AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mothers Of Constitution: ಸಂವಿಧಾನ ರೂಪಿಸುವಲ್ಲಿ ಮಹಿಳೆಯರೂ ಸಕ್ರಿಯ ಪಾತ್ರ ನಿರ್ವಹಿಸಿದ್ದರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೀಡಿರುವ ಹೇಳಿಕೆಯು ಸಂವಿಧಾನ ರಚನೆಯಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದ್ದ ಮಹಿಳೆಯರ ಬಗ್ಗೆ ದೇಶದ ಜನರ ಗಮನ ಸೆಳೆದಿದೆ.

Mothers Of Constitution: ಸಂವಿಧಾನ ರೂಪಿಸುವಲ್ಲಿ ಮಹಿಳೆಯರೂ ಸಕ್ರಿಯ ಪಾತ್ರ ನಿರ್ವಹಿಸಿದ್ದರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 13, 2023 | 12:24 PM

Share

ಸುಮಾರು ಐದು ವರ್ಷಗಳ ಹಿಂದೆ ತಾವು ನೀಡಿದ್ದ ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ (Chief Justice of India – CJ) ಡಿ.ವೈ.ಚಂದ್ರಚೂಡ್ ಇತ್ತೀಚೆಗೆ ವಿವರಣೆ ನೀಡಿದ ಅಪರೂಪದ ವಿದ್ಯಮಾನ ವರದಿಯಾಗಿದೆ. ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಣ ವಿವಾದದ ಬಗ್ಗೆ ವಿಚಾರಣೆ ನಡೆಸುತ್ತಿದ್ದ ಸಿಜೆ ಚಂದ್ರಚೂಡ್​, ‘ಸಂವಿಧಾನದ ಪಿತೃಗಳು ಮತ್ತು ಮಾತೆಯರು’ ಎಂದು 2018ರಲ್ಲಿ ತಾವು ಹೇಳಿದ್ದೇಕೆ ಎಂದು ವಿವರಿಸಿದರು.

ಚಂದ್ರಚೂಡ್​ ಅವರ 2018ರ ತೀರ್ಪು ಉಲ್ಲೇಖಿಸಿದ ವಕೀಲ ಡಾ ಅಭಿಷೇಕ್ ಮನು ಸಿಂಘ್ವಿ, ‘ಸಂವಿಧಾನದ ಮಾತೆಯರು’ (Founding Mothers of Constitution) ಎಂಬ ಉಲ್ಲೇಖವನ್ನು ನಾನು ಎಲ್ಲಿಯೂ ಓದಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ನ್ಯಾಯಮೂರ್ತಿಯೊಬ್ಬರು ತಮ್ಮ ತೀರ್ಪಿನಲ್ಲಿ ಈ ರೀತಿ ಉಲ್ಲೇಖಿಸಿದ್ದು ಇದೇ ಮೊದಲು’ ಎಂದು ಹೇಳಿದರು.

ಇಬ್ಬರ ವಾದಗಳನ್ನೂ ಆಲಿಸಿದ ನಂತರ ಪ್ರತಿಕ್ರಿಯಿಸಿ ಸಿಜೆ ಚಂದ್ರಚೂಡ್, ‘ಸಂವಿಧಾನದ ಕರಡು ಸಿದ್ಧಪಡಿಸುವಲ್ಲಿ ಹಲವು ಮಹಿಳೆಯರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಅವರಿಗೆ ತಕ್ಕ ಮನ್ನಣೆ ಸಿಗುವಂತೆ ಆಗಬೇಕು ಎನ್ನುವ ಕಾರಣಕ್ಕೆ ನಾನು ಹೀಗೆ ಹೇಳಿದ್ದೆ’ ಎಂದರು.

‘ತಮ್ಮ ಅಭಿಪ್ರಾಯಕ್ಕೆ ಮತ್ತಷ್ಟು ವಿವರಣೆ ನೀಡಿದ ಅವರು, ‘ತಾಯಂದಿರು ಎಂಬ ಪದವನ್ನು ನಾನು ಉದ್ದೇಶಪೂರ್ವಕವಾಗಿ ಬಳಸಿದ್ದೇನೆ. ಸಂವಿಧಾನದ ಸಭೆಗಳಲ್ಲಿ, ಕರಡು ಸಮಿತಿಗಳಲ್ಲಿ ಮಹಿಳೆಯರು ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಗೌರವ ಸಿಗಬೇಕು. ಮಾನ್ಯತೆ ದೊರೆಯಬೇಕು ಎನ್ನುವ ಕಾರಣಕ್ಕೆ ತಾಯಂದಿರು ಎಂಬ ಪದ ಬಳಸಿದ್ದೆ. ಇಲ್ಲದಿದ್ದರೆ ಅವರಿಗೆ ಸರಿಯಾದ ಕ್ರಮದಲ್ಲಿ ಗೌರವ ಸಲ್ಲಿಸಿದಂತೆ ಆಗುವುದಿಲ್ಲ ಎನಿಸಿತ್ತು. ಸಂವಿಧಾನ ಕರಡು ಸಮಿತಿಯಲ್ಲಿ ದಾಕ್ಷಾಯಿಣಿ ವೇಲಾಯುಧನ್ ಸೇರಿದಂತೆ ಹಲವು ಮಹಿಳೆಯರು ಸಕ್ರಿಯ ಪಾತ್ರ ನಿರ್ವಹಿಸಿದ್ದರು. ಈ ಮಹಿಳೆಯರು ಸಂವಿಧಾನಕ್ಕೆ ಹಲವು ರೀತಿಯಲ್ಲಿ ತಮ್ಮ ಕೊಡುಗೆ ನೀಡಿದ್ದಾರೆ’ ಎಂದು ವಿವರಿಸಿದರು.

‘ಸಂವಿಧಾನ ಸಮಿತಿಯಲ್ಲಿ ಹಲವು ಮಹಿಳೆಯರಿದ್ದರು. ಅವರಲ್ಲಿ ಹಲವರಿಗೆ ಪ್ರಬುದ್ಧ ಸಂಗಾತಿಗಳೂ ಇದ್ದರು. ಆದರೆ ಗಂಡನ ಚಾತುರ್ಯ ಅಥವಾ ಸ್ಥಾನಮಾನಗಳ ಹೊರತಾಗಿಯೂ ಈ ಮಹಿಳೆಯರು ಪ್ರತಿಭಾವಂತರಾಗಿದ್ದರು. ದುರ್ಗಾಭಾಯಿ ದೇಶಮುಖ್ ಅವರು ನನ್ನ ಮಾತಿಗೆ ಒಂದು ಉದಾಹರಣೆ ಮಾತ್ರ. ಅವರು ಆದರ್ಶಗಳಿಗಾಗಿ ಹೋರಾಡಿದರು. ಎಷ್ಟೋ ವಿಚಾರಗಳಲ್ಲಿ ತಮ್ಮ ಗಂಡಂದಿರ ವಿಚಾರಗಳಿಗೂ ಇವರ ವಿಚಾರಗಳಿಗೂ ವ್ಯತ್ಯಾಸಗಳಿದ್ದವು. ಹೀಗಾಗಿ ಅವರಿಗೆ ಶಾಸನಸಭೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತು’ ಎಂದು ಸಿಂಘ್ವಿ ಪ್ರತಿಕ್ರಿಯಿಸಿದರು.

ಭಾರತ ಸೇರಿದಂತೆ ಹಲವು ದೇಶಗಳು ‘ತಾಯಿನಾಡು’ (Motherland) ಎನ್ನುವ ಭಾವನೆಯನ್ನು ದೇಶದ ಬಗ್ಗೆ ಹೊಂದಿವೆ. ಜರ್ಮನಿಯಂಥ ಕೆಲವೇ ದೇಶಗಳು ‘ತಂದೆನೆಲ’ ಎಂದು ಹೇಳಿಕೊಳ್ಳುತ್ತವೆ ಎಂದೂ ಅಭಿಷೇಕ್ ಮನು ಸಿಂಘ್ವಿ ವಿವರಿಸಿದರು.

ಇದನ್ನೂ ಓದಿ: ಭಾರತ ಸಂವಿಧಾನ ರಕ್ಷಣೆಗೆ ಪ್ರಮಾಣ ಸ್ವೀಕರಿಸಿ, ಸಂವಿಧಾನದ ಪೀಠಿಕೆ ಓದಲು ಕರೆ ನೀಡಿದ ಸಚಿವ ಪ್ರಲ್ಹಾದ್ ಜೋಶಿ

ಮತ್ತಷ್ಟು ರಾಷ್ಟ್ರೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Fri, 13 January 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!