AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಮಾಂಚಕಾರಿ ‘ವರ್ಟಿಕಲ್ ಚಾರ್ಲಿ’ ಹಾಗೂ ‘ಏಕಲವ್ಯ’ ಪ್ರದರ್ಶನ ತೋರಿದ ರಫೇಲ್ ಜೆಟ್ ವಿಮಾನ

ಇಂದು ಮೊದಲ ಬಾರಿಗೆ ರಫೇಲ್ ಯುದ್ಧ ವಿಮಾನವು ನೀಡಿದ ವರ್ಟಿಕಲ್ ಚಾರ್ಲಿ ಹಾಗೂ ಏಕಲವ್ಯ ಪ್ರದರ್ಶನವು ಜನರ ಮನಸೂರೆಗೊಂಡಿತು. ಭಾರತದ ಸೇನೆಯ ಭಾಗವಾಗಿರುವ ಎಂಟು ರಫೇಲ್ ಜೆಟ್ ವಿಮಾನಗಳ ಪೈಕಿ ಒಂದು ವಿಮಾನವು 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿತು.

ರೋಮಾಂಚಕಾರಿ ‘ವರ್ಟಿಕಲ್ ಚಾರ್ಲಿ’ ಹಾಗೂ ‘ಏಕಲವ್ಯ’ ಪ್ರದರ್ಶನ ತೋರಿದ ರಫೇಲ್ ಜೆಟ್ ವಿಮಾನ
ಯುದ್ಧ ವಿಮಾನಗಳ ಪ್ರದರ್ಶನ ವೀಕ್ಷಿಸುತ್ತಿರುವ ಗಣ್ಯರು
TV9 Web
| Edited By: |

Updated on:Apr 06, 2022 | 8:38 PM

Share

ದೆಹಲಿ: ವಾಯುಪಡೆಗೆ ಈಚೆಗೆ ಸೇರ್ಪಡೆಯಾದ ರಫೇಲ್ ಜೆಟ್ ವಿಮಾನವು ಇಂದು ನಡೆದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿತು. ಮೊತ್ತ ಮೊದಲ ಬಾರಿಗೆ ರೋಮಾಂಚಕಾರಿಯಾದ ‘ವರ್ಟಿಕಲ್ ಚಾರ್ಲಿ’ ಹಾಗೂ ‘ಏಕಲವ್ಯ’ ಕಸರತ್ತು ಪ್ರದರ್ಶನ ಮಾಡಿ ಜನರ ಮನಸೂರೆಗೊಂಡಿತು.

ಎರಡು ಜಾಗ್ವಾರ್ ವಿಮಾನಗಳೊಂದಿಗೆ, ರಫೇಲ್ ಜೆಟ್ ವಿಮಾನ ಹಾಗೂ ಎರಡು MiG-29 ವಿಮಾನಗಳು ‘ಏಕಲವ್ಯ’ ಪ್ರದರ್ಶನ ತೋರಿದವು. 300 ಮೀಟರ್ ಎತ್ತರದಲ್ಲಿ, ಗಂಟೆಗೆ 780 ಕಿಮೀ ವೇಗದಲ್ಲಿ ಐದು ಜೆಟ್ ವಿಮಾನಗಳು V ಆಕಾರ ರೂಪಿಸಿದವು. ರಫೇಲ್ ಯುದ್ಧ ವಿಮಾನ ಏಕಲವ್ಯ ಪ್ರದರ್ಶನದ, V ಆಕೃತಿಯಲ್ಲಿ ಮುಂಚೂಣಿಯಲ್ಲಿ ಹಾರಿ, ನೆರೆದ ಜನರನ್ನು ಚಕಿತಗೊಳಿಸಿತು.

ರಫೇಲ್ ಯುದ್ಧ ವಿಮಾನವನ್ನು ಹರ್​ಕಿರತ್ ಸಿಂಗ್ ಮತ್ತು ಕಿಸ್ಲಾಯ್​ಕಾಂತ್ ಗಂಟೆಗೆ 900 ಕಿಮೀ ವೇಗದಲ್ಲಿ ಹಾರಿಸಿ, ‘ವರ್ಟಿಕಲ್ ಚಾರ್ಲಿ’ ಪ್ರದರ್ಶನ ನೀಡಿದರು. ಒಂದು ಮಟ್ಟದಲ್ಲಿ ಹಾರುತ್ತಿರುವ ಯುದ್ಧ ವಿಮಾನವು ತಕ್ಷಣಕ್ಕೆ ಲಂಬವಾಗಿ ಮೇಲಕ್ಕೆ ಹಾರುತ್ತಾ, ಹಲವು ಬಾರಿ ರೋಲ್ ಆಗಿ, ಬಳಿಕ ಎತ್ತರದಲ್ಲಿ ಸ್ಥಿರವಾಗುವುದನ್ನು ‘ವರ್ಟಿಕಲ್ ಚಾರ್ಲಿ’ ಎಂದು ಕರೆಯುತ್ತಾರೆ.

ಫ್ರಾನ್ಸ್​ನಲ್ಲಿ ತಯಾರಾಗಿರುವ ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಸೇನೆ ಖರೀದಿಸಿತ್ತು. ಕಳೆದ ವರ್ಷ ಸಪ್ಟೆಂಬರ್ 10ರಂದು ವಿಮಾನಗಳು ಅಂಬಾಲಾ ವಾಯುನೆಲೆಗೆ ಬಂದಿದ್ದವು. ಇಂದು ಮೊದಲ ಬಾರಿಗೆ ರಫೇಲ್ ಯುದ್ಧ ವಿಮಾನವು ನೀಡಿದ ವರ್ಟಿಕಲ್ ಚಾರ್ಲಿ ಪ್ರದರ್ಶನ ಜನರ ಕುತೂಹಲಕ್ಕೆ ಕಾರಣವಾಗಿತ್ತು.

ರಫೇಲ್ ಯುದ್ಧವಿಮಾನ

ಯುದ್ಧವಿಮಾನಗಳಿಂದ ಏರ್ ಶೋ

In Depth Report | ದೆಹಲಿ ಕೆಂಪುಕೋಟೆಯಲ್ಲಿ ರೈತಧ್ವಜ, ಟ್ರ್ಯಾಕ್ಟರ್ ಪರೇಡ್ ಈವರೆಗೆ ಏನೆಲ್ಲಾ ನಡೆಯಿತು?

Published On - 8:37 pm, Tue, 26 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್