ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು

Updated on: Jan 23, 2021 | 8:02 PM

ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್​ ಪರೇಡ್​ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 26ರಂದು ಸಾವಿರಾರು ಟ್ರ್ಯಾಕ್ಟರ್​ಗಳು ದೆಹಲಿ ಪ್ರವೇಶಿಸಲಿವೆ.

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಸಾವಿರಾರು ರೈತರು ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ದೆಹಲಿಗೆ ಟ್ರ್ಯಾಕ್ಟರ್​ ಮೂಲಕ ಬರಲಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ನಾವು ಕಠಿಣ ಸಂದೇಶ ರವಾನೆ ಮಾಡಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಟ್ರ್ಯಾಕ್ಟರ್​ ಜಾತಾ ಹಿಂಸಾಚಾರಕ್ಕೆ ತಿರುಗುವ ಬಗ್ಗೆ ಕೆಲ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಶಾಂತಿಯುತವಾಗಿ ಈ ಪ್ರತಿಭಟನೆ ನಡೆಯಲಿದೆ ಎನ್ನುವ ಖಾತ್ರಿ ನೀಡಿದ ಮೇಲೆ ಪೊಲೀಸರು ಪ್ರತಿಭಟನೆಗೆ ಒಪ್ಪಿಗೆ ನೀಡಿದ್ದಾರೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us