AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಜೂ.1ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಅಲೋಪಥಿಕ್​ ವೈದ್ಯರ ನಿರ್ಧಾರ

ಅಲೋಪಥಿಕ್​ ಬಗ್ಗೆ ಅವಹೇಳನ ಮಾಡಿದ ಬಾಬಾ ರಾಮ್​ ದೇವ್​ ಅವರು ಬೇಷರತ್ತು ಕ್ಷಮೆ ಕೇಳಬೇಕು ಎಂದೂ ರೆಸಿಡೆಂಟ್ ವೈದ್ಯರ ಸಂಘಗಳ ಒಕ್ಕೂಟ ​ಒತ್ತಾಯಿಸಿದೆ.

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಜೂ.1ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಅಲೋಪಥಿಕ್​ ವೈದ್ಯರ ನಿರ್ಧಾರ
ಯೋಗ ಗುರು ಬಾಬಾ ರಾಮ್​ದೇವ್​
Lakshmi Hegde
|

Updated on: May 29, 2021 | 10:18 PM

Share

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ ಯೋಗ ಗುರು ಬಾಬಾ ರಾಮ್​ ದೇವ್​ ವಿರುದ್ಧ ತಿರುಗಿಬಿದ್ದಿದೆ. ದೆಹಲಿಯ ಠಾಣೆಯೊಂದರಲ್ಲಿ ಎಫ್​ಐಆರ್​ ಕೂಡ ದಾಖಲಾಗಿದೆ. ಅಷ್ಟೇ ಅಲ್ಲ, ಬಾಬಾ ರಾಮ್​ ದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದೆ.

ಇಷ್ಟೆಲ್ಲ ಆದ ಮೇಲೆ ದೇಶಾದ್ಯಂತ ಎಲ್ಲಕಡೆ ಅಲೋಪಥಿಕ್​ ವಿವಿಧ ವಿಭಾಗದಲ್ಲಿ ತರಬೇತಿ ಪಡೆಯುತ್ತಿರುವ ವೈದ್ಯರು (Resident doctors) ಜೂ.1ರಂದು ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಅಲ್ಲದೆ, ಆ ದಿನವನ್ನು ಕರಾಳ ದಿನ ಎಂದು ಪರಿಗಣಿಸುವುದಾಗಿಯೂ ವೈದ್ಯರ ಸಂಘಟನೆಯಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದೆ.

ಬಾಬಾ ರಾಮ್​ ದೇವ್​ ಅವರು ಬೇಷರತ್ತು ಕ್ಷಮೆ ಕೇಳಬೇಕು ಎಂದೂ ರೆಸಿಡೆಂಟ್ ವೈದ್ಯರ ಸಂಘಗಳ ಒಕ್ಕೂಟ ​ಒತ್ತಾಯಿಸಿದೆ. ಈ ವಿವಾದ ಶುರುವಾಗಿದ್ದು ಬಾಬಾ ರಾಮ್​ದೇವ್ ಅವರ ವಿಡಿಯೋವೊಂದು ವೈರಲ್​ ಆದ ಬಳಿಕ. ಅಲೋಪಥಿಕ್ ವೈದ್ಯಕೀಯ ಪದ್ಧತಿ ಒಂದು ಮೂರ್ಖ ಪದ್ಧತಿ. ಈ ಔಷಧಿ ತೆಗೆದುಕೊಂಡು ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ ಎಂದು ಬಾಬಾ ರಾಮ್​ ದೇವ್​ ಹೇಳಿದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಭಾರತೀಯ ವೈದ್ಯಕೀಯ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪತಂಜಲಿ ಯೋಗ ಟ್ರಸ್ಟ್​ ಸ್ಪಷ್ಟನೆ ನೀಡಿದ್ದರೂ ವೈದ್ಯರು ಅದನ್ನು ಒಪ್ಪುತ್ತಿಲ್ಲ. ಜನರಲ್ಲಿ ತಪ್ಪು ಕಲ್ಪನೆ ಬಿತ್ತುತ್ತಿದ್ದಾರೆ. ಅಲೋಪಥಿಕ್​ನ್ನು ಅಗೌರವಿಸುತ್ತಿದ್ದಾರೆ ಎಂದು ಐಎಂಎ ಆರೋಪಿಸಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ