ಸೋಂಕಿತರ ಅಂತ್ಯಸಂಸ್ಕಾರಕ್ಕೆ ತಮಿಳುನಾಡು ಮಾದರಿಯಾಯ್ತು, ಹೇಗೆ?

ಚೆನ್ನೈ: ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆ ಬಳ್ಳಾರಿಯಲ್ಲಿ ಅಮಾನವೀಯವಾಗಿ ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನಡೆಸಿದ್ದಾರೆ. ಯಾವುದೇ ಗೌರವವಿಲ್ಲದೆ ಸೋಂಕಿತರ ಮೃತದೇಹಗಳನ್ನು ದರದರನೆ ಎಳೆದು ಒಂದೇ ಗುಂಡಿಗೆ ಹಾಕಿದ್ದಾರೆ. ಇನ್ನು ಯಾದಗಿರಿ ಜಿಲ್ಲೆಯಲ್ಲೂ ಸಹ ಅಂಥದ್ದೇ ಒಂದು ಘಟನೆ ನಡೆದಿದೆ. ಸೋಂಕಿತನ ಶವವನ್ನು ಕಟ್ಟಿಗೆಗೆ ಕಟ್ಟಿ ಗುಂಡಿಗೆ ಹಾಕಿದ್ದಾರೆ. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಆದ್ರೆ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಸೋಂಕಿತರ ಅಂತ್ಯಕ್ರಿಯೆಗಾಗಿಯೇ ಹೊಸ ಯಂತ್ರವನ್ನು ಕಂಡುಹಿಡಿದಿದ್ದಾರೆ. ಚೆನ್ನೈ ಮೂಲದ MAUTO ಎಲೆಕ್ಟ್ರಿಕ್ ಮೊಬೈಲಿಟಿ ಮತ್ತು Zafi […]

ಸೋಂಕಿತರ ಅಂತ್ಯಸಂಸ್ಕಾರಕ್ಕೆ ತಮಿಳುನಾಡು ಮಾದರಿಯಾಯ್ತು, ಹೇಗೆ?
ಸಾಧು ಶ್ರೀನಾಥ್​ Edited By:

Updated on: Jul 01, 2020 | 6:36 PM

ಚೆನ್ನೈ: ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆ ಬಳ್ಳಾರಿಯಲ್ಲಿ ಅಮಾನವೀಯವಾಗಿ ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನಡೆಸಿದ್ದಾರೆ. ಯಾವುದೇ ಗೌರವವಿಲ್ಲದೆ ಸೋಂಕಿತರ ಮೃತದೇಹಗಳನ್ನು ದರದರನೆ ಎಳೆದು ಒಂದೇ ಗುಂಡಿಗೆ ಹಾಕಿದ್ದಾರೆ. ಇನ್ನು ಯಾದಗಿರಿ ಜಿಲ್ಲೆಯಲ್ಲೂ ಸಹ ಅಂಥದ್ದೇ ಒಂದು ಘಟನೆ ನಡೆದಿದೆ. ಸೋಂಕಿತನ ಶವವನ್ನು ಕಟ್ಟಿಗೆಗೆ ಕಟ್ಟಿ ಗುಂಡಿಗೆ ಹಾಕಿದ್ದಾರೆ. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

ಆದ್ರೆ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಸೋಂಕಿತರ ಅಂತ್ಯಕ್ರಿಯೆಗಾಗಿಯೇ ಹೊಸ ಯಂತ್ರವನ್ನು ಕಂಡುಹಿಡಿದಿದ್ದಾರೆ. ಚೆನ್ನೈ ಮೂಲದ MAUTO ಎಲೆಕ್ಟ್ರಿಕ್ ಮೊಬೈಲಿಟಿ ಮತ್ತು Zafi Robots ಈ ಆವಿಷ್ಕಾರವನ್ನು ಮಾಡಿವೆ. ಕೊರೊನಾದಿಂದ ಸತ್ತ ವ್ಯಕ್ತಿಯ ಮೃತದೇಹದ ಅಂತ್ಯಸಂಸ್ಕಾರವನ್ನು ಯಾರ ಮಾನವರ ಸಹಾಯವಿಲ್ಲದೆ ಈ ಯಂತ್ರಗಳೇ ಮಾಡಲಿವೆ. ಆ್ಯಂಬುಲೆನ್ಸ್​ನಿಂದ ನೇರವಾಗಿ ಯಂತ್ರದ ಮೇಲೆ ಸೋಂಕಿತರ ಶವವಿಟ್ರೆ, ಆ ಯಂತ್ರವು ನೇರವಾಗಿ ಗುಂಡಿಯೊಳಗೆ ಹಾಕುತ್ತದೆ. ಇದರಿಂದ ಯಾರೂ ಸಹ ಮೃತದೇಹವನ್ನು ಮುಟ್ಟುವ ಅವಶ್ಯಕತೆ ಇರುವುದಿಲ್ಲ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us