AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಜೂ.1ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಅಲೋಪಥಿಕ್​ ವೈದ್ಯರ ನಿರ್ಧಾರ

ಅಲೋಪಥಿಕ್​ ಬಗ್ಗೆ ಅವಹೇಳನ ಮಾಡಿದ ಬಾಬಾ ರಾಮ್​ ದೇವ್​ ಅವರು ಬೇಷರತ್ತು ಕ್ಷಮೆ ಕೇಳಬೇಕು ಎಂದೂ ರೆಸಿಡೆಂಟ್ ವೈದ್ಯರ ಸಂಘಗಳ ಒಕ್ಕೂಟ ​ಒತ್ತಾಯಿಸಿದೆ.

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಜೂ.1ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಅಲೋಪಥಿಕ್​ ವೈದ್ಯರ ನಿರ್ಧಾರ
ಯೋಗ ಗುರು ಬಾಬಾ ರಾಮ್​ದೇವ್​
Lakshmi Hegde
|

Updated on: May 29, 2021 | 10:18 PM

Share

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ ಯೋಗ ಗುರು ಬಾಬಾ ರಾಮ್​ ದೇವ್​ ವಿರುದ್ಧ ತಿರುಗಿಬಿದ್ದಿದೆ. ದೆಹಲಿಯ ಠಾಣೆಯೊಂದರಲ್ಲಿ ಎಫ್​ಐಆರ್​ ಕೂಡ ದಾಖಲಾಗಿದೆ. ಅಷ್ಟೇ ಅಲ್ಲ, ಬಾಬಾ ರಾಮ್​ ದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದೆ.

ಇಷ್ಟೆಲ್ಲ ಆದ ಮೇಲೆ ದೇಶಾದ್ಯಂತ ಎಲ್ಲಕಡೆ ಅಲೋಪಥಿಕ್​ ವಿವಿಧ ವಿಭಾಗದಲ್ಲಿ ತರಬೇತಿ ಪಡೆಯುತ್ತಿರುವ ವೈದ್ಯರು (Resident doctors) ಜೂ.1ರಂದು ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಅಲ್ಲದೆ, ಆ ದಿನವನ್ನು ಕರಾಳ ದಿನ ಎಂದು ಪರಿಗಣಿಸುವುದಾಗಿಯೂ ವೈದ್ಯರ ಸಂಘಟನೆಯಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದೆ.

ಬಾಬಾ ರಾಮ್​ ದೇವ್​ ಅವರು ಬೇಷರತ್ತು ಕ್ಷಮೆ ಕೇಳಬೇಕು ಎಂದೂ ರೆಸಿಡೆಂಟ್ ವೈದ್ಯರ ಸಂಘಗಳ ಒಕ್ಕೂಟ ​ಒತ್ತಾಯಿಸಿದೆ. ಈ ವಿವಾದ ಶುರುವಾಗಿದ್ದು ಬಾಬಾ ರಾಮ್​ದೇವ್ ಅವರ ವಿಡಿಯೋವೊಂದು ವೈರಲ್​ ಆದ ಬಳಿಕ. ಅಲೋಪಥಿಕ್ ವೈದ್ಯಕೀಯ ಪದ್ಧತಿ ಒಂದು ಮೂರ್ಖ ಪದ್ಧತಿ. ಈ ಔಷಧಿ ತೆಗೆದುಕೊಂಡು ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ ಎಂದು ಬಾಬಾ ರಾಮ್​ ದೇವ್​ ಹೇಳಿದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಭಾರತೀಯ ವೈದ್ಯಕೀಯ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪತಂಜಲಿ ಯೋಗ ಟ್ರಸ್ಟ್​ ಸ್ಪಷ್ಟನೆ ನೀಡಿದ್ದರೂ ವೈದ್ಯರು ಅದನ್ನು ಒಪ್ಪುತ್ತಿಲ್ಲ. ಜನರಲ್ಲಿ ತಪ್ಪು ಕಲ್ಪನೆ ಬಿತ್ತುತ್ತಿದ್ದಾರೆ. ಅಲೋಪಥಿಕ್​ನ್ನು ಅಗೌರವಿಸುತ್ತಿದ್ದಾರೆ ಎಂದು ಐಎಂಎ ಆರೋಪಿಸಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

Follow Us
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ