AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್

ಕಾಂಗ್ರೆಸ್ ತನ್ನ ಕೀಳು ರಾಜಕಾರಣದ ಭಾಗವಾಗಿ 1997 ಮತ್ತು 2013ರ ನಡುವೆ ಒಬಿಸಿ ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಮೀಸಲಾತಿಯ ಪರಿಶೀಲನೆ ನಡೆಸಲಾಗುವುದು ಎಂದು ರಾಜಸ್ಥಾನದ ಬಿಜೆಪಿ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್
ಅವಿನಾಶ್ ಗೆಹ್ಲೋಟ್
ಸುಷ್ಮಾ ಚಕ್ರೆ
|

Updated on: May 25, 2024 | 6:48 PM

Share

ಜೈಪುರ: ರಾಜಸ್ಥಾನದ (Rajasthan) ಬಿಜೆಪಿ ಸರ್ಕಾರವು ಇತರ ಹಿಂದುಳಿದ ಜಾತಿಗಳ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ ಮೀಸಲಾತಿಯನ್ನು (Muslim Reservation) ಪರಿಶೀಲಿಸುತ್ತದೆ ಎಂದು ರಾಜಸ್ಥಾನದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

“ತನ್ನ ಕೆಳಮಟ್ಟದ ರಾಜಕೀಯದ ಭಾಗವಾಗಿ ಕಾಂಗ್ರೆಸ್ 1997 ಮತ್ತು 2013ರ ನಡುವೆ OBC ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಎಲ್ಲಾ ಸುತ್ತೋಲೆಗಳು ನಮ್ಮ ಬಳಿ ಇವೆ. ಸರಿಯಾದ ಸಮಯದಲ್ಲಿ ಇಲಾಖೆ ಮತ್ತು ಸರ್ಕಾರವು ಅದನ್ನು ಪರಿಶೀಲಿಸುತ್ತದೆ ಎಂದು ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯದಲ್ಲೂ ಧರ್ಮದ ಆಧಾರದಲ್ಲಿ ಮೀಸಲಾತಿ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಧರ್ಮದ ಆಧಾರದ ಮೇಲೆ ಯಾವುದೇ ಜಾತಿ, ಸಮುದಾಯ ಅಥವಾ ವರ್ಗಕ್ಕೆ ಮೀಸಲಾತಿ ನೀಡುವುದನ್ನು ಸಂವಿಧಾನದಡಿಯಲ್ಲಿ ನಿಷೇಧಿಸಲಾಗಿದೆ ಎಂದು ಪ್ರತಿಪಾದಿಸಿದ ಅವರು, ನಮಗೆ ಅದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇಲಾಖೆಯು ಆ ದೂರುಗಳನ್ನು ಪರಿಶೀಲಿಸುತ್ತಿದೆ. ಈ ಬಗ್ಗೆ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಾರೆ ರಾಜಸ್ಥಾನದಲ್ಲಿ ಶೇ. 64ರಷ್ಟು ಮೀಸಲಾತಿ ಇದೆ. OBCಗಳಿಗೆ ಶೇ. 21, ಎಸ್​ಸಿಗಳಿಗೆ ಶೇ. 16, ಎಸ್​ಟಿಗಳಿಗೆ ಶೇ. 12, ಹಿಂದುಳಿದ ವರ್ಗದವರಿಗೆ ಶೇ. 10ರಷ್ಟು ಮತ್ತು ಅತ್ಯಂತ ಹಿಂದುಳಿದ ವರ್ಗಗಳಿಗೆ ಶೇ. 5ರಷ್ಟು ಮೀಸಲಾತಿ ನೀಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!