಿ

Published On - 7:42 pm, Tue, 26 January 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!