AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್

ಕಾಂಗ್ರೆಸ್ ತನ್ನ ಕೀಳು ರಾಜಕಾರಣದ ಭಾಗವಾಗಿ 1997 ಮತ್ತು 2013ರ ನಡುವೆ ಒಬಿಸಿ ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಮೀಸಲಾತಿಯ ಪರಿಶೀಲನೆ ನಡೆಸಲಾಗುವುದು ಎಂದು ರಾಜಸ್ಥಾನದ ಬಿಜೆಪಿ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಒಬಿಸಿ ವರ್ಗದಡಿ ಮುಸ್ಲಿಮರಿಗೆ ನೀಡಿದ ಮೀಸಲಾತಿ ಪರಿಶೀಲಿಸುತ್ತೇವೆ; ಸಚಿವ ಅವಿನಾಶ್ ಗೆಹ್ಲೋಟ್
ಅವಿನಾಶ್ ಗೆಹ್ಲೋಟ್
ಸುಷ್ಮಾ ಚಕ್ರೆ
|

Updated on: May 25, 2024 | 6:48 PM

Share

ಜೈಪುರ: ರಾಜಸ್ಥಾನದ (Rajasthan) ಬಿಜೆಪಿ ಸರ್ಕಾರವು ಇತರ ಹಿಂದುಳಿದ ಜಾತಿಗಳ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ ಮೀಸಲಾತಿಯನ್ನು (Muslim Reservation) ಪರಿಶೀಲಿಸುತ್ತದೆ ಎಂದು ರಾಜಸ್ಥಾನದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

“ತನ್ನ ಕೆಳಮಟ್ಟದ ರಾಜಕೀಯದ ಭಾಗವಾಗಿ ಕಾಂಗ್ರೆಸ್ 1997 ಮತ್ತು 2013ರ ನಡುವೆ OBC ವರ್ಗದ ಅಡಿಯಲ್ಲಿ 14 ಮುಸ್ಲಿಂ ಜಾತಿಗಳಿಗೆ ಮೀಸಲಾತಿ ನೀಡಿದೆ. ಆ ಎಲ್ಲಾ ಸುತ್ತೋಲೆಗಳು ನಮ್ಮ ಬಳಿ ಇವೆ. ಸರಿಯಾದ ಸಮಯದಲ್ಲಿ ಇಲಾಖೆ ಮತ್ತು ಸರ್ಕಾರವು ಅದನ್ನು ಪರಿಶೀಲಿಸುತ್ತದೆ ಎಂದು ಅವಿನಾಶ್ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯದಲ್ಲೂ ಧರ್ಮದ ಆಧಾರದಲ್ಲಿ ಮೀಸಲಾತಿ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಧರ್ಮದ ಆಧಾರದ ಮೇಲೆ ಯಾವುದೇ ಜಾತಿ, ಸಮುದಾಯ ಅಥವಾ ವರ್ಗಕ್ಕೆ ಮೀಸಲಾತಿ ನೀಡುವುದನ್ನು ಸಂವಿಧಾನದಡಿಯಲ್ಲಿ ನಿಷೇಧಿಸಲಾಗಿದೆ ಎಂದು ಪ್ರತಿಪಾದಿಸಿದ ಅವರು, ನಮಗೆ ಅದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇಲಾಖೆಯು ಆ ದೂರುಗಳನ್ನು ಪರಿಶೀಲಿಸುತ್ತಿದೆ. ಈ ಬಗ್ಗೆ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಾರೆ ರಾಜಸ್ಥಾನದಲ್ಲಿ ಶೇ. 64ರಷ್ಟು ಮೀಸಲಾತಿ ಇದೆ. OBCಗಳಿಗೆ ಶೇ. 21, ಎಸ್​ಸಿಗಳಿಗೆ ಶೇ. 16, ಎಸ್​ಟಿಗಳಿಗೆ ಶೇ. 12, ಹಿಂದುಳಿದ ವರ್ಗದವರಿಗೆ ಶೇ. 10ರಷ್ಟು ಮತ್ತು ಅತ್ಯಂತ ಹಿಂದುಳಿದ ವರ್ಗಗಳಿಗೆ ಶೇ. 5ರಷ್ಟು ಮೀಸಲಾತಿ ನೀಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!