AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್

ಕಾಂಗ್ರೆಸ್ ತನ್ನ ಕೀಳು ರಾಜಕಾರಣದ ಭಾಗವಾಗಿ 1997 ಮತ್ತು 2013ರ ನಡುವೆ ಒಬಿಸಿ ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಮೀಸಲಾತಿಯ ಪರಿಶೀಲನೆ ನಡೆಸಲಾಗುವುದು ಎಂದು ರಾಜಸ್ಥಾನದ ಬಿಜೆಪಿ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್
ಅವಿನಾಶ್ ಗೆಹ್ಲೋಟ್
ಸುಷ್ಮಾ ಚಕ್ರೆ
|

Updated on: May 25, 2024 | 6:48 PM

Share

ಜೈಪುರ: ರಾಜಸ್ಥಾನದ (Rajasthan) ಬಿಜೆಪಿ ಸರ್ಕಾರವು ಇತರ ಹಿಂದುಳಿದ ಜಾತಿಗಳ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ ಮೀಸಲಾತಿಯನ್ನು (Muslim Reservation) ಪರಿಶೀಲಿಸುತ್ತದೆ ಎಂದು ರಾಜಸ್ಥಾನದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

“ತನ್ನ ಕೆಳಮಟ್ಟದ ರಾಜಕೀಯದ ಭಾಗವಾಗಿ ಕಾಂಗ್ರೆಸ್ 1997 ಮತ್ತು 2013ರ ನಡುವೆ OBC ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಎಲ್ಲಾ ಸುತ್ತೋಲೆಗಳು ನಮ್ಮ ಬಳಿ ಇವೆ. ಸರಿಯಾದ ಸಮಯದಲ್ಲಿ ಇಲಾಖೆ ಮತ್ತು ಸರ್ಕಾರವು ಅದನ್ನು ಪರಿಶೀಲಿಸುತ್ತದೆ ಎಂದು ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯದಲ್ಲೂ ಧರ್ಮದ ಆಧಾರದಲ್ಲಿ ಮೀಸಲಾತಿ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಧರ್ಮದ ಆಧಾರದ ಮೇಲೆ ಯಾವುದೇ ಜಾತಿ, ಸಮುದಾಯ ಅಥವಾ ವರ್ಗಕ್ಕೆ ಮೀಸಲಾತಿ ನೀಡುವುದನ್ನು ಸಂವಿಧಾನದಡಿಯಲ್ಲಿ ನಿಷೇಧಿಸಲಾಗಿದೆ ಎಂದು ಪ್ರತಿಪಾದಿಸಿದ ಅವರು, ನಮಗೆ ಅದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇಲಾಖೆಯು ಆ ದೂರುಗಳನ್ನು ಪರಿಶೀಲಿಸುತ್ತಿದೆ. ಈ ಬಗ್ಗೆ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಾರೆ ರಾಜಸ್ಥಾನದಲ್ಲಿ ಶೇ. 64ರಷ್ಟು ಮೀಸಲಾತಿ ಇದೆ. OBCಗಳಿಗೆ ಶೇ. 21, ಎಸ್​ಸಿಗಳಿಗೆ ಶೇ. 16, ಎಸ್​ಟಿಗಳಿಗೆ ಶೇ. 12, ಹಿಂದುಳಿದ ವರ್ಗದವರಿಗೆ ಶೇ. 10ರಷ್ಟು ಮತ್ತು ಅತ್ಯಂತ ಹಿಂದುಳಿದ ವರ್ಗಗಳಿಗೆ ಶೇ. 5ರಷ್ಟು ಮೀಸಲಾತಿ ನೀಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ