AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್

ಕಾಂಗ್ರೆಸ್ ತನ್ನ ಕೀಳು ರಾಜಕಾರಣದ ಭಾಗವಾಗಿ 1997 ಮತ್ತು 2013ರ ನಡುವೆ ಒಬಿಸಿ ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಮೀಸಲಾತಿಯ ಪರಿಶೀಲನೆ ನಡೆಸಲಾಗುವುದು ಎಂದು ರಾಜಸ್ಥಾನದ ಬಿಜೆಪಿ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್
ಅವಿನಾಶ್ ಗೆಹ್ಲೋಟ್
ಸುಷ್ಮಾ ಚಕ್ರೆ
|

Updated on: May 25, 2024 | 6:48 PM

Share

ಜೈಪುರ: ರಾಜಸ್ಥಾನದ (Rajasthan) ಬಿಜೆಪಿ ಸರ್ಕಾರವು ಇತರ ಹಿಂದುಳಿದ ಜಾತಿಗಳ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ ಮೀಸಲಾತಿಯನ್ನು (Muslim Reservation) ಪರಿಶೀಲಿಸುತ್ತದೆ ಎಂದು ರಾಜಸ್ಥಾನದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

“ತನ್ನ ಕೆಳಮಟ್ಟದ ರಾಜಕೀಯದ ಭಾಗವಾಗಿ ಕಾಂಗ್ರೆಸ್ 1997 ಮತ್ತು 2013ರ ನಡುವೆ OBC ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಎಲ್ಲಾ ಸುತ್ತೋಲೆಗಳು ನಮ್ಮ ಬಳಿ ಇವೆ. ಸರಿಯಾದ ಸಮಯದಲ್ಲಿ ಇಲಾಖೆ ಮತ್ತು ಸರ್ಕಾರವು ಅದನ್ನು ಪರಿಶೀಲಿಸುತ್ತದೆ ಎಂದು ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯದಲ್ಲೂ ಧರ್ಮದ ಆಧಾರದಲ್ಲಿ ಮೀಸಲಾತಿ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಧರ್ಮದ ಆಧಾರದ ಮೇಲೆ ಯಾವುದೇ ಜಾತಿ, ಸಮುದಾಯ ಅಥವಾ ವರ್ಗಕ್ಕೆ ಮೀಸಲಾತಿ ನೀಡುವುದನ್ನು ಸಂವಿಧಾನದಡಿಯಲ್ಲಿ ನಿಷೇಧಿಸಲಾಗಿದೆ ಎಂದು ಪ್ರತಿಪಾದಿಸಿದ ಅವರು, ನಮಗೆ ಅದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇಲಾಖೆಯು ಆ ದೂರುಗಳನ್ನು ಪರಿಶೀಲಿಸುತ್ತಿದೆ. ಈ ಬಗ್ಗೆ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಾರೆ ರಾಜಸ್ಥಾನದಲ್ಲಿ ಶೇ. 64ರಷ್ಟು ಮೀಸಲಾತಿ ಇದೆ. OBCಗಳಿಗೆ ಶೇ. 21, ಎಸ್​ಸಿಗಳಿಗೆ ಶೇ. 16, ಎಸ್​ಟಿಗಳಿಗೆ ಶೇ. 12, ಹಿಂದುಳಿದ ವರ್ಗದವರಿಗೆ ಶೇ. 10ರಷ್ಟು ಮತ್ತು ಅತ್ಯಂತ ಹಿಂದುಳಿದ ವರ್ಗಗಳಿಗೆ ಶೇ. 5ರಷ್ಟು ಮೀಸಲಾತಿ ನೀಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ